ಬಿಡುಗಡೆಗೆ ಸಜ್ಜಾಗಿರುವ ತಮ್ಮ ‘ಶಾಕುಂತಲಂ’ ಚಿತ್ರದ ಕುರಿತು ನಟಿ ಸಮಂತಾ ರುತು ಪ್ರಭು ಅವರು ಟ್ವೀಟರ್ನಲ್ಲಿ ಅಭಿಮಾನಿಗಳಿಂದ ಪ್ರಶ್ನೆಗಳನ್ನು ಆಹ್ವಾನಿಸಿದ್ದಾರೆ. ಈ ವೇಳೆ, ತಮ್ಮ ಬದುಕಿನ ಸವಾಲುಗಳನ್ನು ಎದುರಿಸಿ ಯಶಸ್ಸು ಕಾಣುತ್ತಿರುವ ಬಗ್ಗೆ ಅಭಿಮಾನಿಯೊಬ್ಬರ ಪ್ರಶ್ನೆಗೆ ಉತ್ತರ ನೀಡಿದ ಸಮಂತಾ, ‘ನನ್ನ ಬದುಕಿನ ಕಥೆ ಹೀಗೆ ಮುಗಿಯಬಾರದು ಎಂದು ನಿರ್ಧರಿಸಿದ್ದೇನೆ’ ಎಂದು ಪ್ರತಿಕ್ರಿಯಿಸಿದ್ದು, ಪರೋಕ್ಷವಾಗಿ ಪೌರಾಣಿಕ ಕಥೆಯ ಪಾತ್ರಧಾರಿ ಶಾಕುಂತಲಾ ಹಾಗೆ ಜೀವನ ಮುಗಿಯಬಾರದು ಎಂದು ಉತ್ತರಿಸಿದ್ದಾರೆ.
ಭಾನುವಾರ ತಮ್ಮ ಟ್ವೀಟರ್ ಹ್ಯಾಂಡಲ್ನಲ್ಲಿ ‘ಆಸ್ಕ್ ಸ್ಯಾಮ್’ ಎಂದು ಪ್ರಶ್ನೆಗಳನ್ನು ಆಹ್ವಾನಿಸಿದ್ದರು. ಕೆಲಹೊತ್ತಿನಲ್ಲೇ ಅಭಿಮಾನಿಗಳು ಪ್ರಶ್ನೆಗಳ ಸುರಿಮಳೆಗರೆದರು. ಈ ನಡುವೆಯೇ ಒಬ್ಬರು, ‘ಹಲವಾರು ಸಂಕಷ್ಟಗಳನ್ನು ಎದುರಿಸಿಯೂ ನೀವು ಹೇಗೆ ಸಮರ್ಥವಾಗಿ ಮುಂದೆ ಸಾಗುತ್ತಿದ್ದೀರಿ? ಇಷ್ಟು ಶಕ್ತಿ ಸಾಮರ್ಥ್ಯ ಎಲ್ಲಿಂದ ದಕ್ಕಿತು?’ ಎಂದು ಪ್ರಶ್ನಿಸಿದ್ದಾರೆ.
ಇದಕ್ಕೆ ಪ್ರತಿಕ್ರಿಯಿಸಿದ ಸಮಂತಾ, ‘ಏಕೆಂದರೆ ನನ್ನ ಕಥೆ ಹೀಗೆ ಮುಗಿಯಬಾರದು ಎಂದು ನಿರ್ಧರಿಸಿದ್ದೇನೆ. #ಶಾಕುಂತಲಾ’ ಎಂದು ಬರೆದುಕೊಂಡಿದ್ದಾರೆ.
‘ಸೀತಾ ರಾಮನ್’ ಖ್ಯಾತಿಯ ಮೃಣಾಲ್ ಠಾಕೂರ್ ಕೂಡ ಸಮಂತಾಗೆ ಪ್ರಶ್ನೆ ಕೇಳಿದ್ದು ವಿಶೇಷವಾಗಿತ್ತು. ‘ನಾವಿಬ್ಬರು ಯಾವಾಗ ಒಂದೇ ಸಿನಿಮಾದಲ್ಲಿ ಕೆಲಸ ಮಾಡುತ್ತೇವೆ’ ಎಂದು ಪ್ರಶ್ನಿಸಿದ್ದಾರೆ. ಮೃಣಾಲ್ ಮುಂದಿನ ಸಿನಿಮಾ ಗುಮ್ರಾಹ್ ಗೆ ಶುಭ ಕೋರಿ ಪ್ರತಿಕ್ರಿಯಿಸಿದ ಸಮಂತಾ, ‘ಈ ಯೋಚನೆ ಇಷ್ಟವಾಯಿತು. ಜೊತೆಗೆ ಕೆಲಸ ಮಾಡೋಣ’ ಎಂದಿದ್ದಾರೆ.
ಸಮಂತಾ ಹಾಗೂ ದೇವ್ ಮೋಹನ್ ನಟನೆಯ ಶಾಕುಂತಲಾ ಏ.14ರಂದು ಬಿಡುಗಡೆಯಾಗಲಿದೆ.
ಚಾಮರಾಜನಗರ: ತಾಲ್ಲೂಕಿನ ವೀರನಪುರ ಸಮೀಪವಿರುವ ಕರಿಕಲ್ಲು ಕ್ವಾರಿಯೊಂದರಲ್ಲಿ ಟಿಪ್ಪರ್ ಮಗುಚಿ ಬಿದ್ದ ಪರಿಣಾಮ ಚಾಲಕ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ನಡೆದಿದೆ.…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬಂಜಾರ ಸಮುದಾಯದ ಜನತೆಗೆ ಒಳ ಮೀಸಲಾತಿಯಲ್ಲಿ ಆಗಿರುವ ಅನ್ಯಾಯದ ಬಗ್ಗೆ…
ಹುಬ್ಬಳ್ಳಿ: ಹನ್ನೊಂದು ವರ್ಷಗಳ ಬಳಿಕ ಚಾಂಪಿಯನ್ ಪಟ್ಟಕ್ಕೇರುವ ಕರ್ನಾಟಕದ ಕನಸು ನನಸಾಗಲಿಲ್ಲ. ಇದೇ ಮೊದಲ ಬಾರಿಗೆ ಫೈನಲ್ಗೆ ಬಂದು, ಜಮ್ಮು-ಕಾಶ್ಮೀರ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹನೂರು ತಾಲೂಕು ಕೇಂದ್ರದಲ್ಲಿ ವಿಭಾಗಿಯ ಮಟ್ಟದ ಸೇವಾಲಾಲ್ ಜಯಂತಿ ಕಾರ್ಯಕ್ರಮವನ್ನು…
ಬೆಂಗಳೂರು: ಹಣೆ ಬರಹದಲ್ಲಿ ಬರೆದಿದ್ದರೆ ನನ್ನ ಅಣ್ಣ ಸಿಎಂ ಆಗುತ್ತಾರೆ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ಹೇಳಿಕೆ ನೀಡಿದ್ದಾರೆ. ಈ…
ಹೇಮಂತ್ಕುಮಾರ್ ಮಂಡ್ಯ: ನಗರದ ಹಲವಾರು ಬಡಾವಣೆಗಳಲ್ಲಿನ ರಸ್ತೆಗಳು ಸಾರ್ವಜನಿಕ ಮೂತ್ರಾಲಯವಾಗಿ ಮೂಗುಮುಚ್ಚಿಕೊಂಡು ಸಂಚರಿಸಬೇಕಾದ ಪರಿಸ್ಥಿತಿಯನ್ನು ಕಾಣುತ್ತಿದ್ದೇವೆ. ಎಲ್ಲೆಂದರಲ್ಲಿ ಕಸ ಎರಚಾಡುತ್ತ…