ಚಿತ್ರ ಮಂಜರಿ

ನನ್ನ ಬದುಕಿನ ಕಥೆ ಹೀಗೆ ಮುಗಿಯಬಾರದು ಎಂದು ನಿರ್ಧರಿಸಿದ್ದೇನೆ : ನಟಿ ಸಮಂತಾ

ಬಿಡುಗಡೆಗೆ ಸಜ್ಜಾಗಿರುವ ತಮ್ಮ ‘ಶಾಕುಂತಲಂ’ ಚಿತ್ರದ ಕುರಿತು ನಟಿ ಸಮಂತಾ ರುತು ಪ್ರಭು ಅವರು ಟ್ವೀಟರ್‌ನಲ್ಲಿ ಅಭಿಮಾನಿಗಳಿಂದ ಪ್ರಶ್ನೆಗಳನ್ನು ಆಹ್ವಾನಿಸಿದ್ದಾರೆ. ಈ ವೇಳೆ, ತಮ್ಮ ಬದುಕಿನ ಸವಾಲುಗಳನ್ನು ಎದುರಿಸಿ ಯಶಸ್ಸು ಕಾಣುತ್ತಿರುವ ಬಗ್ಗೆ ಅಭಿಮಾನಿಯೊಬ್ಬರ ಪ್ರಶ್ನೆಗೆ ಉತ್ತರ ನೀಡಿದ ಸಮಂತಾ, ‘ನನ್ನ ಬದುಕಿನ ಕಥೆ ಹೀಗೆ ಮುಗಿಯಬಾರದು ಎಂದು ನಿರ್ಧರಿಸಿದ್ದೇನೆ’ ಎಂದು ಪ್ರತಿಕ್ರಿಯಿಸಿದ್ದು, ಪರೋಕ್ಷವಾಗಿ ಪೌರಾಣಿಕ ಕಥೆಯ ಪಾತ್ರಧಾರಿ ಶಾಕುಂತಲಾ ಹಾಗೆ ಜೀವನ ಮುಗಿಯಬಾರದು ಎಂದು ಉತ್ತರಿಸಿದ್ದಾರೆ.

ಭಾನುವಾರ ತಮ್ಮ ಟ್ವೀಟರ್ ಹ್ಯಾಂಡಲ್‌ನಲ್ಲಿ ‘ಆಸ್ಕ್ ಸ್ಯಾಮ್’ ಎಂದು ಪ್ರಶ್ನೆಗಳನ್ನು ಆಹ್ವಾನಿಸಿದ್ದರು. ಕೆಲಹೊತ್ತಿನಲ್ಲೇ ಅಭಿಮಾನಿಗಳು ಪ್ರಶ್ನೆಗಳ ಸುರಿಮಳೆಗರೆದರು. ಈ ನಡುವೆಯೇ ಒಬ್ಬರು, ‘ಹಲವಾರು ಸಂಕಷ್ಟಗಳನ್ನು ಎದುರಿಸಿಯೂ ನೀವು ಹೇಗೆ ಸಮರ್ಥವಾಗಿ ಮುಂದೆ ಸಾಗುತ್ತಿದ್ದೀರಿ? ಇಷ್ಟು ಶಕ್ತಿ ಸಾಮರ್ಥ್ಯ ಎಲ್ಲಿಂದ ದಕ್ಕಿತು?’ ಎಂದು ಪ್ರಶ್ನಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ಸಮಂತಾ, ‘ಏಕೆಂದರೆ ನನ್ನ ಕಥೆ ಹೀಗೆ ಮುಗಿಯಬಾರದು ಎಂದು ನಿರ್ಧರಿಸಿದ್ದೇನೆ. #ಶಾಕುಂತಲಾ’ ಎಂದು ಬರೆದುಕೊಂಡಿದ್ದಾರೆ.

‘ಸೀತಾ ರಾಮನ್’ ಖ್ಯಾತಿಯ ಮೃಣಾಲ್ ಠಾಕೂರ್ ಕೂಡ ಸಮಂತಾಗೆ ಪ್ರಶ್ನೆ ಕೇಳಿದ್ದು ವಿಶೇಷವಾಗಿತ್ತು. ‘ನಾವಿಬ್ಬರು ಯಾವಾಗ ಒಂದೇ ಸಿನಿಮಾದಲ್ಲಿ ಕೆಲಸ ಮಾಡುತ್ತೇವೆ’ ಎಂದು ಪ್ರಶ್ನಿಸಿದ್ದಾರೆ. ಮೃಣಾಲ್ ಮುಂದಿನ ಸಿನಿಮಾ ಗುಮ್ರಾಹ್ ಗೆ ಶುಭ ಕೋರಿ ಪ್ರತಿಕ್ರಿಯಿಸಿದ ಸಮಂತಾ, ‘ಈ ಯೋಚನೆ ಇಷ್ಟವಾಯಿತು. ಜೊತೆಗೆ ಕೆಲಸ ಮಾಡೋಣ’ ಎಂದಿದ್ದಾರೆ.

ಸಮಂತಾ ಹಾಗೂ ದೇವ್ ಮೋಹನ್ ನಟನೆಯ ಶಾಕುಂತಲಾ ಏ.14ರಂದು ಬಿಡುಗಡೆಯಾಗಲಿದೆ.

andolanait

Recent Posts

ಕಾವೇರಿ ಕೊಳ್ಳದ ರೈತರಿಗೆ 4 ಕಟ್ಟು ನೀರು ; ಕಾವೇರಿ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಬೆಂಗಳೂರು : ಮುಂಗಾರು ಮಳೆ ಕೊರತೆ ಮತ್ತು ಕಾವೇರಿ ಜಲಾನಯನ ಪ್ರದೇಶದಲ್ಲಿ ಜಲಾಶಯಗಳಿಗೆ ನಿರೀಕ್ಷಿತ ಪ್ರಮಾಣದಲ್ಲಿ ನೀರು ಹರಿದುಬಾರದ ಹಿನ್ನೆಲೆಯಲ್ಲಿ,…

4 hours ago

ಮೈಸೂರು | ಭಾರತ್ ಜೋಡೋ ನೋಂದಣಿಗೆ ಚಾಲನೆ

ಮೈಸೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಮುಖ್ಯಮಂತ್ರಿಯವರು ಯುವ ಶಕ್ತಿ ರಾಷ್ಟ್ರ ಶಕ್ತಿ ಎಂಬ ಶೀರ್ಷಿಕೆಯಡಿ ಭಾರತ್…

4 hours ago

ಎಂಡಿಎ ಬದಲಿ ನಿವೇಶನ ಹಂಚಿಕೆ ರದ್ದುಪಡಿಸಿ ಸರ್ಕಾರ ಆದೇಶ

ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (MDA) ನಿಯಮಗಳನ್ನು ಉಲ್ಲಂಘಿಸಿ ಮಾಡಲಾಗಿರುವ 50:50 ಬದಲಿ ನಿವೇಶನಗಳ ಹಂಚಿಕೆಗೆ ಸಂಬಂಧಿಸಿದಂತೆ ಏಕಸದಸ್ಯ…

5 hours ago

ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕುಷ ತನಿಖೆ : ಸಿ.ಎಂ ಡಿ.ಕೆ.ಶಿವಕುಮಾರ್*

ಬೆಂಗಳೂರು : ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ…

8 hours ago

ಕ್ಯಾಪ್ಟನ್ ಅಭಿಮನ್ಯು ಆನೆಗೆ ರಾಜೋಚಿತ ಬೀಳ್ಕೊಡುಗೆ ನೀಡಿ : ಸಚಿವ ಖಂಡ್ರೆ

ಬೆಂಗಳೂರು : ಆರು ಬಾರಿ ಚಿನ್ನದಂಬಾರಿ ಹೊತ್ತ 60 ವರ್ಷದ ಕ್ಯಾಪ್ಟನ್ ಅರ್ಜುನ ಆನೆಗೆ ಈ ಬಾರಿ ದಸರಾ ಜಂಬೂಸವಾರಿಯಲ್ಲಿ…

10 hours ago

ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕುಷ ತನಿಖೆ: ಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು: ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ ಡಿ…

11 hours ago