ಚಿತ್ರ ಮಂಜರಿ

ಮಹಿಳೆಯರಿಗೆ ಪ್ರಾತಿನಿಧ್ಯವನ್ನು ನೀಡುವ ದಿನವನ್ನು ನಾನು ಎದುರು ನೋಡುತ್ತಿದ್ದೇನೆ: ಕಮಲ್‌ ಹಾಸನ್‌

ನವದೆಹಲಿ : ಶಾಸನ ಸಭೆಗಳಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಒದಗಿಸುವ ನಾರಿಶಕ್ತಿ ವಂದನಾ ಅನಿಯಮಂ ವಿಧೇಯಕ ಮಂಡಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ದಕ್ಷಿಣ ಭಾರತದ ಸೂಪರ್ ಸ್ಟಾರ್ ಕಮಲಹಾಸನ್ ಹಾಡಿ ಹೊಗಳಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‍ನಲ್ಲಿ ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿರುವ ಕಮಲಹಾಸನ್, ಆದಷ್ಟು ಶೀಘ್ರ ಮಸೂದೆಯನ್ನು ಸಂಸತ್‍ನ ಉಭಯ ಸದನಗಳಲ್ಲಿ ಬಹುಮತದಿಂದ ಅಂಗೀಕರಿಸಿ ವಿಧಾನಸಭೆಗೂ ವಿಸ್ತರಣೆ ಮಾಡಬೇಕೆಂದು ಮನವಿ ಮಾಡಿದ್ದಾರೆ.

ಮುಂದಿನ ಜನಗಣತಿಯ ನಂತರ ಮಸೂದೆ ಜಾರಿ ಬರುವುದಕ್ಕೆ ಅಸಮಾಧಾನ ಹೊರಹಾಕಿದ್ದು, ಇದರಿಂದ ವಿಳಂಬವಾಗುತ್ತದೆ. ಗಣರಾಜ್ಯದ ಇತಿಹಾಸದಲ್ಲಿ ಇದೊಂದು ಹೆಗ್ಗುರುತು ದಿನವಾಗಿದೆ. ಅಲ್ಪಸಂಖ್ಯಾತ ಭಾರತದ ಮಹಿಳೆಯರ ವಿರುದ್ಧದ ದೀರ್ಘಕಾಲದ ಅನ್ಯಾಯ ಸರಿಪಡಿಸಲಾಗಿದೆ ಎಂದು ಕೊಂಡಾಡಿದ್ದಾರೆ.

ನಮ್ಮ ಗಣರಾಜ್ಯದ ಇತಿಹಾಸದಲ್ಲಿ ಒಂದು ಹೆಗ್ಗುರುತು ದಿನವಾಗಿದೆ. ನಮ್ಮ ಪ್ರಜಾಪ್ರಭುತ್ವದ ಸ್ಥಾನವು ಅದರ ಹೊಸ ಮನೆ(ಸಂಸತ್)ಗೆ ಸ್ಥಳಾಂತರಗೊಂಡಿತು. ಈ ಹೊಸ ಸಂಸತ್‍ನಲ್ಲಿ ಮಂಡಿಸಲಾದ ಮೊದಲ ಮಸೂದೆಯು ನಮ್ಮ ರಾಷ್ಟ್ರದ ಅತಿ ದೊಡ್ಡ ಅಲ್ಪಸಂಖ್ಯಾತರಾದ ಭಾರತದ ಮಹಿಳೆಯರ ವಿರುದ್ಧದ ದೀರ್ಘಕಾಲದ ಅನ್ಯಾಯವನ್ನು ಸರಿಪಡಿಸಿದೆ ಎಂದು ನಾನು ಸಂತೋಷಪಡುತ್ತೇನೆ. ನಿನ್ನೆ ಮಂಡಿಸಲಾದ ಮಹಿಳಾ ಮೀಸಲಾತಿ ಮಸೂದೆಯನ್ನು ನಾನು ಹೃತ್ಪೂರ್ವಕವಾಗಿ ಶ್ಲಾಘಿಸುತ್ತೇನೆ.

ಲಿಂಗ ಸಮಾನತೆಯನ್ನು ಖಾತ್ರಿಪಡಿಸುವ ರಾಷ್ಟ್ರಗಳು ಯಾವಾಗಲೂ ಏಳಿಗೆ ಹೊಂದುತ್ತವೆ. ಮಸೂದೆಯ ಮೇಲಿನ ಸಂಸತ್‍ನ ಚರ್ಚೆಯ ಸಮಯದಲ್ಲಿ ಈ ಕೆಳಗಿನ ಕಾಳಜಿಗಳನ್ನು ಸರಿಪಡಿಸಲು ನಾನು ಎಲ್ಲ ಪಕ್ಷಗಳಿಗೆ ಕರೆ ನೀಡುತ್ತೇನೆ. ಮೊದಲನೆಯದಾಗಿ ಮುಂದಿನ ಜನಗಣತಿ ಮತ್ತು ಡಿಲಿಮಿಟೇಶನ್ ನಂತರವೇ ಮಸೂದೆ ಜಾರಿಗೆ ಬರುತ್ತದೆ. ಇವೆರಡೂ ಈ ಹಿಂದೆಯೇ ವಿಳಂಬವಾಗಿವೆ. ಹೀಗಾಗಿ ಇಂತಹ ವಿಳಂಬ ಸಮಯವೂ ಮಹತ್ವದ ನಿರ್ಧಾರದ ಬಗ್ಗೆ ಕೇವಲ ಮಾತಿಗೆ ಸೀಮಿತವಾಗುವಂತೆ ಮಾಡುವ ಸಾಧ್ಯತೆ ಇದೆ. ಆದ್ದರಿಂದ ಇದನ್ನು ತೆಗೆದುಹಾಕಬೇಕು ಎಂದಿದ್ದಾರೆ.

ಎರಡನೆಯದಾಗಿ ಮಸೂದೆಯು ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಿಗೆ ಮಾತ್ರ ಅನ್ವಯಿಸುತ್ತದೆ ಮತ್ತು ರಾಜ್ಯಸಭೆ ಮತ್ತು ರಾಜ್ಯ ವಿಧಾನ ಪರಿಷತ್ತುಗಳಿಗೆ ವಿಸ್ತರಿಸಬೇಕು. ಯಾವುದೇ ದೃಢೀಕರಣದ ನೆರವು ಇಲ್ಲದೆ ಶಾಸಕಾಂಗ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಅನುಪಾತದ ಪ್ರಾತಿನಿಧ್ಯವನ್ನು ನೀಡುವ ದಿನವನ್ನು ನಾನು ಎದುರು ನೋಡುತ್ತಿದ್ದೇನೆ ಎಂದು ಕಮಲ್ ಹಾಸನ್ ಹೇಳಿದ್ದಾರೆ.

andolanait

Recent Posts

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…

6 hours ago

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

7 hours ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

8 hours ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

8 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

9 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

10 hours ago