ಚಿತ್ರ ಮಂಜರಿ

ಮಹಿಳೆಯರಿಗೆ ಪ್ರಾತಿನಿಧ್ಯವನ್ನು ನೀಡುವ ದಿನವನ್ನು ನಾನು ಎದುರು ನೋಡುತ್ತಿದ್ದೇನೆ: ಕಮಲ್‌ ಹಾಸನ್‌

ನವದೆಹಲಿ : ಶಾಸನ ಸಭೆಗಳಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಒದಗಿಸುವ ನಾರಿಶಕ್ತಿ ವಂದನಾ ಅನಿಯಮಂ ವಿಧೇಯಕ ಮಂಡಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ದಕ್ಷಿಣ ಭಾರತದ ಸೂಪರ್ ಸ್ಟಾರ್ ಕಮಲಹಾಸನ್ ಹಾಡಿ ಹೊಗಳಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‍ನಲ್ಲಿ ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿರುವ ಕಮಲಹಾಸನ್, ಆದಷ್ಟು ಶೀಘ್ರ ಮಸೂದೆಯನ್ನು ಸಂಸತ್‍ನ ಉಭಯ ಸದನಗಳಲ್ಲಿ ಬಹುಮತದಿಂದ ಅಂಗೀಕರಿಸಿ ವಿಧಾನಸಭೆಗೂ ವಿಸ್ತರಣೆ ಮಾಡಬೇಕೆಂದು ಮನವಿ ಮಾಡಿದ್ದಾರೆ.

ಮುಂದಿನ ಜನಗಣತಿಯ ನಂತರ ಮಸೂದೆ ಜಾರಿ ಬರುವುದಕ್ಕೆ ಅಸಮಾಧಾನ ಹೊರಹಾಕಿದ್ದು, ಇದರಿಂದ ವಿಳಂಬವಾಗುತ್ತದೆ. ಗಣರಾಜ್ಯದ ಇತಿಹಾಸದಲ್ಲಿ ಇದೊಂದು ಹೆಗ್ಗುರುತು ದಿನವಾಗಿದೆ. ಅಲ್ಪಸಂಖ್ಯಾತ ಭಾರತದ ಮಹಿಳೆಯರ ವಿರುದ್ಧದ ದೀರ್ಘಕಾಲದ ಅನ್ಯಾಯ ಸರಿಪಡಿಸಲಾಗಿದೆ ಎಂದು ಕೊಂಡಾಡಿದ್ದಾರೆ.

ನಮ್ಮ ಗಣರಾಜ್ಯದ ಇತಿಹಾಸದಲ್ಲಿ ಒಂದು ಹೆಗ್ಗುರುತು ದಿನವಾಗಿದೆ. ನಮ್ಮ ಪ್ರಜಾಪ್ರಭುತ್ವದ ಸ್ಥಾನವು ಅದರ ಹೊಸ ಮನೆ(ಸಂಸತ್)ಗೆ ಸ್ಥಳಾಂತರಗೊಂಡಿತು. ಈ ಹೊಸ ಸಂಸತ್‍ನಲ್ಲಿ ಮಂಡಿಸಲಾದ ಮೊದಲ ಮಸೂದೆಯು ನಮ್ಮ ರಾಷ್ಟ್ರದ ಅತಿ ದೊಡ್ಡ ಅಲ್ಪಸಂಖ್ಯಾತರಾದ ಭಾರತದ ಮಹಿಳೆಯರ ವಿರುದ್ಧದ ದೀರ್ಘಕಾಲದ ಅನ್ಯಾಯವನ್ನು ಸರಿಪಡಿಸಿದೆ ಎಂದು ನಾನು ಸಂತೋಷಪಡುತ್ತೇನೆ. ನಿನ್ನೆ ಮಂಡಿಸಲಾದ ಮಹಿಳಾ ಮೀಸಲಾತಿ ಮಸೂದೆಯನ್ನು ನಾನು ಹೃತ್ಪೂರ್ವಕವಾಗಿ ಶ್ಲಾಘಿಸುತ್ತೇನೆ.

ಲಿಂಗ ಸಮಾನತೆಯನ್ನು ಖಾತ್ರಿಪಡಿಸುವ ರಾಷ್ಟ್ರಗಳು ಯಾವಾಗಲೂ ಏಳಿಗೆ ಹೊಂದುತ್ತವೆ. ಮಸೂದೆಯ ಮೇಲಿನ ಸಂಸತ್‍ನ ಚರ್ಚೆಯ ಸಮಯದಲ್ಲಿ ಈ ಕೆಳಗಿನ ಕಾಳಜಿಗಳನ್ನು ಸರಿಪಡಿಸಲು ನಾನು ಎಲ್ಲ ಪಕ್ಷಗಳಿಗೆ ಕರೆ ನೀಡುತ್ತೇನೆ. ಮೊದಲನೆಯದಾಗಿ ಮುಂದಿನ ಜನಗಣತಿ ಮತ್ತು ಡಿಲಿಮಿಟೇಶನ್ ನಂತರವೇ ಮಸೂದೆ ಜಾರಿಗೆ ಬರುತ್ತದೆ. ಇವೆರಡೂ ಈ ಹಿಂದೆಯೇ ವಿಳಂಬವಾಗಿವೆ. ಹೀಗಾಗಿ ಇಂತಹ ವಿಳಂಬ ಸಮಯವೂ ಮಹತ್ವದ ನಿರ್ಧಾರದ ಬಗ್ಗೆ ಕೇವಲ ಮಾತಿಗೆ ಸೀಮಿತವಾಗುವಂತೆ ಮಾಡುವ ಸಾಧ್ಯತೆ ಇದೆ. ಆದ್ದರಿಂದ ಇದನ್ನು ತೆಗೆದುಹಾಕಬೇಕು ಎಂದಿದ್ದಾರೆ.

ಎರಡನೆಯದಾಗಿ ಮಸೂದೆಯು ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಿಗೆ ಮಾತ್ರ ಅನ್ವಯಿಸುತ್ತದೆ ಮತ್ತು ರಾಜ್ಯಸಭೆ ಮತ್ತು ರಾಜ್ಯ ವಿಧಾನ ಪರಿಷತ್ತುಗಳಿಗೆ ವಿಸ್ತರಿಸಬೇಕು. ಯಾವುದೇ ದೃಢೀಕರಣದ ನೆರವು ಇಲ್ಲದೆ ಶಾಸಕಾಂಗ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಅನುಪಾತದ ಪ್ರಾತಿನಿಧ್ಯವನ್ನು ನೀಡುವ ದಿನವನ್ನು ನಾನು ಎದುರು ನೋಡುತ್ತಿದ್ದೇನೆ ಎಂದು ಕಮಲ್ ಹಾಸನ್ ಹೇಳಿದ್ದಾರೆ.

andolanait

Recent Posts

ಹಾರ್ಮುಜ್ ಮೇಲೆ ಅಮೆರಿಕ ಸಂಪೂರ್ಣ ಹಿಡಿತ ; ಟ್ರಂಪ್ ಹೇಳಿಕೆಯಿಂದ ವಾಸ್ತವ ಬದಲಾಗಲ್ಲ : ಇರಾನ್ ತಿರುಗೇಟು

ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…

37 mins ago

ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ ಪ್ರಕರಣ : ಡಿಐಜಿ ನೇತೃತ್ವದಲ್ಲಿ ತನಿಖೆ

ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…

2 hours ago

ಭಾಷಣ ಮಾಡಿದ ವೇದಿಕೆ ಸ್ಥಳದ ಶುದ್ಧೀಕರಣ : ಇದು ನನ್ನ ವಿರುದ್ಧ ತೋರಿದ ಅಸ್ಪೃಶ್ಯತೆ ; ಖರ್ಗೆ ಕಿಡಿ

ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…

3 hours ago

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

5 hours ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

11 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

17 hours ago