ಚಿತ್ರ ಮಂಜರಿ

ಮಹಿಳೆಯರಿಗೆ ಪ್ರಾತಿನಿಧ್ಯವನ್ನು ನೀಡುವ ದಿನವನ್ನು ನಾನು ಎದುರು ನೋಡುತ್ತಿದ್ದೇನೆ: ಕಮಲ್‌ ಹಾಸನ್‌

ನವದೆಹಲಿ : ಶಾಸನ ಸಭೆಗಳಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಒದಗಿಸುವ ನಾರಿಶಕ್ತಿ ವಂದನಾ ಅನಿಯಮಂ ವಿಧೇಯಕ ಮಂಡಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ದಕ್ಷಿಣ ಭಾರತದ ಸೂಪರ್ ಸ್ಟಾರ್ ಕಮಲಹಾಸನ್ ಹಾಡಿ ಹೊಗಳಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‍ನಲ್ಲಿ ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿರುವ ಕಮಲಹಾಸನ್, ಆದಷ್ಟು ಶೀಘ್ರ ಮಸೂದೆಯನ್ನು ಸಂಸತ್‍ನ ಉಭಯ ಸದನಗಳಲ್ಲಿ ಬಹುಮತದಿಂದ ಅಂಗೀಕರಿಸಿ ವಿಧಾನಸಭೆಗೂ ವಿಸ್ತರಣೆ ಮಾಡಬೇಕೆಂದು ಮನವಿ ಮಾಡಿದ್ದಾರೆ.

ಮುಂದಿನ ಜನಗಣತಿಯ ನಂತರ ಮಸೂದೆ ಜಾರಿ ಬರುವುದಕ್ಕೆ ಅಸಮಾಧಾನ ಹೊರಹಾಕಿದ್ದು, ಇದರಿಂದ ವಿಳಂಬವಾಗುತ್ತದೆ. ಗಣರಾಜ್ಯದ ಇತಿಹಾಸದಲ್ಲಿ ಇದೊಂದು ಹೆಗ್ಗುರುತು ದಿನವಾಗಿದೆ. ಅಲ್ಪಸಂಖ್ಯಾತ ಭಾರತದ ಮಹಿಳೆಯರ ವಿರುದ್ಧದ ದೀರ್ಘಕಾಲದ ಅನ್ಯಾಯ ಸರಿಪಡಿಸಲಾಗಿದೆ ಎಂದು ಕೊಂಡಾಡಿದ್ದಾರೆ.

ನಮ್ಮ ಗಣರಾಜ್ಯದ ಇತಿಹಾಸದಲ್ಲಿ ಒಂದು ಹೆಗ್ಗುರುತು ದಿನವಾಗಿದೆ. ನಮ್ಮ ಪ್ರಜಾಪ್ರಭುತ್ವದ ಸ್ಥಾನವು ಅದರ ಹೊಸ ಮನೆ(ಸಂಸತ್)ಗೆ ಸ್ಥಳಾಂತರಗೊಂಡಿತು. ಈ ಹೊಸ ಸಂಸತ್‍ನಲ್ಲಿ ಮಂಡಿಸಲಾದ ಮೊದಲ ಮಸೂದೆಯು ನಮ್ಮ ರಾಷ್ಟ್ರದ ಅತಿ ದೊಡ್ಡ ಅಲ್ಪಸಂಖ್ಯಾತರಾದ ಭಾರತದ ಮಹಿಳೆಯರ ವಿರುದ್ಧದ ದೀರ್ಘಕಾಲದ ಅನ್ಯಾಯವನ್ನು ಸರಿಪಡಿಸಿದೆ ಎಂದು ನಾನು ಸಂತೋಷಪಡುತ್ತೇನೆ. ನಿನ್ನೆ ಮಂಡಿಸಲಾದ ಮಹಿಳಾ ಮೀಸಲಾತಿ ಮಸೂದೆಯನ್ನು ನಾನು ಹೃತ್ಪೂರ್ವಕವಾಗಿ ಶ್ಲಾಘಿಸುತ್ತೇನೆ.

ಲಿಂಗ ಸಮಾನತೆಯನ್ನು ಖಾತ್ರಿಪಡಿಸುವ ರಾಷ್ಟ್ರಗಳು ಯಾವಾಗಲೂ ಏಳಿಗೆ ಹೊಂದುತ್ತವೆ. ಮಸೂದೆಯ ಮೇಲಿನ ಸಂಸತ್‍ನ ಚರ್ಚೆಯ ಸಮಯದಲ್ಲಿ ಈ ಕೆಳಗಿನ ಕಾಳಜಿಗಳನ್ನು ಸರಿಪಡಿಸಲು ನಾನು ಎಲ್ಲ ಪಕ್ಷಗಳಿಗೆ ಕರೆ ನೀಡುತ್ತೇನೆ. ಮೊದಲನೆಯದಾಗಿ ಮುಂದಿನ ಜನಗಣತಿ ಮತ್ತು ಡಿಲಿಮಿಟೇಶನ್ ನಂತರವೇ ಮಸೂದೆ ಜಾರಿಗೆ ಬರುತ್ತದೆ. ಇವೆರಡೂ ಈ ಹಿಂದೆಯೇ ವಿಳಂಬವಾಗಿವೆ. ಹೀಗಾಗಿ ಇಂತಹ ವಿಳಂಬ ಸಮಯವೂ ಮಹತ್ವದ ನಿರ್ಧಾರದ ಬಗ್ಗೆ ಕೇವಲ ಮಾತಿಗೆ ಸೀಮಿತವಾಗುವಂತೆ ಮಾಡುವ ಸಾಧ್ಯತೆ ಇದೆ. ಆದ್ದರಿಂದ ಇದನ್ನು ತೆಗೆದುಹಾಕಬೇಕು ಎಂದಿದ್ದಾರೆ.

ಎರಡನೆಯದಾಗಿ ಮಸೂದೆಯು ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಿಗೆ ಮಾತ್ರ ಅನ್ವಯಿಸುತ್ತದೆ ಮತ್ತು ರಾಜ್ಯಸಭೆ ಮತ್ತು ರಾಜ್ಯ ವಿಧಾನ ಪರಿಷತ್ತುಗಳಿಗೆ ವಿಸ್ತರಿಸಬೇಕು. ಯಾವುದೇ ದೃಢೀಕರಣದ ನೆರವು ಇಲ್ಲದೆ ಶಾಸಕಾಂಗ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಅನುಪಾತದ ಪ್ರಾತಿನಿಧ್ಯವನ್ನು ನೀಡುವ ದಿನವನ್ನು ನಾನು ಎದುರು ನೋಡುತ್ತಿದ್ದೇನೆ ಎಂದು ಕಮಲ್ ಹಾಸನ್ ಹೇಳಿದ್ದಾರೆ.

andolanait

Recent Posts

ರಸಗೊಬ್ಬರ ಖರೀದಿಗೆ ಎಫ್ಐಡಿ ಕಡ್ಡಾಯ ವಿರೋಧಿಸಿ ಪ್ರತಿಭಟನೆ

ಮೈಸೂರು: ರಸಗೊಬ್ಬರ ಖರೀದಿಗೆ ಎಫ್‌ಐಡಿ ಕಡ್ಡಾಯ ಮಾಡಿರುವುದನ್ನು ವಿರೋಧಿಸಿ ರೈತ ಮುಖಂಡರು ಪ್ರತಿಭಟನೆ ನಡೆಸಿದರು. ಮೈಸೂರಿನ ಕಾಡಾ ಕಛೇರಿ ಆವರಣದಲ್ಲಿರುವ…

15 mins ago

ಕಾಂತಾರ ದೈವಕ್ಕೆ ಅಪಮಾನ: ಚಾಮುಂಡಿ ತಾಯಿ ಮುಂದೆ ಕಡೆಗೂ ಕ್ಷಮೆ ಕೇಳಿದ ರಣವೀರ್‌ ಸಿಂಗ್‌

ಮೈಸೂರು: ಕಾಂತಾರ ದೈವದ ಪಾತ್ರಕ್ಕೆ ಅಪಮಾನ ಮಾಡಿದ್ದ ಬಾಲಿವುಡ್‌ ನಟ ರಣವೀರ್‌ ಸಿಂಗ್‌ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ…

27 mins ago

ವಿಧಾನಪರಿಷತ್‌ನ ಏಳು ಸ್ಥಾನಗಳಿಗೆ ಚುನಾವಣೆ ದಿನಾಂಕ ಘೋಷಣೆ

ನವದೆಹಲಿ: ಕರ್ನಾಟಕ ಹಾಗೂ ಬಿಹಾರ ವಿಧಾನಪರಿಷತ್‌ನ ದ್ವೈವಾರ್ಷಿಕ ಚುನಾವಣೆಗೆ ಚುನಾವಣಾ ಆಯೋಗ ವೇಳಾಪಟ್ಟಿ ಪ್ರಕಟಿಸಿದೆ. ಕರ್ನಾಟಕದ ಏಳು ಸ್ಥಾನಗಳಿಗೆ ದ್ವೈವಾರ್ಷಿಕ…

2 hours ago

ಮೇಕೆದಾಟು ಯೋಜನೆ ನಿಲ್ಲಿಸಲು ಯಾರಿಂದಲೂ ಸಾಧ್ಯವಿಲ್ಲ: ಗಣಿಗ ರವಿಕುಮಾರ್‌

ಮಂಡ್ಯ: ವಿಜಯ್‌ ರೀತಿ ತಮಿಳುನಾಡಿನಲ್ಲಿ ನೂರು ಮಂದಿ ಮುಖ್ಯಮಂತ್ರಿಯಾದರೂ ಸಹ ನಾವು ಮೇಕೆದಾಟು ಡ್ಯಾಂ ಕಟ್ಟೋದನ್ನು ತಡೆಯಲು ಸಾಧ್ಯವಿಲ್ಲ ಎಂದು…

3 hours ago

ಓದುಗರ ಪತ್ರ: ಅಸಂಘಟಿತ ಕಾರ್ಮಿಕರಿಗೆ ಜೀವನ ಭದ್ರತೆ ಕಲ್ಪಿಸಿ

ದೇಶದ ಸಾವಿರಾರು ಮಂದಿ ಅಸಂಘಟಿತ ಕಾರ್ಮಿಕರು ಹೊಟ್ಟೆಪಾಡಿಗಾಗಿ ಮಾಡುವ ಉದ್ಯೋಗವೇ ಅವರ ಜೀವಕ್ಕೆ ಮುಳುವಾಗುತ್ತಿದೆ. ಭಾನುವಾರ ಉತ್ತರ ಕನ್ನಡ ಜಿಲ್ಲೆಯ…

8 hours ago

ಓದುಗರ ಪತ್ರ: ರೌಂಡ್ ಕ್ಯಾಂಟೀನ್ ಶೀಘ್ರ ಪುನರಾರಂಭವಾಗಲಿ

ಮೈಸೂರಿನ ಮಾನಸ ಗಂಗೋತ್ರಿಯ ರೌಂಡ್ ಕ್ಯಾಂಟೀನ್ ಕಳೆದ ೫೦ ವರ್ಷಗಳಿಂದ ವಿದ್ಯಾರ್ಥಿಗಳನ್ನು, ಬೋಧಕ -ಬೋಧಕೇತರ ಸಿಬ್ಬಂದಿಗಳನ್ನು ಭಾವನಾತ್ಮಕವಾಗಿ ಬೆಸೆದುಕೊಂಡಿದೆ. ಇದು…

8 hours ago