ಬೆಂಗಳೂರು : ನನ್ನ ತಾಯಿಯನ್ನು ಪೂಜೆ ಮಾಡಲು ನನಗೆ ತುಂಬಾ ಇಷ್ಟ, ಅವರು ತಮ್ಮ ಜೀವನವನ್ನು ಸವೆಸಿದ ಸೋಲದೇವನಹಳ್ಳಿಯಲ್ಲಿ ಅವರ ನೆನಪಿಗಾಗಿ ಪುಟ್ಟ ದೇವಾಲಯವನ್ನು ನಿರ್ಮಿಸಿ, ಪ್ರತಿದಿನವೂ ಅಮ್ಮನನ್ನು ಪೂಜಿಸಿ ಭಕ್ತಿಯಿಂದ ನಮಸ್ಕರಿಸುತ್ತೇನೆ. ದಿನಾ ಅವರ ದರ್ಶನ ಪಡೆಯುವ ಮೂಲಕ ನನ್ನ ಜೀವನವನ್ನು ಕಳೆಯುತ್ತೇನೆ ಎಂದು ಹಿರಿಯ ನಟಿ ಲೀಲಾವತಿ ಪುತ್ರ ವಿನೋದ್ ರಾಜ್ ತಾಯಿಯ ಪ್ರೀಯಿಯನ್ನು ನೆನದಿದ್ದು ಹೀಗೆ.
ಅಮ್ಮನ ಜೊತೆ ಇಷ್ಟು ವರ್ಷಗಳ ಕಾಲ ಒಡನಾಟ, ಬಾಂಧವ್ಯ ಇದ್ದುದರಿಂದಲೇ ಬಡವರು, ಕಷ್ಟದಲ್ಲಿರುವವರು, ಪ್ರಾಣಿಗಳ ಬಗ್ಗೆ ಕರುಣೆ ಉಂಟಾಗಿರುವುದು. ಅನುಕಂಪ, ಪ್ರೀತಿ ಅಮ್ಮ ನನಗೆ ಹೇಳಿಕೊಟ್ಟ ಪಾಠ, ನನ್ನ ತಾಯಿಯವರು ನನ್ನನ್ನು ನಿಮಗೆ ಒಪ್ಪಿಸಿ ಹೋಗಿದ್ದಾರೆ, ನಿಮ್ಮ ಜೊತೆಯಲ್ಲಿ ಅವರಿದ್ದಾರೆ, ಅಭಿಮಾನಿಗಳಲ್ಲಿ ಅವರನ್ನು ಕಾಣುತ್ತೇನೆ, ನನ್ನ ಜನ್ಮ ಸಾರ್ಥಕ ಎನಿಸುತ್ತದೆ ಎಂದರು.
ನಟಿ ಲೀಲಾವತಿಯವರು ವಯೋಸಹಜ ಕಾಯಿಲೆಯಿಂದ ತಮ್ಮ 85ನೇ ವರ್ಷದಲ್ಲಿ ನಿಧನರಾಗಿದ್ದು ಇಂದಿಗೆ ಮೂರು ದಿನವಾಗಿದೆ. ಈ ತೀರಿಕೊಂಡು ಮೂರು ದಿನವಾದ ಹಿನ್ನೆಲೆಯಲ್ಲಿ ಇಂದು ಕುಟುಂಬಸ್ಥರು ಹಾಲು-ತುಪ್ಪ ಕಾರ್ಯ ನೆರವೇರಿಸಿದರು.
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…
ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…