ಬೆಂಗಳೂರು : ನನ್ನ ತಾಯಿಯನ್ನು ಪೂಜೆ ಮಾಡಲು ನನಗೆ ತುಂಬಾ ಇಷ್ಟ, ಅವರು ತಮ್ಮ ಜೀವನವನ್ನು ಸವೆಸಿದ ಸೋಲದೇವನಹಳ್ಳಿಯಲ್ಲಿ ಅವರ ನೆನಪಿಗಾಗಿ ಪುಟ್ಟ ದೇವಾಲಯವನ್ನು ನಿರ್ಮಿಸಿ, ಪ್ರತಿದಿನವೂ ಅಮ್ಮನನ್ನು ಪೂಜಿಸಿ ಭಕ್ತಿಯಿಂದ ನಮಸ್ಕರಿಸುತ್ತೇನೆ. ದಿನಾ ಅವರ ದರ್ಶನ ಪಡೆಯುವ ಮೂಲಕ ನನ್ನ ಜೀವನವನ್ನು ಕಳೆಯುತ್ತೇನೆ ಎಂದು ಹಿರಿಯ ನಟಿ ಲೀಲಾವತಿ ಪುತ್ರ ವಿನೋದ್ ರಾಜ್ ತಾಯಿಯ ಪ್ರೀಯಿಯನ್ನು ನೆನದಿದ್ದು ಹೀಗೆ.
ಅಮ್ಮನ ಜೊತೆ ಇಷ್ಟು ವರ್ಷಗಳ ಕಾಲ ಒಡನಾಟ, ಬಾಂಧವ್ಯ ಇದ್ದುದರಿಂದಲೇ ಬಡವರು, ಕಷ್ಟದಲ್ಲಿರುವವರು, ಪ್ರಾಣಿಗಳ ಬಗ್ಗೆ ಕರುಣೆ ಉಂಟಾಗಿರುವುದು. ಅನುಕಂಪ, ಪ್ರೀತಿ ಅಮ್ಮ ನನಗೆ ಹೇಳಿಕೊಟ್ಟ ಪಾಠ, ನನ್ನ ತಾಯಿಯವರು ನನ್ನನ್ನು ನಿಮಗೆ ಒಪ್ಪಿಸಿ ಹೋಗಿದ್ದಾರೆ, ನಿಮ್ಮ ಜೊತೆಯಲ್ಲಿ ಅವರಿದ್ದಾರೆ, ಅಭಿಮಾನಿಗಳಲ್ಲಿ ಅವರನ್ನು ಕಾಣುತ್ತೇನೆ, ನನ್ನ ಜನ್ಮ ಸಾರ್ಥಕ ಎನಿಸುತ್ತದೆ ಎಂದರು.
ನಟಿ ಲೀಲಾವತಿಯವರು ವಯೋಸಹಜ ಕಾಯಿಲೆಯಿಂದ ತಮ್ಮ 85ನೇ ವರ್ಷದಲ್ಲಿ ನಿಧನರಾಗಿದ್ದು ಇಂದಿಗೆ ಮೂರು ದಿನವಾಗಿದೆ. ಈ ತೀರಿಕೊಂಡು ಮೂರು ದಿನವಾದ ಹಿನ್ನೆಲೆಯಲ್ಲಿ ಇಂದು ಕುಟುಂಬಸ್ಥರು ಹಾಲು-ತುಪ್ಪ ಕಾರ್ಯ ನೆರವೇರಿಸಿದರು.
ಜುಲೈ ಮಧ್ಯಭಾಗದಲ್ಲಿ ಕಲಾಪ ಆರಂಬವಾಗುವ ನಿರೀಕ್ಷೆ ಬೆಂಗಳೂರು : ಇದೇ ಮೊದಲ ಬಾರಿಗೆ ಬೆಳಗಾವಿಯ ಸುವರ್ಣವಿಧಾನಸೌಧದಲ್ಲಿ ಈ ಬಾರಿಯ ಮಳೆಗಾಲದ…
ನವದೆಹಲಿ : ಬದಲಾವಣೆ ಬಯಸುತ್ತಿರುವ ಯುವ ಮನಸ್ಸುಗಳು ಕಾಕ್ರೋಚ್ ಜನತಾ ಪಾರ್ಟಿಯ ಮೂಲಕ ರಾಜಕೀಯ ವ್ಯವಸ್ಥೆಯನ್ನು ಪ್ರಶ್ನೆ ಮಾಡುತ್ತಿವೆ. ಈ…
ಕಲಬುರ್ಗಿ: ಲಾರಿ ಹಾಗೂ ಕ್ರೂಸರ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐದು ಮಂದಿ ದಾರುಣವಾಗಿ ಮೃತಪಟ್ಟಿರುವ…
ಬೆಂಗಳೂರು: ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್…
ಬೀಜಿಂಗ್: ಉತ್ತರ ಚೀನಾದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಅನಿಲ ಸ್ಫೋಟದಲ್ಲಿ 82 ಜನರು ಸಾವನ್ನಪ್ಪಿದ್ದಾರೆ. ಇದು ಇತ್ತೀಚಿನ ವರ್ಷಗಳಲ್ಲಿ ದೇಶದಲ್ಲಿ…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿನಲ್ಲಿರುವ ನಟ ದರ್ಶನ್ ಜೈಲಿನಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾರೆಂಬ ವದಂತಿ ಕುರಿತು ಗೃಹ…