ಮಂಡ್ಯ: ನಾನು ಯಾವುದೇ ಚುನಾವಣಾ ಪ್ರಚಾರಕ್ಕೆ ಹೋಗುವುದಿಲ್ಲ. ನನ್ನಲ್ಲಿ ಆ ರೀತಿಯ ಯಾವುದೇ ಯೋಚನೆ ಈಗ ಇಲ್ಲ ಎಂದು ನಟ ಡಾಲಿ ಧನಂಜಯ್ ಸ್ಪಷ್ಟನೆ ನೀಡಿದ್ದಾರೆ.
ಜಿಲ್ಲೆಯ ಕರಗೋಡು ಗ್ರಾಮದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನನ್ನದು ಸಿನಿಮಾ ಬದುಕು, ಸಿನಿಮಾ ಅಷ್ಟೆ, ಚುನಾವಣಾ ಪ್ರಚಾರಕ್ಕೆ ಕುರಿತಂತೆ ಪದೇ ಪದೇ ಕೇಳಬೇಡಿ. ನಾನಿಲ್ಲಿಗೆ ಭೇಟಿ ನೀಡಿರುವುದು ಚಲನಚಿತ್ರೋತ್ಸವ ಹಿನ್ನಲೆಯಲ್ಲಿ ಮಾತ್ರ. ಚುನಾವಣಾ ಪ್ರವಾರದಲ್ಲಿ ಭಾಗಿಯಾಗಲು ಅಲ್ಲ. ಈ ಹಿಂದೆ ಎಂಎಲ್ಎ ಚುನಾವಣೆಯಲ್ಲಿಯೂ ಕರೆದಿದ್ದರು ನಾನು ಹೋಗಿಲ್ಲ. ಈ ಬಾರಿಯೂ ಯಾವುದೇ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಲ್ಲ ಎಂದು ಹೇಳಿದರು.
ಚುನಾವಣೆಗೆ ನಿಂತಿರುವವರೆಲ್ಲರಿಗೂ ಆಲ್ ದಿ ಬೆಸ್ಟ್ ಅಧಿಕಾರಕ್ಕೆ ಬರುವವರು ಉತ್ತಮ ಆಡಳಿತ ನೀಡಿ, ವಿರೋಧ ಪಕ್ಷದವರು ಒಳ್ಳೆಯ ಕೆಲಸ ಮಾಡಿ ಎಂದು ಶುಭ ಕೋರಿದರು.
ದೂರ: ಮೈಸೂರು ತಾಲ್ಲೂಕಿನ ಜಯಪುರ ಹೋಬಳಿಯ ದೂರ ಗ್ರಾಮಕ್ಕೆ ಖ್ಯಾತ ನಟ, ನಿರ್ದೇಶಕ ಪ್ರಭುದೇವ ಶನಿವಾರ ಆಗಮಿಸಿದ್ದರು. ಅವರು ಮೊದಲು…
ರಿಯಾಧ್: ಸೌದಿ ಅರಾಮ್ಕೊ ತೈಲ ಕಂಪನಿಗೆ ಸೇರಿದ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿ ಕನಿಷ್ಠ 14 ಮಂದಿ ಸಾವನ್ನಪ್ಪಿದ್ದಾರೆ. ಸೌದಿ ಅರೇಬಿಯಾದ ರಾಸ್…
ಟಿ.ನರಸೀಪುರ: ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತಾಲ್ಲೂಕಿನ ಕೆಂಪಯ್ಯನಹುಂಡಿ ಗ್ರಾಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ…
ಮೈಸೂರು: ನಗರದ ಪ್ರಮುಖ ಎರಡು ಹೋಟೆಲ್ಗಳನ್ನು ಬಾಂಬ್ ಮೂಲಕ ಸ್ಛೋಟಿಸುವುದಾಗಿ ಇ-ಮೇಲ್ ಮೂಲಕ ವ್ಯಕ್ತಿಯೊಬ್ಬ ಬೆದರಿಕೆ ಒಡ್ಡಿದ್ದು, ಕೆಲಕಾಲ ಆತಂಕ…
ಹನೂರು: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಯುವತಿಯೊಬ್ಬರಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಅಜ್ಜೀಪುರ ಗ್ರಾಮದಲ್ಲಿ ನಡೆದಿದೆ.…
ಸರಗೂರು: ಮೈಸೂರು ಜಿಲ್ಲೆಯಲ್ಲಿ ಮತ್ತೆ ಹುಲಿ ಉಪಟಳ ಹೆಚ್ಚಾಗಿದ್ದು, ಹುಲಿ ದಾಳಿಗೆ ಕರುವೊಂದು ಬಲಿಯಾಗಿರುವ ಘಟನೆ ಸರಗೂರು ತಾಲ್ಲೂಕಿನ ಹೆಗ್ಗನೂರು…