ಮಂಡ್ಯ: ನಾನು ಯಾವುದೇ ಚುನಾವಣಾ ಪ್ರಚಾರಕ್ಕೆ ಹೋಗುವುದಿಲ್ಲ. ನನ್ನಲ್ಲಿ ಆ ರೀತಿಯ ಯಾವುದೇ ಯೋಚನೆ ಈಗ ಇಲ್ಲ ಎಂದು ನಟ ಡಾಲಿ ಧನಂಜಯ್ ಸ್ಪಷ್ಟನೆ ನೀಡಿದ್ದಾರೆ.
ಜಿಲ್ಲೆಯ ಕರಗೋಡು ಗ್ರಾಮದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನನ್ನದು ಸಿನಿಮಾ ಬದುಕು, ಸಿನಿಮಾ ಅಷ್ಟೆ, ಚುನಾವಣಾ ಪ್ರಚಾರಕ್ಕೆ ಕುರಿತಂತೆ ಪದೇ ಪದೇ ಕೇಳಬೇಡಿ. ನಾನಿಲ್ಲಿಗೆ ಭೇಟಿ ನೀಡಿರುವುದು ಚಲನಚಿತ್ರೋತ್ಸವ ಹಿನ್ನಲೆಯಲ್ಲಿ ಮಾತ್ರ. ಚುನಾವಣಾ ಪ್ರವಾರದಲ್ಲಿ ಭಾಗಿಯಾಗಲು ಅಲ್ಲ. ಈ ಹಿಂದೆ ಎಂಎಲ್ಎ ಚುನಾವಣೆಯಲ್ಲಿಯೂ ಕರೆದಿದ್ದರು ನಾನು ಹೋಗಿಲ್ಲ. ಈ ಬಾರಿಯೂ ಯಾವುದೇ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಲ್ಲ ಎಂದು ಹೇಳಿದರು.
ಚುನಾವಣೆಗೆ ನಿಂತಿರುವವರೆಲ್ಲರಿಗೂ ಆಲ್ ದಿ ಬೆಸ್ಟ್ ಅಧಿಕಾರಕ್ಕೆ ಬರುವವರು ಉತ್ತಮ ಆಡಳಿತ ನೀಡಿ, ವಿರೋಧ ಪಕ್ಷದವರು ಒಳ್ಳೆಯ ಕೆಲಸ ಮಾಡಿ ಎಂದು ಶುಭ ಕೋರಿದರು.
ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…
ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್ಟಿಆರ್ ಹಾಗೂ ಎಚ್ಎಸ್ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…