ವಾಷಿಂಗ್ಟನ್ ಡಿಸಿ: ಅಪ್ಪಟ ಕನ್ನಡ ಸೊಗಡಿನ ‘ಕಾಂತಾರ’ ಚಿತ್ರವನ್ನು ನಿರ್ದೇಶಿಸಿ ದೇಶ ವಿದೇಶದಲ್ಲಿ ಜನಪ್ರಿಯತೆ ಗಳಿಸಿದ ಉಡುಪಿ ಜಿಲ್ಲೆಯ ಕುಂದಾಪುರ ಮೂಲದವರಾದ ರಿಷಬ್ ಶೆಟ್ಟಿ ಅವರಿಗೆ ಇತ್ತೀಚೆಗೆ ಅಮೆರಿಕ ಕನ್ನಡಿಗರು ‘ವಿಶ್ವ ಶ್ರೇಷ್ಠ ಕನ್ನಡಿಗ 2023’ ಪ್ರಶಸ್ತಿ ಪ್ರದಾನ ಮಾಡಿದ್ದರು.
ರಿಷಬ್ ಶೆಟ್ಟಿ ತಮ್ಮ ಪತ್ನಿ ಪ್ರಗತಿ ಶೆಟ್ಟಿ ಜೊತೆಗೂಡಿ ವಾಷಿಂಗ್ಟನ್ ನಗರದ ಪ್ಯಾರಾಮೌಂಟ್ ಥಿಯೇಟರ್ ಗೆ ತೆರಳಿ ಪ್ರಶಸ್ತಿ ಸ್ವೀಕರಿಸಿದರು.ವಾಷಿಂಗ್ಟನ್
ರಾಜ್ಯದ ಕನ್ನಡಿಗರಾದ ಮನು ಗೌರವ್ ಮತ್ತು ತಂಡದವರು, ಸಿಯಾಟಲ್ನಲ್ಲಿರುವ ಸಹ್ಯಾದ್ರಿ ಕನ್ನಡ ಸಂಘ ರಿಷಬ್ ಶೆಟ್ಟಿ ಅವರಿಗೆ ಈ ಪ್ರಶಸ್ತಿ ನೀಡಿ ಗೌರವಿಸಿದೆ.
ರಿಷಬ್ ಶೆಟ್ಟಿ ಅವರಿಗೆ ಎಲ್ಲಿ ಹೋದರಲ್ಲಿ ಅಭಿಮಾನಿಗಳಿದ್ದಾರೆ. ಚಿಕ್ಕ ಮಕ್ಕಳಿಂದ ಹಿಡಿದು ಯುವಜನತೆ, ವಯಸ್ಕರು, ಮಹಿಳೆಯರು, ಇಳಿ ವಯಸ್ಸಿನವರು ಅವರನ್ನು ಇಷ್ಟಪಡುತ್ತಾರೆ.
ಪಂಚೆಯಲ್ಲಿ ಮಿಂಚಿದ ಕುಂದಾಪ್ರ ಶೆಟ್ರು: ಪ್ಯಾಂಟ್ ಬದಲಿಗೆ ಪಂಚೆ ಸಾಮಾನ್ಯವಾಗಿ ಕರಾವಳಿ ಕನ್ನಡಿಗ ಪುರುಷರ ಅಚ್ಚುಮೆಚ್ಚಿನ ಉಡುಪು. ಸಮಾರಂಭಗಳಲ್ಲಿ ಸಾಮಾನ್ಯವಾಗಿ ಪಂಚೆಗಳನ್ನೇ ಧರಿಸುತ್ತಾರೆ. ಇತ್ತೀಚೆಗೆ ರಿಷಬ್ ಶೆಟ್ಟಿ, ರಾಜ್ ಬಿ ಶೆಟ್ಟಿ ಅವರು ಸಿನಿಮಾ ಸಮಾರಂಭಗಳಿಗೆ ಧರಿಸುವ ಪಂಚೆ ಬಹುತೇಕರ ಫೇವರಿಟ್ ಆಗಿದೆ.
ರಿಷಬ್ ಶೆಟ್ಟಿಯವರು ದೊಡ್ಡ ದೊಡ್ಡ ಸಮಾರಂಭಗಳಲ್ಲಿ ಪಂಚೆ ಧರಿಸಿ ಮಿಂಚುವುದುಂಟು. ವಿಶ್ವ ಶ್ರೇಷ್ಟ ಕನ್ನಡಿಗ ಪ್ರಶಸ್ತಿ ಸ್ವೀಕರಿಸಲು ಅಮೆರಿಕಕ್ಕೂ ಪಂಚೆ ಧರಿಸಿಕೊಂಡೇ ಹೋಗಿದ್ದಾರೆ.
ಮಂಡ್ಯ: ಆಸ್ತಿಗಾಗಿ ತಂದೆಯನ್ನೇ ಪಾಪಿ ಮಗನೋರ್ವ ಕೊಲೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ದಳವಾಯಿಕೋಡಿಯಲ್ಲಿ ನಡೆದಿದೆ. ಗ್ರಾಮದ…
ಹಾಸನ: ನಿವೃತ್ತ ಯೋಧರೊಬ್ಬರು ಪಿಸ್ತೂಲ್ನಿಂದ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ಜಿಲ್ಲೆ ಬೇಲೂರು…
ಮೈಸೂರು: ಈ ದೇಶದಲ್ಲಿ ಬಂಡವಾಳಶಾಹಿಗಳಾಗಲೀ, ಸಕ್ಕರೆ ಕಾರ್ಖಾನೆ ಮಾಲೀಕರಾಗಲೀ ಅಥವಾ ಉದ್ಯಮಿಗಳು ಸೇರಿ ಯಾರೂ ಸಹ ಆತ್ಮಹತ್ಯೆ ಮಾಡಿಕೊಂಡಿಲ್ಲ. ಆದರೇ,…
ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಭೈರತಿ ಬಸವರಾಜ್ ಜಾಮೀನು ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ. ಈ…
ನವದೆಹಲಿ: ರಾಜಧಾನಿ ಬೆಂಗಳೂರು ಹಾಗೂ ರಾಜ್ಯದ ಕರಾವಳಿ ಪ್ರದೇಶಗಳ ನಡುವೆ ಪ್ರಯಾಣವನ್ನು ಮತ್ತಷ್ಟು ಸುಲಭಗೊಳಿಸುವ ನಿಟ್ಟಿನಲ್ಲಿ ವಂದೇ ಭಾರತ್ ಎಕ್ಸ್…
ಹಾಸನ: ಅಪ್ರಾಪ್ತ ಬಾಲಕಿಯೊಬ್ಬಳಿಗೆ ಚಾಕೋಲೇಟ್ ನೀಡಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ಹಿನ್ನೆಲೆಯಲ್ಲಿ ಆಕೆ ಮಗುವಿಗೆ ಜನ್ಮ ನೀಡಿದ ಘಟನೆ…