ಚಿತ್ರ ಮಂಜರಿ

ಅಮೆರಿಕದಲ್ಲಿ ರಿಷಬ್ ಶೆಟ್ಟಿಗೆ ‘ವಿಶ್ವ ಶ್ರೇಷ್ಠ ಕನ್ನಡಿಗ’ 2023 ಪ್ರಶಸ್ತಿ ಪ್ರಧಾನ

ವಾಷಿಂಗ್ಟನ್ ಡಿಸಿ: ಅಪ್ಪಟ ಕನ್ನಡ ಸೊಗಡಿನ ‘ಕಾಂತಾರ’ ಚಿತ್ರವನ್ನು ನಿರ್ದೇಶಿಸಿ ದೇಶ ವಿದೇಶದಲ್ಲಿ ಜನಪ್ರಿಯತೆ ಗಳಿಸಿದ ಉಡುಪಿ ಜಿಲ್ಲೆಯ ಕುಂದಾಪುರ ಮೂಲದವರಾದ ರಿಷಬ್ ಶೆಟ್ಟಿ ಅವರಿಗೆ ಇತ್ತೀಚೆಗೆ ಅಮೆರಿಕ ಕನ್ನಡಿಗರು ‘ವಿಶ್ವ ಶ್ರೇಷ್ಠ ಕನ್ನಡಿಗ 2023’ ಪ್ರಶಸ್ತಿ ಪ್ರದಾನ ಮಾಡಿದ್ದರು.

ರಿಷಬ್ ಶೆಟ್ಟಿ ತಮ್ಮ ಪತ್ನಿ ಪ್ರಗತಿ ಶೆಟ್ಟಿ ಜೊತೆಗೂಡಿ ವಾಷಿಂಗ್ಟನ್‌ ನಗರದ ಪ್ಯಾರಾಮೌಂಟ್ ಥಿಯೇಟರ್ ಗೆ ತೆರಳಿ ಪ್ರಶಸ್ತಿ ಸ್ವೀಕರಿಸಿದರು.ವಾಷಿಂಗ್ಟನ್

ರಾಜ್ಯದ ಕನ್ನಡಿಗರಾದ ಮನು ಗೌರವ್ ಮತ್ತು ತಂಡದವರು, ಸಿಯಾಟಲ್​ನಲ್ಲಿರುವ ಸಹ್ಯಾದ್ರಿ ಕನ್ನಡ ಸಂಘ ರಿಷಬ್ ಶೆಟ್ಟಿ ಅವರಿಗೆ ಈ ಪ್ರಶಸ್ತಿ ನೀಡಿ ಗೌರವಿಸಿದೆ.

ರಿಷಬ್ ಶೆಟ್ಟಿ ಅವರಿಗೆ ಎಲ್ಲಿ ಹೋದರಲ್ಲಿ ಅಭಿಮಾನಿಗಳಿದ್ದಾರೆ. ಚಿಕ್ಕ ಮಕ್ಕಳಿಂದ ಹಿಡಿದು ಯುವಜನತೆ, ವಯಸ್ಕರು, ಮಹಿಳೆಯರು, ಇಳಿ ವಯಸ್ಸಿನವರು ಅವರನ್ನು ಇಷ್ಟಪಡುತ್ತಾರೆ.

ಪಂಚೆಯಲ್ಲಿ ಮಿಂಚಿದ ಕುಂದಾಪ್ರ ಶೆಟ್ರು: ಪ್ಯಾಂಟ್ ಬದಲಿಗೆ ಪಂಚೆ ಸಾಮಾನ್ಯವಾಗಿ ಕರಾವಳಿ ಕನ್ನಡಿಗ ಪುರುಷರ ಅಚ್ಚುಮೆಚ್ಚಿನ ಉಡುಪು. ಸಮಾರಂಭಗಳಲ್ಲಿ ಸಾಮಾನ್ಯವಾಗಿ ಪಂಚೆಗಳನ್ನೇ ಧರಿಸುತ್ತಾರೆ. ಇತ್ತೀಚೆಗೆ ರಿಷಬ್ ಶೆಟ್ಟಿ, ರಾಜ್ ಬಿ ಶೆಟ್ಟಿ ಅವರು ಸಿನಿಮಾ ಸಮಾರಂಭಗಳಿಗೆ ಧರಿಸುವ ಪಂಚೆ ಬಹುತೇಕರ ಫೇವರಿಟ್ ಆಗಿದೆ.

ರಿಷಬ್ ಶೆಟ್ಟಿಯವರು ದೊಡ್ಡ ದೊಡ್ಡ ಸಮಾರಂಭಗಳಲ್ಲಿ ಪಂಚೆ ಧರಿಸಿ ಮಿಂಚುವುದುಂಟು. ವಿಶ್ವ ಶ್ರೇಷ್ಟ ಕನ್ನಡಿಗ ಪ್ರಶಸ್ತಿ ಸ್ವೀಕರಿಸಲು ಅಮೆರಿಕಕ್ಕೂ ಪಂಚೆ ಧರಿಸಿಕೊಂಡೇ ಹೋಗಿದ್ದಾರೆ.

andolanait

Recent Posts

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

10 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

10 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

10 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

10 hours ago

ಪಕ್ಕದಲ್ಲೇ ನದಿಯಿದ್ದರೂ ಚಿಕ್ಕಮಂದಗೆರೆ ಗ್ರಾಮಕ್ಕಿಲ್ಲ ನೀರು!

ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…

11 hours ago

ಕೊಡಗಿನಲ್ಲಿ1,20,874 ಮಕ್ಕಳಿಗೆ ಮಾತ್ರೆ ವಿತರಣೆ ಗುರಿ

ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…

11 hours ago