ಚಿತ್ರ ಮಂಜರಿ

ಬರ್ಕಯ್ಯ ಪೇಪರ್‌ ಮುಂದಾಗಡೆ ಬರ್ಕೋ ಕಬಡ್ಡಿ ನಮ್ದು ಎಂದ ಕಿಚ್ಚ

ವರ್ಲ್ಡ್‌ ಕಪ್‌ ಬಳಿಕ ಕ್ರೀಡಾಭಿಮಾನಿಗಳು ಪ್ರೋ ಕಬಡ್ಡಿ ಲೀಗ್‌ ಗಾಗಿ ಕಾಯುತ್ತಿದ್ದಾರೆ. ಮುಂದಿನ ತಿಂಗಳು, ಅಂದ್ರೆ ಡಿಸೆಂಬರ್‌ 2ಕ್ಕೆ ಪ್ರೋ ಕಬಡ್ಡಿ ಲೀಗ್‌ ಶುರುವಾಗಲಿದೆ.

ಈ ನಡುವೆ ಬೆಂಗಳೂರು ಬುಲ್ಸ್ ತಂಡದ ರಾಯಭಾರಿಯಾಗಿರುವ ಸ್ಯಾಂಡಲ್ವುಡ್‌ ಬಾದ್‌ ಶಾ, ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್‌ ಸಾಮಾಜಿಕ ಜಾಲತಾಣದಲ್ಲಿ ಪ್ರೋ ಕಬಡ್ಡಿ ಲೀಗ್‌ ನ ಜಾಹಿರಾತಿನ ವಿಡಿಯೋ ಹಂಚಿಕೊಂಡಿದ್ದಾರೆ. ಈ ವಿಡಿಯೋದಲ್ಲಿ ಕಿಚ್ಚ ಸುದೀಪ್‌ ಹೊಳೆಯುತ್ತಿರುವ ಬೆಳಗಿನ ಸೂರ್ಯ ರಶ್ಮಿಯ ಬೇಳಕಲ್ಲಿ ಬೆಳ್ಳನೆ ಕುದುರೆಯೇರಿ ರೋಶಾವೇಶದಿಂದ ಬರುತ್ತಾರೆ.

ಈ ಜಾಹಿರಾತನ್ನು ಯಾವುದೇ ಸಿನಿಮಾಗೂ ಕಮ್ಮಿ ಇಲ್ಲದಂತೆ ಶೂಟ್‌ ಮಾಡಲಾಗಿದೆ. ಈ ವಿಡಿಯೋದ ಆರಂಭದಲ್ಲಿ ಕಿಚ್ಚ ಯಾವುದೋ ಯುದ್ಧಕ್ಕೆ ಹೋಗುತ್ತಿರುವ ಖದರ್‌ ನಲ್ಲಿ ಬಿಳಿ ಬಣ್ಣದ ಕುದುರೆಯೇರಿ ರಾಜನಂತೆ ಬರುತ್ತಾರೆ. ನಟ ಬಾಲಯ್ಯ ಕೂಡ ಎದುರಿನಿಂದ ಮತ್ತೊಂದು ಕುದುರೆಯೇರಿ ಬರುತ್ತಾರೆ. ಇವರಿಬ್ಬರೂ ಮುಖಾಮುಖಿಯಾಗಿ ಜಗಜ್ಜೆಟ್ಟಿಗಳಂತೆ ಕಾದಾಡುವಾಗ ಕಬಡ್ಡಿ ನಮ್ದು ಎನ್ನುವ ಸಾಲು ಬರುತ್ತದೆ.

ಇನ್ನು ಈ ವಿಡಿಯೋವನ್ನು ಹಂಚಿಕೊಂಡಿರುವ ಬೆಂಗಳೂರು ಬುಲ್ಸ್‌ ತಂಡದ ರಾಯಭಾರಿ ಕಿಚ್ಚ ಸುದೀಪ್‌, ಬರ್ಕಯ್ಯ. ಪೇಪರ್‌ ಮುಂದಾಗಡೆ ಬರ್ಕೋ. ಕಬಡ್ಡಿ ನಮ್ದು. ನೋಡಿರಿ ಪ್ರೋ ಕಬಡ್ಡಿ ಲೀಗ್‌ ಡಿಸೆಂಬರ್‌ 2 ರಾತ್ರಿ 8 ರಿಂದ ನಿಮ್ಮ ಸ್ಟಾರ್‌ ಸ್ಪೋರ್ಟ್ಸ್‌ ಮತ್ತು ಡಿಸ್ನಿ ಪ್ಲಸ್‌ ಹಾಟ್ ಸ್ಟಾರ್‌ ನಲ್ಲಿ ಎಂದು ಬರೆದುಕೊಂಡಿದ್ದಾರೆ.

lokesh

Recent Posts

ಭಾರತ ಸೇರಿ ಮಿತ್ರ ರಾಷ್ಟಗಳಿಗೆ ಹೊರ್ಮುಜ್‌ ಮುಕ್ತ : ಇರಾನ್‌

ಹೊಸದಿಲ್ಲಿ : ಭಾರತ ಸೇರಿದಂತೆ ಮಿತ್ರ ರಾಷ್ಟ್ರಗಳಿಗೆ ಹೊರ್ಮುಜ್‌ ಜಲಸಂಧಿಯನ್ನು ಮುಕ್ತಗೊಳಿಸಲಾಗಿದೆ ಎಂದು ಇರಾನ್‌ನ ವಿದೇಶಾಂಗ ಸಚಿವ ಅಬ್ಬಾಸ್‌ ಅರಘ್ಚಿ…

34 mins ago

ಆರ್‌ಸಿಬಿ ಹೆಸರು ಬದಲಾವಣೆ ಆಗುತ್ತಾ? ಅನನ್ಯಾ ಬಿರ್ಲಾ ಪೋಸ್ಟ್‌ನಲ್ಲೇನಿದೆ?

ಬೆಂಗಳೂರು : ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಆದಿತ್ಯ ಬಿರ್ಲಾ ಗ್ರೂಪ್ ನೇತೃತ್ವದ ಒಕ್ಕೂಟ 16,700 ಕೋಟಿಗೆ ಖರೀದಿಸಿದ ಬಳಿಕ…

54 mins ago

ಕಾರು ವಂಚನೆ ಜಾಲ ಬಯಲು ; ಮೂವರ ಬಂಧನ, 8 ಕಾರುಗಳು ವಶ

ಮೈಸೂರು : ಮೋಸದಿಂದ ಕಾರುಗಳನ್ನು ಖರೀದಿಸಿ, ಯಾವುದೇ ದಾಖಲೆ ನೀಡದೆ ಕಡಿಮೆ ಹಣ ಪಡೆದು ಬೇರೆಯವರಿಗೆ ಹೆಚ್ಚು ಬೆಲೆಗೆ ಮಾರಾಟ…

60 mins ago

ಮಾತುಕತೆ ನಡೆಸುವ ಉದ್ದೇಶ ನಮಗಿಲ್ಲ : ಇರಾನ್‌

ಟೆಹ್ರಾನ್ : ಅಮೆರಿಕದೊಂದಿಗೆ ಮಾತುಕತೆ ನಡೆಸುವ ಯಾವುದೇ ಉದ್ದೇಶ ನಮಗಿಲ್ಲ ಇಲ್ಲ ಎಂದು ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಾಗ್ಚಿ…

1 hour ago

ಓದುಗರ ಪತ್ರ | ಚಲನ ಚಿತ್ರದ ಅಶ್ಲೀಲ ಸಾಹಿತ್ಯ ನಿಷೇಧಿಸಿ

ಕನ್ನಡ ಚಲನಚಿತ್ರಗಳು ಭಾರತೀಯ ಸಿನಿರಂಗದಲ್ಲಿ ತನ್ನದೇ ಆದ ವೈಶಿಷ್ಟ್ಯವನ್ನು ಹೊಂದಿವೆ. ಎಪ್ಪತ್ತು, ಎಂಬತ್ತರ ದಶಕದಲ್ಲಿ ತೆರೆ ಕಂಡ ಚಿತ್ರಗಳ ಹಾಡುಗಳು…

2 hours ago

ಓದುಗರ ಪತ್ರ | ಹೆಚ್ಚುವರಿ ಬಸ್‌ ಸೌಲಭ್ಯ ಕಲ್ಪಿಸಿ

ಸರಗೂರು ಹಾಗೂ ಎಚ್‌.ಡಿ.ಕೋಟೆಯಿಂದ ಗುಂಡ್ಲುಪೇಟೆಗೆ ಪ್ರತಿನಿತ್ಯ ನೂರಾರು ಜನರು ಪ್ರಯಾಣಿಸುತ್ತಿದ್ದು, ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್‌ಗಳು ಸರಿಯಾದ ಸಮಯಕೆ…

3 hours ago