ಚಿತ್ರ ಮಂಜರಿ

ಬರ್ಕಯ್ಯ ಪೇಪರ್‌ ಮುಂದಾಗಡೆ ಬರ್ಕೋ ಕಬಡ್ಡಿ ನಮ್ದು ಎಂದ ಕಿಚ್ಚ

ವರ್ಲ್ಡ್‌ ಕಪ್‌ ಬಳಿಕ ಕ್ರೀಡಾಭಿಮಾನಿಗಳು ಪ್ರೋ ಕಬಡ್ಡಿ ಲೀಗ್‌ ಗಾಗಿ ಕಾಯುತ್ತಿದ್ದಾರೆ. ಮುಂದಿನ ತಿಂಗಳು, ಅಂದ್ರೆ ಡಿಸೆಂಬರ್‌ 2ಕ್ಕೆ ಪ್ರೋ ಕಬಡ್ಡಿ ಲೀಗ್‌ ಶುರುವಾಗಲಿದೆ.

ಈ ನಡುವೆ ಬೆಂಗಳೂರು ಬುಲ್ಸ್ ತಂಡದ ರಾಯಭಾರಿಯಾಗಿರುವ ಸ್ಯಾಂಡಲ್ವುಡ್‌ ಬಾದ್‌ ಶಾ, ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್‌ ಸಾಮಾಜಿಕ ಜಾಲತಾಣದಲ್ಲಿ ಪ್ರೋ ಕಬಡ್ಡಿ ಲೀಗ್‌ ನ ಜಾಹಿರಾತಿನ ವಿಡಿಯೋ ಹಂಚಿಕೊಂಡಿದ್ದಾರೆ. ಈ ವಿಡಿಯೋದಲ್ಲಿ ಕಿಚ್ಚ ಸುದೀಪ್‌ ಹೊಳೆಯುತ್ತಿರುವ ಬೆಳಗಿನ ಸೂರ್ಯ ರಶ್ಮಿಯ ಬೇಳಕಲ್ಲಿ ಬೆಳ್ಳನೆ ಕುದುರೆಯೇರಿ ರೋಶಾವೇಶದಿಂದ ಬರುತ್ತಾರೆ.

ಈ ಜಾಹಿರಾತನ್ನು ಯಾವುದೇ ಸಿನಿಮಾಗೂ ಕಮ್ಮಿ ಇಲ್ಲದಂತೆ ಶೂಟ್‌ ಮಾಡಲಾಗಿದೆ. ಈ ವಿಡಿಯೋದ ಆರಂಭದಲ್ಲಿ ಕಿಚ್ಚ ಯಾವುದೋ ಯುದ್ಧಕ್ಕೆ ಹೋಗುತ್ತಿರುವ ಖದರ್‌ ನಲ್ಲಿ ಬಿಳಿ ಬಣ್ಣದ ಕುದುರೆಯೇರಿ ರಾಜನಂತೆ ಬರುತ್ತಾರೆ. ನಟ ಬಾಲಯ್ಯ ಕೂಡ ಎದುರಿನಿಂದ ಮತ್ತೊಂದು ಕುದುರೆಯೇರಿ ಬರುತ್ತಾರೆ. ಇವರಿಬ್ಬರೂ ಮುಖಾಮುಖಿಯಾಗಿ ಜಗಜ್ಜೆಟ್ಟಿಗಳಂತೆ ಕಾದಾಡುವಾಗ ಕಬಡ್ಡಿ ನಮ್ದು ಎನ್ನುವ ಸಾಲು ಬರುತ್ತದೆ.

ಇನ್ನು ಈ ವಿಡಿಯೋವನ್ನು ಹಂಚಿಕೊಂಡಿರುವ ಬೆಂಗಳೂರು ಬುಲ್ಸ್‌ ತಂಡದ ರಾಯಭಾರಿ ಕಿಚ್ಚ ಸುದೀಪ್‌, ಬರ್ಕಯ್ಯ. ಪೇಪರ್‌ ಮುಂದಾಗಡೆ ಬರ್ಕೋ. ಕಬಡ್ಡಿ ನಮ್ದು. ನೋಡಿರಿ ಪ್ರೋ ಕಬಡ್ಡಿ ಲೀಗ್‌ ಡಿಸೆಂಬರ್‌ 2 ರಾತ್ರಿ 8 ರಿಂದ ನಿಮ್ಮ ಸ್ಟಾರ್‌ ಸ್ಪೋರ್ಟ್ಸ್‌ ಮತ್ತು ಡಿಸ್ನಿ ಪ್ಲಸ್‌ ಹಾಟ್ ಸ್ಟಾರ್‌ ನಲ್ಲಿ ಎಂದು ಬರೆದುಕೊಂಡಿದ್ದಾರೆ.

lokesh

Recent Posts

ಬಿಡದಿ ಹೋರಾಟಕ್ಕೆ ಜೆನ್‌-ಝೀ ಗಳು ಬರಲಿ ; ದೇವನೂರು ಮಹದೇವ ಕರೆ

ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…

8 hours ago

ಕನ್ನಡ ಭಾಷ ಶಿಕ್ಷಕರ ಪ್ರತ್ಯೇಕ ನೇಮಕಕ್ಕೆ ಸರ್ಕಾರ ಅಸ್ತು ; ಸ್ವಾಗತಾರ್ಹ

ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್‌ಟಿಆರ್ ಹಾಗೂ ಎಚ್‌ಎಸ್‌ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…

11 hours ago

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

15 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

17 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

18 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

19 hours ago