ಬೆಂಗಳೂರು : ಬಹುನಿರೀಕ್ಷಿತ 14ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವವು ಮಾ.23ರಿಂದ 30ರವರೆಗೆ ಬೆಂಗಳೂರಿನಲ್ಲಿ ನಡೆಯಲಿದೆ.
ಮಾ.23ರಂದು ಚಲನಚಿತ್ರೋತ್ಸವ ಉದ್ಘಾಟನೆಯಾಗಲಿದ್ದು, 26ರಂದು ನಡೆಯುವ ಸಮಾರೋಪ ಸಮಾರಂಭದಲ್ಲಿ ಪ್ರಶಸ್ತಿ ವಿತರಣೆ ಮಾಡಲಾಗುತ್ತದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚಲನಚಿತ್ರೋತ್ಸವದ ಅಂಗವಾಗಿ ಸಂವಾದ, ಚರ್ಚೆ, ವಿಚಾರ ಸಂಕಿರಣ, ಅತ್ಯುತ್ತಮ ನಿರ್ದೇಶಕರೊಂದಿಗೆ ಸಂವಾದ, ಕಾರ್ಯಗಾರಗಳನ್ನು ಹಮ್ಮಿಕೊಳ್ಳಲಾಗುತ್ತದೆ ಎಂದರು.
ಸರ್ಧಾ ವಿಭಾಗದಲ್ಲಿ ಏಷ್ಯಾ ಚಲನಚಿತ್ರಗಳು, ಭಾರತೀಯ ಚಲನಚಿತ್ರಗಳು, ಕನ್ನಡ ಚಲನಚಿತ್ರಗಳು, ಸಮಕಾಲೀನ ವಿಶ್ವ ಸಿನಿಮಾ, ಪುನರಾವಲೋಕನ ವಿಭಾಗ, ಭಾರತೀಯ ಸಿನಿಮಾ ಪುನರಾವಲೋಕನ, ಕನ್ನಡ ಸಿನಿಮಾ ಪುನರಾವಲೋಕನ ಮಾಡಲಾಗುತ್ತದೆ.
ಶ್ರೇಷ್ಠ ಚಲನಚಿತ್ರಗಳ ಪುನರ್ ಮನನ ಜೊತೆಗೆ ವಿಶ್ವ ಸಿನಿಮಾ, ಭಾರತೀಯ ಸಿನಿಮಾ ಮತ್ತು ಕನ್ನಡ ಸಿನಿಮಾಗಳ ಪುನರ್ ಮನನ ಮಾಡುವ ಉದ್ದೇಶವು ಇದೆ ಎಂದು ಹೇಳಿದರು.
ಜಗತ್ತಿನ ವಿವಿಧ ಭಾಗಗಳಲ್ಲಿ ಪ್ರದರ್ಶನಗೊಂಡು ವಿಮರ್ಶಕರ ಪ್ರಶಂಸೆಗೆ ಪಾತ್ರರಾಗಿರುವ ಚಲನಚಿತ್ರಗಳ ಪ್ರದರ್ಶನ ಹಾಗೂ ಚರ್ಚೆ ನಡೆಸಲಾಗುತ್ತದೆ ಜೊತೆಗೆ ಜನಪ್ರಿಯ ಕನ್ನಡ ಚಲನಚಿತ್ರಗಳ ಪ್ರದರ್ಶನವು ಚಲನಚಿತ್ರೋತ್ಸವದಲ್ಲಿ ಇರುತ್ತದ ಎಂದು ಅವರು ತಿಳಿಸಿದರು.
ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…
ನವದೆಹಲಿ: ನಾಗರಿಕ ವಿಮಾನಯಾನ ಸಚಿವಾಲಯವು ಇಂಡಿಗೋದ ಬಾಕಿ ಇರುವ ಎಲ್ಲಾ ಪ್ರಯಾಣಿಕರ ಮರುಪಾವತಿಗಳನ್ನು ವಿಳಂಬವಿಲ್ಲದೇ ಪಾವತಿಸಲು ಆದೇಶಿಸಿದೆ. ರದ್ದಾದ ಅಥವಾ…
ತುಮಕೂರು: ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಚರ್ಚೆ ಬೆನ್ನಲ್ಲೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಈ ಕುರಿತು…
ಹಾಸನ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ದೆಹಲಿ ಪೊಲೀಸರು ನೋಟಿಸ್ ಕೊಟ್ಟ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…
ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್…
ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…