ಚಿತ್ರ ಮಂಜರಿ

ಮಾರ್ಚ್‌ 23ರಿಂದ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ

ಬೆಂಗಳೂರು :  ಬಹುನಿರೀಕ್ಷಿತ 14ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವವು ಮಾ.23ರಿಂದ 30ರವರೆಗೆ ಬೆಂಗಳೂರಿನಲ್ಲಿ ನಡೆಯಲಿದೆ.
ಮಾ.23ರಂದು ಚಲನಚಿತ್ರೋತ್ಸವ ಉದ್ಘಾಟನೆಯಾಗಲಿದ್ದು, 26ರಂದು ನಡೆಯುವ ಸಮಾರೋಪ ಸಮಾರಂಭದಲ್ಲಿ ಪ್ರಶಸ್ತಿ ವಿತರಣೆ ಮಾಡಲಾಗುತ್ತದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚಲನಚಿತ್ರೋತ್ಸವದ ಅಂಗವಾಗಿ ಸಂವಾದ, ಚರ್ಚೆ, ವಿಚಾರ ಸಂಕಿರಣ, ಅತ್ಯುತ್ತಮ ನಿರ್ದೇಶಕರೊಂದಿಗೆ ಸಂವಾದ, ಕಾರ್ಯಗಾರಗಳನ್ನು ಹಮ್ಮಿಕೊಳ್ಳಲಾಗುತ್ತದೆ ಎಂದರು.
ಸರ್ಧಾ ವಿಭಾಗದಲ್ಲಿ ಏಷ್ಯಾ ಚಲನಚಿತ್ರಗಳು, ಭಾರತೀಯ ಚಲನಚಿತ್ರಗಳು, ಕನ್ನಡ ಚಲನಚಿತ್ರಗಳು, ಸಮಕಾಲೀನ ವಿಶ್ವ ಸಿನಿಮಾ, ಪುನರಾವಲೋಕನ ವಿಭಾಗ, ಭಾರತೀಯ ಸಿನಿಮಾ ಪುನರಾವಲೋಕನ, ಕನ್ನಡ ಸಿನಿಮಾ ಪುನರಾವಲೋಕನ ಮಾಡಲಾಗುತ್ತದೆ.
ಶ್ರೇಷ್ಠ ಚಲನಚಿತ್ರಗಳ ಪುನರ್ ಮನನ ಜೊತೆಗೆ ವಿಶ್ವ ಸಿನಿಮಾ, ಭಾರತೀಯ ಸಿನಿಮಾ ಮತ್ತು ಕನ್ನಡ ಸಿನಿಮಾಗಳ ಪುನರ್ ಮನನ ಮಾಡುವ ಉದ್ದೇಶವು ಇದೆ ಎಂದು ಹೇಳಿದರು.
ಜಗತ್ತಿನ ವಿವಿಧ ಭಾಗಗಳಲ್ಲಿ ಪ್ರದರ್ಶನಗೊಂಡು ವಿಮರ್ಶಕರ ಪ್ರಶಂಸೆಗೆ ಪಾತ್ರರಾಗಿರುವ ಚಲನಚಿತ್ರಗಳ ಪ್ರದರ್ಶನ ಹಾಗೂ ಚರ್ಚೆ ನಡೆಸಲಾಗುತ್ತದೆ ಜೊತೆಗೆ ಜನಪ್ರಿಯ ಕನ್ನಡ ಚಲನಚಿತ್ರಗಳ ಪ್ರದರ್ಶನವು ಚಲನಚಿತ್ರೋತ್ಸವದಲ್ಲಿ ಇರುತ್ತದ ಎಂದು ಅವರು ತಿಳಿಸಿದರು.

andolanait

Recent Posts

ವರ್ತನೆ ತಪ್ಪಿದರೆ ದಾಳಿ ನಿಶ್ಚಿತ : ಇರಾನ್‌ಗೆ ಟ್ರಂಪ್ ಖಡಕ್ ಎಚ್ಚರಿಕೆ

ವಾಷಿಂಗ್ಟನ್ : ಇರಾನ್ ತಪ್ಪು ವರ್ತನೆ ತೋರಿದರೆ ಮತ್ತೆ ಸೇನಾ ದಾಳಿ ಆರಂಭವಾಗಬಹುದು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್…

11 mins ago

ನಿಗದಿಗಿಂತ ಮುನ್ನವೇ ಮುಂಗಾರು ಮಳೆ : ಮೇ ಅಂತ್ಯಕ್ಕೆ ಕೇರಳ ಪ್ರವೇಶ

ಬೆಂಗಳೂರು : ಬಿರುಬೇಸಿಗೆಯಿಂದಾಗಿ ಬಳಲಿ ಬೆಂಡಾಗಿರುವ ಜನತೆಗೆ ಕೇಂದ್ರ ಹವಾಮಾನ ಇಲಾಖೆ ಸಿಹಿಸುದ್ದಿ ನೀಡಿದ್ದು, ಈ ಬಾರಿ ನಿಗದಿಗಿಂತ ಮುಂಚಿತವಾಗಿಯೇ…

32 mins ago

ಬೆಟ್ಟದಪುರ | ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ಸ್ಪರ್ಶ ; ಬಾಲಕ ಸಾವು

ಬೆಟ್ಟದಪುರ : ಪಿರಿಯಾಪಟ್ಟಣ ತಾಲ್ಲೂಕಿನ ಬಿ.ಟಿ.ಎಂ. ಕೊಪ್ಪಲು ಗ್ರಾಮದಲ್ಲಿ ಮನೆಯ ಹಿಂದೆ ಕ್ರಿಕೆಟ್ ಆಡುತ್ತಿದ್ದ ವೇಳೆ ಆಕಸ್ಮಿಕವಾಗಿ ವಿದ್ಯುತ್ ತಗುಲಿ…

2 hours ago

ಚಿಪ್ಪುಹಂದಿ ಬೇಟೆಯಾಡಿ ಮಾರಾಟಕ್ಕೆ ಯತ್ನ: ಓರ್ವ ಬಂಧನ

ಮೈಸೂರು : ಕಾಡುಪ್ರಾಣಿ ಬೇಟೆ ಹಾಗೂ ಅಕ್ರಮ ಮಾರಾಟಕ್ಕೆ ಯತ್ನಿಸಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಅರಣ್ಯ ಇಲಾಖೆ ಅಧಿಕಾರಿಗಳು ದಾಳಿ…

3 hours ago

ʼದೃಷ್ಟಿ ಉಪಗ್ರಹʼ ಉಡಾವಣೆ ಯಶಸ್ವಿ

ಬೆಂಗಳೂರು : ಮೋಡ, ಕತ್ತಲೆ, ಮಳೆ... ಯಾವುದಕ್ಕೂ ಜಗ್ಗದ ಕಣ್ಣು ಹೊಂದಿರುವ ಭಾರತದ ಮೊದಲ ಖಾಸಗಿ ಉಪಗ್ರಹ ‘ದೃಷ್ಟಿ’ ಇಂದು…

4 hours ago

ಮೇ.6ರಂದು ಯಸಳೂರಿನ ಅರ್ಜುನ ಆನೆ ಸಮಾಧಿ ಸ್ಥಳದ ಸ್ಮಾರಕ ಉದ್ಘಾಟನೆ: ಸಚಿವ ಈಶ್ವರ್‌ ಖಂಡ್ರೆ

ಬೆಂಗಳೂರು: ಹಾಸನ ಜಿಲ್ಲೆ ಯಸಳೂರು ವಲಯದಲ್ಲಿ ಕಳೆದ 2023 ಡಿಸೆಂಬರ್.4ರಂದು ಆನೆ ಸೆರೆ ಕಾರ್ಯಾಚರಣೆ ವೇಳೆ ವೀರಾವೇಶದಿಂದ ಹೋರಾಡಿ, ಪಶುವೈದ್ಯರು,…

7 hours ago