ಚಿತ್ರ ಮಂಜರಿ

ಯಶ್‌ ಗೆ ನಾಯಕಿ ಆಗ್ತಾರಾ ಸಾಯಿ ಪಲ್ಲವಿ ?

ರಾಕಿಂಗ್ ಸ್ಟಾರ್‌ ಯಶ್‌ ಅವರ ಮುಂದಿನ ಸಿನಿಮಾಗಾಗಿ ಸಿನಿಪ್ರಿಯರು ಒಂದುವರೆ ವರ್ಷಗಳಿಂದ ಕಾದು ಕುಳಿತಿದ್ದಾರೆ. ಈ ನಡುವೆ ರಾಕಿ ಬಾಯ್‌ ಸಿನಿಮಾ ಬಗ್ಗೆ ಆಗಾಗ ಗಾಳಿಸುದ್ದಿಗಳು ಹರಿದಾಡುತ್ತಲೇ ಇರುತ್ತವೆ. ಇದೀಗ ಅಂತಹದ್ದೇ ಒಂದು ಸುದ್ದಿ ಗಾಂಧಿ ನಗರದ ಗಲ್ಲಿಗಳಲ್ಲಿ ಹರಿದಾಡುತ್ತಿದೆ.

ಯಶ್‌ ಅವರ ಮುಂದಿನ ಸಿನಿಮಾದಲ್ಲಿ ನಟಿ ಸಾಯಿಪಲ್ಲವಿ ನಾಯಕಿಯಾಗಿ ಆಯ್ಕೆಯಾಗಿದ್ದು, ಈ ಮೂಲಕ ಚಂದನವನಕ್ಕೆ ಎಂಟ್ರಿ ಕೊಡಲಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ ಈ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಸಿಕ್ಕಿಲ್ಲ.

ಮೊನ್ನೆಯಷ್ಟೇ ರಾಕಿ ಬಾಯ್‌ ತಮ್ಮ ಇನ್ಸ್ಟಾಗ್ರಾಮ್‌ ಪ್ರೋಫೈಲ್‌ ಫೋಟೋ ಬದಲಿಸಿದ್ದರು. ಇದರಿಂದ ಅಭಿಮಾನಿಗಳಲ್ಲಿ ಯಶ್‌ ತಮ್ಮ ಮುಂದಿನ ಚಿತ್ರದ ಅಪ್ಡೇಟ್‌ ನೀಡಿದ್ದಾರಾ ? ಎಂಬ ಕುತೂಹಲ ಮೂಡಿತ್ತು. ನಂತರ ಯಶ್‌ ಅವರು ಮತ್ತೊಂದು ಪೋಸ್ಟ್‌ ಹಂಚಿಕೊಂಡಿದ್ದು, ಡಿಸೆಂಬರ್‌ 8 ಕ್ಕೆ ತಮ್ಮ ಮುಂದಿನ ಸಿನಿಮಾದ ಟೈಟಲ್‌ ಅನೌನ್ಸ್‌ ಮಾಡುವುದಾಗಿ ತಿಳಿಸಿದ್ದರು. ಇದರಿಂದ ಸಿನಿ ರಸಿಕರು ಫುಲ್‌ ಖುಷ್‌ ಆಗಿದ್ದರು.

ಯಶ್‌ ಅವರು ಅಪ್ಲೋಡ್‌ ಮಾಡಿದ್ದ ಇಸ್ಟಾಗ್ರಾಮ್‌ ಪ್ರೊಫೈಲ್‌ ಫೋಟೋದಿಂದ ಯಶ್‌ 19 ಬಗ್ಗೆ ಮತ್ತೆ ಚರ್ಚೆ ಶುರುವಾಗಿತ್ತು. ಲೋಡಿಂಗ್‌ ಎಂಬ ಬರಹವಿರುವ ಫೋಟೊವನ್ನು ಯಶ್‌ ಅವರು ಅಪ್‌ಲೋಡ್‌ ಮಾಡಿದ್ದರು. ಈ ಫೋಟೊ ಮೂಲಕ ಯಶ್‌ ತಮ್ಮ ಮುಂದಿನ ಸಿನಿಮಾ ಅಪ್ಡೇಟ್‌ ನೀಡಿದ್ದಾರಾ ಎಂಬ ಕುತೂಹಲ ಮೂಡಿತ್ತು.

ಯಶ್‌ ಅವರ ಮುಂದಿನ ಸಿನಿಮಾದ ಟೈಟಲ್‌ ಅನೌನ್ಸ್‌ಮೆಂಟ್‌ ಗಾಗಿ ಅಭಿಮಾನಿಗಳು ಬಹಳಾ ಉತ್ಸಾಹದಿಂದ ಎದುರುನೋಡುತ್ತಿದ್ದಾರೆ. ಈ ನಡುವೆ ಸಾಯಿ ಪಲ್ಲವಿ ಅವರು ಯಶ್‌ ಅವರ ಮುಂದಿನ ಚಿತ್ರಕ್ಕೆ ನಾಯಕಿಯಾಗಲಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ಚಿತ್ರ ತಂಡದಿಂದ ಅಧಿಕೃತ ಮಾಹಿತಿ ಹೊರಬರಬೇಕಿದೆ.

lokesh

Recent Posts

ರಷ್ಯಾ ಮೇಲೆ ಉಕ್ರೇನ್‌ ಭೀಕರ ಡ್ರೋನ್‌ ದಾಳಿ: 4 ಮಂದಿ ಸಾವು

ಮಾಸ್ಕೋ: ಉಕ್ರೇನ್‌ ಶನಿವಾರ ರಾತ್ರೋರಾತ್ರಿ ಮಾಸ್ಕೋ ಸೇರಿದಂತೆ ರಷ್ಯಾದ ಅನೇಕ ಭಾಗಗಳನ್ನು ಗುರಿಯಾಗಿಸಿಕೊಂಡು ಡ್ರೋನ್‌ ದಾಳಿ ನಡೆಸಿದೆ. ಈ ವೈಮಾನಿಕ…

6 hours ago

ಮೈಸೂರಿನಲ್ಲಿ ಜನರೊಂದಿಗೆ ಜನತಾದಳ ಕಾರ್ಯಕ್ರಮ

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೇ ಸೋಲಿಸಿದ ಕ್ಷೇತ್ರ ಎಂಬ ಖ್ಯಾತಿ ಹೊಂದಿರುವ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಭಾನುವಾರ ನಡೆದ ಜನರೊಂದಿಗೆ ಜನತಾದಳ…

6 hours ago

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡ ಪರಿಣಾಮ ರಾಜ್ಯದ ಅನೇಕ ಕಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…

7 hours ago

ಕಳೆದ ಮೂರು ದಿನಗಳಿಂದ ಮಹದೇಶ್ವರ ಬೆಟ್ಟಕ್ಕೆ ಲಕ್ಷಾಂತದ ಮಂದಿ ಭಕ್ತರು ಭೇಟಿ

ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ…

7 hours ago

ಕಾಡಿನಲ್ಲಿ ಅಕ್ರಮವಾಗಿ ಚರ್ಚ್‌ ನಿರ್ಮಾಣ: 40ಕ್ಕೂ ಹೆಚ್ಚು ಜನರ ಬಂಧನ

ಕೊಡಗು: ಕಾಡಿನೊಳಗೆ ಅಕ್ರಮವಾಗಿ ನಿರ್ಮಿಸಿಕೊಂಡಿದ್ದ ಚರ್ಚ್‌ ಉದ್ಘಾಟನೆಗೆ ಬಂದಿದ್ದ 40ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕೊಡಗಿನಲ್ಲಿ…

8 hours ago

ಹಾರ್ಮುಜ್‌ ದಾಟಿ ಸುರಕ್ಷಿತವಾಗಿ ಭಾರತಕ್ಕೆ ಬಂತು 20,000 ಟನ್‌ ಎಲ್‌ಪಿಜಿ ಟ್ಯಾಂಕರ್‌

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಿರಂತರ ಉದ್ವಿಗ್ನತೆ ಮತ್ತು ಹೆಚ್ಚುತ್ತಿರುವ ಇಂಧನ ಬೆಲೆಗಳ ನಡುವೆಯೇ ಸುಮಾರು 20,000 ಟನ್ ಎಲ್‍ಪಿಜಿಯನ್ನು ಹೊತ್ತ…

8 hours ago