ಚಿತ್ರ ಮಂಜರಿ

ಯಶ್‌ ಗೆ ನಾಯಕಿ ಆಗ್ತಾರಾ ಸಾಯಿ ಪಲ್ಲವಿ ?

ರಾಕಿಂಗ್ ಸ್ಟಾರ್‌ ಯಶ್‌ ಅವರ ಮುಂದಿನ ಸಿನಿಮಾಗಾಗಿ ಸಿನಿಪ್ರಿಯರು ಒಂದುವರೆ ವರ್ಷಗಳಿಂದ ಕಾದು ಕುಳಿತಿದ್ದಾರೆ. ಈ ನಡುವೆ ರಾಕಿ ಬಾಯ್‌ ಸಿನಿಮಾ ಬಗ್ಗೆ ಆಗಾಗ ಗಾಳಿಸುದ್ದಿಗಳು ಹರಿದಾಡುತ್ತಲೇ ಇರುತ್ತವೆ. ಇದೀಗ ಅಂತಹದ್ದೇ ಒಂದು ಸುದ್ದಿ ಗಾಂಧಿ ನಗರದ ಗಲ್ಲಿಗಳಲ್ಲಿ ಹರಿದಾಡುತ್ತಿದೆ.

ಯಶ್‌ ಅವರ ಮುಂದಿನ ಸಿನಿಮಾದಲ್ಲಿ ನಟಿ ಸಾಯಿಪಲ್ಲವಿ ನಾಯಕಿಯಾಗಿ ಆಯ್ಕೆಯಾಗಿದ್ದು, ಈ ಮೂಲಕ ಚಂದನವನಕ್ಕೆ ಎಂಟ್ರಿ ಕೊಡಲಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ ಈ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಸಿಕ್ಕಿಲ್ಲ.

ಮೊನ್ನೆಯಷ್ಟೇ ರಾಕಿ ಬಾಯ್‌ ತಮ್ಮ ಇನ್ಸ್ಟಾಗ್ರಾಮ್‌ ಪ್ರೋಫೈಲ್‌ ಫೋಟೋ ಬದಲಿಸಿದ್ದರು. ಇದರಿಂದ ಅಭಿಮಾನಿಗಳಲ್ಲಿ ಯಶ್‌ ತಮ್ಮ ಮುಂದಿನ ಚಿತ್ರದ ಅಪ್ಡೇಟ್‌ ನೀಡಿದ್ದಾರಾ ? ಎಂಬ ಕುತೂಹಲ ಮೂಡಿತ್ತು. ನಂತರ ಯಶ್‌ ಅವರು ಮತ್ತೊಂದು ಪೋಸ್ಟ್‌ ಹಂಚಿಕೊಂಡಿದ್ದು, ಡಿಸೆಂಬರ್‌ 8 ಕ್ಕೆ ತಮ್ಮ ಮುಂದಿನ ಸಿನಿಮಾದ ಟೈಟಲ್‌ ಅನೌನ್ಸ್‌ ಮಾಡುವುದಾಗಿ ತಿಳಿಸಿದ್ದರು. ಇದರಿಂದ ಸಿನಿ ರಸಿಕರು ಫುಲ್‌ ಖುಷ್‌ ಆಗಿದ್ದರು.

ಯಶ್‌ ಅವರು ಅಪ್ಲೋಡ್‌ ಮಾಡಿದ್ದ ಇಸ್ಟಾಗ್ರಾಮ್‌ ಪ್ರೊಫೈಲ್‌ ಫೋಟೋದಿಂದ ಯಶ್‌ 19 ಬಗ್ಗೆ ಮತ್ತೆ ಚರ್ಚೆ ಶುರುವಾಗಿತ್ತು. ಲೋಡಿಂಗ್‌ ಎಂಬ ಬರಹವಿರುವ ಫೋಟೊವನ್ನು ಯಶ್‌ ಅವರು ಅಪ್‌ಲೋಡ್‌ ಮಾಡಿದ್ದರು. ಈ ಫೋಟೊ ಮೂಲಕ ಯಶ್‌ ತಮ್ಮ ಮುಂದಿನ ಸಿನಿಮಾ ಅಪ್ಡೇಟ್‌ ನೀಡಿದ್ದಾರಾ ಎಂಬ ಕುತೂಹಲ ಮೂಡಿತ್ತು.

ಯಶ್‌ ಅವರ ಮುಂದಿನ ಸಿನಿಮಾದ ಟೈಟಲ್‌ ಅನೌನ್ಸ್‌ಮೆಂಟ್‌ ಗಾಗಿ ಅಭಿಮಾನಿಗಳು ಬಹಳಾ ಉತ್ಸಾಹದಿಂದ ಎದುರುನೋಡುತ್ತಿದ್ದಾರೆ. ಈ ನಡುವೆ ಸಾಯಿ ಪಲ್ಲವಿ ಅವರು ಯಶ್‌ ಅವರ ಮುಂದಿನ ಚಿತ್ರಕ್ಕೆ ನಾಯಕಿಯಾಗಲಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ಚಿತ್ರ ತಂಡದಿಂದ ಅಧಿಕೃತ ಮಾಹಿತಿ ಹೊರಬರಬೇಕಿದೆ.

lokesh

Recent Posts

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

1 hour ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

2 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

4 hours ago

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

7 hours ago

ಓದುಗರ ಪತ್ರ: ಸತ್ಪ್ರಜೆಗಳಾಗಿ ಜೀವಿಸುವುದೇ ಸ್ವಾತಂತ್ರ್ಯ ಹೋರಾಟಗಾರರಿಗೆ ನಾವು ನೀಡುವ ಗೌರವ

ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…

7 hours ago

ಓದುಗರ ಪತ್ರ: ಸೇತುವೆ ಅವ್ಯವಸ್ಥೆ; ಸಂಚಾರ ದುಸ್ತರ

ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…

7 hours ago