ದೊಡ್ಮನೆಗೆ ಮತ್ತೊಂದು ಸಲ ಒಳ್ಳೆ ಹುಡುಗ ಪ್ರಥಮ್ ಎಂಟ್ರಿ ಕೊಟ್ಟಿದ್ದಾರೆ. ಬಿಗ್ ಬಾಸ್ ಸೀಸನ್ 4ರಲ್ಲಿ ಕಂಟೆಸ್ಟೆಂಟ್ ಆಗಿ ಹೋದವರು, ಟ್ರೋಫಿ ಗೆದ್ದುಕೊಂಡು ಹೊರ ಬಂದರು. ಇದೀಗ ಪ್ರಥಮ್ ಟಾಸ್ಕ್ ಆಡಿಸುವುದಕ್ಕಾಗಿ ಮನೆ ಒಳಗೆ ಎಂಟ್ರಿ ಕೊಟ್ಟಿದ್ದಾರೆ. ಲಾರ್ಡ್ ಪ್ರಥಮ್ ಹೆಸರಿನಲ್ಲಿ ಬಿಗ್ ಬಾಸ್ ಮನೆ ಪ್ರವೇಶ ಮಾಡಿದ್ದಾರೆ. ಬಿಗ್ ಬಾಸ್ ಮನೆಗೆ ಎಂಟ್ರಿ ಕೊಡುತ್ತಲೇ ಗತ್ತಿನ ಮಾತುಗಳಿಂದ ಒಂದು ರೀತಿಯಲ್ಲಿ ಕುತೂಹಲ ಮೂಡಿಸಿದ್ದಾರೆ.
ದೊಡ್ಮನೆಯ ಆಟ ಜೋರಾಗಿದೆ. ದಿನದಿಂದ ದಿನಕ್ಕೆ ಮನೆಯ ರಂಗು ಬದಲಾಗುತ್ತಿದೆ. ಈಗ ಮನೆಯ ಅಸಲಿ ಆಟ ಶುರುವಾಗಿದೆ. ಬಿಗ್ ಮನೆಗೆ ಗನ್ಮ್ಯಾನ್ಗಳು ದಿಢೀರ್ ಎಂದು ಎಂಟ್ರಿ ಕೊಟ್ಟಿದ್ದಾರೆ. ಗನ್ ಮ್ಯಾನ್ಗಳ ಎಂಟ್ರಿ ನೋಡಿ ಮನೆಮಂದಿ ಶಾಕ್ ಆಗಿದ್ದಾರೆ.
ಬಿಗ್ ಬಾಸ್ ಮನೆಗೆ 8 ಜನ ಗನ್ ಮ್ಯಾನ್ಗಳ ಆಗಮನವಾಗಿದೆ. ಸಡನ್ ಆಗಿ ಗನ್ ಮ್ಯಾನ್ಗಳು ಎಂಟ್ರಿ ಕೊಟ್ಟಿರೋದು ನೋಡಿ ಮನೆ ಮಂದಿ ಒಮ್ಮೆ ಸೈಲೆಂಟ್ ಆಗಿದ್ದಾರೆ. ಬಳಿಕ ಚಪ್ಪಾಳೆ ಹೊಡೆದು ಸ್ಪರ್ಧಿಗಳು ಸ್ವಾಗತ ಕೋರಿದ್ದಾರೆ. ಅವರ ಮುಖದಲ್ಲಿರೋ ಮಂದಹಾಸ ನೋಡಿ ಮನೆಗೆ ಹೊಸ ಸೆಲೆಬ್ರಿಟಿ ಎಂಟ್ರಿ ಕೊಡ್ತಿದ್ದಾರಾ ಎಂಬ ಅನುಮಾನ ಮೂಡಿದೆ.
ಅಕ್ಟೋಬರ್ 9ರ ಎಪಿಸೋಡ್ನಲ್ಲಿ ಶಾಸಕ ಪ್ರದೀಪ್ ಈಶ್ವರ್ ಅವರು ಆಗಮಿಸುವ ಮೂಲಕ ಅಚ್ಚರಿ ಮೂಡಿಸಿದ್ದರು. ಬಿಗ್ ಮನೆಯಲ್ಲಿ 3 ಗಂಟೆಗಳ ಕಾಲ ಕಳೆಯುವ ಮೂಲಕ ಸ್ಪರ್ಧಿಗಳಿಗೆ ಸ್ಪೂರ್ತಿ ತುಂಬಿದ್ದರು. ಪ್ರದೀಪ್ ಈಶ್ವರ್ ಅವರ ಎಂಟ್ರಿಗೆ ರಾಜಕೀಯ ರಂಗದಲ್ಲಿ ಕೋಲಾಹಲ ಎಬ್ಬಿಸಿದ್ದರೂ ಕೂಡ ಪ್ರೇಕ್ಷಕರಿಗೆ ಮನರಂಜನೆ ನೀಡಿತ್ತು.
ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಕರಣದಲ್ಲಿ ತಮ್ಮ ಹೆಸರನ್ನು ಕೆಲವರು ಅನಗತ್ಯವಾಗಿ ಉಲ್ಲೇಖಿಸುತ್ತಿದ್ದಾರೆ. ನಾನು ಯಾವುದೇ ರೀತಿಯ ತಪ್ಪು ಮಾಡಿಲ್ಲ.…
ಲಕ್ನೋ: ಜೂನ್.21ರಂದು ನಡೆಯಲಿರುವ ನೀಟ್-ಯುಜಿ ಮರುಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳ ಬಸ್ ಪ್ರಯಾಣದ ದರದಲ್ಲಿ ಶೇ.50ರಷ್ಟು ರಿಯಾಯಿತಿ ನೀಡುವುದಾಗಿ ಉತ್ತರ…
ಮುಂಬೈ: ದೇಶದಲ್ಲಿ ಮುಂಗಾರು ಪ್ರವೇಶಿದರೂ ಮುಂಬೈನಲ್ಲಿ ಮಳೆಯ ಕೊರತೆ ಎದುರಾಗಿದೆ. ಮಳೆ ಕೊರತೆ ಎದುರಾದ ಪರಿಣಾಮ ಜಲಾಶಯಗಳಲ್ಲಿ ನೀರಿನ ಮಟ್ಟ…
ಎಚ್.ಎಸ್.ದಿನೇಶ್ಕುಮಾರ್ ಲಿಕ್ಕರ್ ಗ್ಯಾರೇಜ್, ಫಾಕ್ಸ್ ಡೆನ್ಗೆ ಮಾತ್ರ ಅನುಮತಿ; ನೋಟಿಸ್ ಜಾರಿ ಮಾಡಿ ಸುಮ್ಮನಾಗಿದ್ದ ಅಧಿಕಾರಿಗಳು?; ಅಬಕಾರಿ ಡಿಸಿ ಅಮಾನತ್ತಿಗೆ…
ಚಾಮರಾಜನಗರ ತಾಲ್ಲೂಕಿನ ಮಸಾಣಪುರ ಗ್ರಾಮದಲ್ಲಿ ಬಾಬಾ ಸಾಹೇಬ ಡಾ.ಅಂಬೇಡ್ಕರ್ರವರ ಭಾವಚಿತ್ರಕ್ಕೆ ಅಪಮಾನ ಮಾಡಿರುವ ಘಟನೆ ನಿಜಕ್ಕೂ ತಲೆತಗ್ಗಿಸುವಂಥ ಹೇಯ ಕೃತ್ಯವಾಗಿದೆ.ಈ…
‘ಗಿಡವಾಗಿ ಬಗ್ಗದ್ದು ಮರವಾಗಿ ಬಗ್ಗೀತೇ’ ಎಂಬ ಗಾದೆಯ ಮಾತು ನಿಜಕ್ಕೂ ಇಂದಿನ ಕಾಲಘಟ್ಟಕ್ಕೆ ಹೆಚ್ಚಾಗಿ ಅನ್ವಯಿಸುತ್ತದೆ. ಏಕೆಂದರೆ ಸಮಯ ಪಾಲನೆ…