ಸೂಪರ್ ಸ್ಟಾರ್ ರಜನಿಕಾಂತ್, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಕಾಲು ಮುಟ್ಟಿ ನಮಸ್ಕಾರ ಮಾಡಿದ ವಿಚಾರ ಸಾಕಷ್ಟು ಸುದ್ದಿಯಾಗಿತ್ತು. ಹಿರಿಯರಾದ ರಜನಿಕಾಂತ್ ಕಿರಿಯರೊಬ್ಬರ ಕಾಲು ಮುಟ್ಟಿ ನಮಸ್ಕಾರ ಮಾಡಿದ್ದು ತಮಿಳಿನ ಅಸ್ಮಿತೆಗೆ ಧಕ್ಕೆಯಾಗಿದೆ ಎಂದು ಬಣ್ಣಿಸಲಾಗಿತ್ತು. ಈ ಕುರಿತು ತಮಿಳು ನಾಡಿನ ಬಿಜೆಪಿ ಅಧ್ಯಕ್ಷ, ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಮಾತನಾಡಿದ್ದು. ಯೋಗಿ ಆದಿತ್ಯನಾಥ್ ಅವರು ಯೋಗಿ ಆಗಿದ್ದರಿಂದ ಕಾಲು ಮುಟ್ಟಿ ನಮಸ್ಕರಿಸುವುದರಲ್ಲಿ ತಪ್ಪೇನೂ ಇಲ್ಲ ಎಂದಿದ್ದಾರೆ.
ಈ ವಿಷಯಕ್ಕೆ ಸಂಬಂಧಿಸಿದಂತೆ ನಿನ್ನೆಯಷ್ಟೇ ಪ್ರವಾಸ ಮುಗಿಸಿಕೊಂಡು ಚೆನ್ನೈಗೆ ವಾಪಸ್ಸಾಗಿರುವ ರಜನಿಕಾಂತ್, ಮಾಧ್ಯಮಗಳ ಜೊತೆ ಮಾತನಾಡಿ ಯೋಗಿಗಳು, ತಪಸ್ವಿಗಳು, ಮಹಾತ್ಮರು ನನಗಿಂತ ಎಷ್ಟೇ ಚಿಕ್ಕವರಾಗಿದ್ದರೂ, ಅವರ ಕಾಲು ಹಿಡಿದುಕೊಂಡು ಆಶೀರ್ವಾದ ಪಡೆಯುವುದು ನನ್ನ ಅಭ್ಯಾಸ. ಅದಕ್ಕೆ ಬೇರೆ ಅರ್ಥ ಕಲ್ಪಿಸಬೇಕಿಲ್ಲ ಎಂದು ರಜನಿ ಹೇಳಿದ್ದಾರೆ. ಈ ಮೂಲಕ ವಿವಾದಕ್ಕೆತೆರೆ ಎಳೆಯುವ ಪ್ರಯತ್ನ ಮಾಡಿದ್ದರು.
ಜೈಲರ್ ಸಿನಿಮಾ ಯಶಸ್ಸಿನ ಬೆನ್ನಲ್ಲೇ ರಜನಿಕಾಂತ್ ಟೆಂಪಲ್ ರನ್ ಮಾಡುತ್ತಿದ್ದರು. ಸಿನಿಮಾ ರಿಲೀಸ್ ವೇಳೆ ಅವರು ಹಿಮಾಲಯಕ್ಕೆ ಹಾರಿದ್ದರು. ಅಲ್ಲಿ ಧ್ಯಾನಕ್ಕೆ ಶರಣಾಗಿದ್ದರು. ಅಲ್ಲಿಂದ ಹೊರಟು ಇದೀಗ ಉತ್ತರ ಪ್ರದೇಶದ ಹಲವು ದೇವಸ್ಥಾನಗಳಿಗೆ ಭೇಟಿ ನೀಡಿದ್ದರು. ಅಯೋಧ್ಯಗೆ ತೆರಳಿ ಶ್ರೀರಾಮನ ದರ್ಶನ ಪಡೆದಿದ್ದಾರೆ. ನಿರ್ಮಾಣ ಹಂತದಲ್ಲಿರುವ ದೇವಸ್ಥಾನವನ್ನೂ ಅವರು ವೀಕ್ಷಣೆ ಮಾಡಿದ್ದಾರೆ.
ಮಂಡ್ಯ ಜಿಲ್ಲೆಯ ಮುತ್ತತ್ತಿಯಲ್ಲಿ ಕಾವೇರಿ ನದಿ ನೀರಿಗೆ ಇಳಿದು ಸೆಲ್ಛಿ ತೆಗೆದುಕೊಳ್ಳಲು ಹೋದ ಒಂದೇ ಕುಟುಂಬದ ನಾಲ್ವರು ಹಾಗೂ ಕಾರು…
ಚಿಕ್ಕಬಳ್ಳಾಪುರ ಶಾಸಕರಾದ ಪ್ರದೀಪ್ ಈಶ್ವರ್ ಅವರ ಮೇಲೆ ಜಾ.ದಳ ಕಾರ್ಯಕರ್ತರೊಬ್ಬರು ಚಪ್ಪಲಿಯನ್ನು ಎಸೆದಿದ್ದು, ಈಗಾಗಲೇ ಆ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.…
ಸರ್ಕಾರದ ಯಾವುದೇ ಯೋಜನೆ, ಕಾರ್ಯಕ್ರಮ, ಸವಲತ್ತು ಮೊದಲು ದಲಿತ, ದಮನಿತ, ಶೋಷಿತ ವರ್ಗಕ್ಕೆ ತಲುಪಬೇಕು. ಅವರು ಸಾಮಾಜಿಕವಾಗಿ, ಆರ್ಥಿಕವಾಗಿ ಮೇಲೆ…
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬಿಡದಿ ಟೌನ್ ಶಿಪ್ ನಿರ್ಮಾಣ ಮಾಡುವ ಮೊದಲು ಮತ್ತೊಮ್ಮೆ ಅದರ ಸಾಧಕ ಬಾಧಕಗಳ ಬಗ್ಗೆ ಯೋಚಿಸಿ…
ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಭಕ್ತರು ನೀಡಿದ ಸಾವಿರಾರು ಕೋಟಿ ರೂಪಾಯಿ ದೇಣಿಗೆ ಹಣ, ಆಭರಣಗಳ ಕಳ್ಳತನ ಪ್ರಕರಣ ರಾಮಭಕ್ತರ ವಿಶ್ವಾಸವನ್ನು…
ಎಚ್.ಎಸ್.ದಿನೇಶ್ ಕುಮಾರ್ ಮೈಸೂರಿನ ಶ್ರೀರಾಂಪುರದ ಉದ್ಯಾನದಲ್ಲಿರುವ ಶೌಚಾಲಯದ ದುಸ್ಥಿತಿ ಮೈಸೂರು: ಜನರ ಲಕ್ಷಾಂತರ ರೂ. ತೆರಿಗೆ ಹಣವನ್ನು ವ್ಯಯಿಸಿ ಕಟ್ಟಿಸಿರುವ…