ಸೂಪರ್ ಸ್ಟಾರ್ ರಜನಿಕಾಂತ್, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಕಾಲು ಮುಟ್ಟಿ ನಮಸ್ಕಾರ ಮಾಡಿದ ವಿಚಾರ ಸಾಕಷ್ಟು ಸುದ್ದಿಯಾಗಿತ್ತು. ಹಿರಿಯರಾದ ರಜನಿಕಾಂತ್ ಕಿರಿಯರೊಬ್ಬರ ಕಾಲು ಮುಟ್ಟಿ ನಮಸ್ಕಾರ ಮಾಡಿದ್ದು ತಮಿಳಿನ ಅಸ್ಮಿತೆಗೆ ಧಕ್ಕೆಯಾಗಿದೆ ಎಂದು ಬಣ್ಣಿಸಲಾಗಿತ್ತು. ಈ ಕುರಿತು ತಮಿಳು ನಾಡಿನ ಬಿಜೆಪಿ ಅಧ್ಯಕ್ಷ, ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಮಾತನಾಡಿದ್ದು. ಯೋಗಿ ಆದಿತ್ಯನಾಥ್ ಅವರು ಯೋಗಿ ಆಗಿದ್ದರಿಂದ ಕಾಲು ಮುಟ್ಟಿ ನಮಸ್ಕರಿಸುವುದರಲ್ಲಿ ತಪ್ಪೇನೂ ಇಲ್ಲ ಎಂದಿದ್ದಾರೆ.
ಈ ವಿಷಯಕ್ಕೆ ಸಂಬಂಧಿಸಿದಂತೆ ನಿನ್ನೆಯಷ್ಟೇ ಪ್ರವಾಸ ಮುಗಿಸಿಕೊಂಡು ಚೆನ್ನೈಗೆ ವಾಪಸ್ಸಾಗಿರುವ ರಜನಿಕಾಂತ್, ಮಾಧ್ಯಮಗಳ ಜೊತೆ ಮಾತನಾಡಿ ಯೋಗಿಗಳು, ತಪಸ್ವಿಗಳು, ಮಹಾತ್ಮರು ನನಗಿಂತ ಎಷ್ಟೇ ಚಿಕ್ಕವರಾಗಿದ್ದರೂ, ಅವರ ಕಾಲು ಹಿಡಿದುಕೊಂಡು ಆಶೀರ್ವಾದ ಪಡೆಯುವುದು ನನ್ನ ಅಭ್ಯಾಸ. ಅದಕ್ಕೆ ಬೇರೆ ಅರ್ಥ ಕಲ್ಪಿಸಬೇಕಿಲ್ಲ ಎಂದು ರಜನಿ ಹೇಳಿದ್ದಾರೆ. ಈ ಮೂಲಕ ವಿವಾದಕ್ಕೆತೆರೆ ಎಳೆಯುವ ಪ್ರಯತ್ನ ಮಾಡಿದ್ದರು.
ಜೈಲರ್ ಸಿನಿಮಾ ಯಶಸ್ಸಿನ ಬೆನ್ನಲ್ಲೇ ರಜನಿಕಾಂತ್ ಟೆಂಪಲ್ ರನ್ ಮಾಡುತ್ತಿದ್ದರು. ಸಿನಿಮಾ ರಿಲೀಸ್ ವೇಳೆ ಅವರು ಹಿಮಾಲಯಕ್ಕೆ ಹಾರಿದ್ದರು. ಅಲ್ಲಿ ಧ್ಯಾನಕ್ಕೆ ಶರಣಾಗಿದ್ದರು. ಅಲ್ಲಿಂದ ಹೊರಟು ಇದೀಗ ಉತ್ತರ ಪ್ರದೇಶದ ಹಲವು ದೇವಸ್ಥಾನಗಳಿಗೆ ಭೇಟಿ ನೀಡಿದ್ದರು. ಅಯೋಧ್ಯಗೆ ತೆರಳಿ ಶ್ರೀರಾಮನ ದರ್ಶನ ಪಡೆದಿದ್ದಾರೆ. ನಿರ್ಮಾಣ ಹಂತದಲ್ಲಿರುವ ದೇವಸ್ಥಾನವನ್ನೂ ಅವರು ವೀಕ್ಷಣೆ ಮಾಡಿದ್ದಾರೆ.
ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…
ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…
ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…