ಚಿತ್ರ ಮಂಜರಿ

ಕನ್ನಡದ ಸಾಕ್ಷ್ಯಚಿತ್ರ ‘ಕಪ್ಪೆ ರಾಗʼ ಚಿತ್ರಕ್ಕೆ ಸಂದ ಜಾಕ್ಸನ್ ವೈಲ್ಡ್ ಅವಾರ್ಡ್

ಬೆಂಗಳೂರು : ಕನ್ನಡದ ಮೊದಲ ವೈಲ್ಡ್ ಲೈಫ್ ಮ್ಯೂಸಿಕಲ್ ಡಾಕ್ಯುಮೆಂಟರಿ ಚಿತ್ರವಾದ ʼಕಪ್ಪೆ ರಾಗʼಕ್ಕೆ ಗ್ರೀನ್ ಆಸ್ಕರ್ ಎಂದೇ ಖ್ಯಾತಿ ಪಡೆದಿರುವ ಅಂತಾರಾಷ್ಟ್ರೀಯ ಜಾಕ್ಸನ್ ವೈಲ್ಡ್ ಅವಾರ್ಡ್ ದೊರೆತಿದೆ.

ಈ ಬಗ್ಗೆ ಸಿಎಂ ಸಿದ್ದರಾಮಯ್ಯ, ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಸೇರಿದಂತೆ ಹಲವು ಗಣ್ಯರು ಸಂತಸ ವ್ಯಕ್ತಪಡಿಸಿದ್ದು, ಪ್ರತಿಷ್ಠಿತ ಜಾಕ್ಸನ್ ವೈಲ್ಡ್ ಅವಾರ್ಡ್ ಗೆ ಭಾಜನವಾಗಿರುವ ಕನ್ನಡದ ಮೊದಲ ‘ವೈಲ್ಡ್ ಲೈಫ್ ಮ್ಯೂಸಿಕಲ್ ಡಾಕ್ಯು ಫಿಲಂ’ ಕಪ್ಪೆರಾಗ ಚಿತ್ರತಂಡಕ್ಕೆ ಅಭಿನಂದನೆಗಳು ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್‌ ಮಾಡಿದ್ದಾರೆ.

“ಕರುನಾಡಿನ ಪ್ರತಿಭೆಗಳ ಪರಿಶ್ರಮದ ಚಿತ್ರಕ್ಕೆ ಗ್ರೀನ್ ಆಸ್ಕರ್ ಎಂದೇ ಹೆಸರುವಾಸಿಯಾಗಿರುವ ಜಾಕ್ಸನ್ ವೈಲ್ಡ್ ಅವಾರ್ಡ್ ‌ನಂತ ಅಂತಾರಾಷ್ಟ್ರೀಯ ಮಟ್ಟದ ಪ್ರಶಸ್ತಿ ದೊರೆತದ್ದು ಪ್ರತಿಯೊಬ್ಬ ಕನ್ನಡಿಗನಿಗೂ ಹೆಮ್ಮೆಯ ಸಂಗತಿ. ಚಿತ್ರದ ನಿರ್ದೇಶಕ ಪ್ರಶಾಂತ್ ಎಸ್. ನಾಯ್ಕ ಮತ್ತವರ ತಂಡದ ಸಾಧನೆ ನಾಡಿನ ಯುವ ನಿರ್ದೇಶಕರಿಗೆ ಪ್ರೇರಣೆಯಾಗಲಿ, ಇಂಥ ಇನ್ನಷ್ಟು ಚಿತ್ರಗಳು ನಮ್ಮಲ್ಲಿ ಮೂಡಿಬಂದು, ಕನ್ನಡದ ಕಲರವ ಜಗದಗಲ ಮೊಳಗಲಿ ಎಂದು ಹಾರೈಸುತ್ತೇನೆ.” ಎಂದು ಅವರು ತಿಳಿಸಿದ್ದಾರೆ.

“ಪಶ್ಚಿಮ ಘಟ್ಟದಲ್ಲಿ ಕಂಡುಬರುವ ‘ಕುಂಬಾರ ಕಪ್ಪೆ’ ಎಂಬ ನಿಶಾಚರಿ ಕಪ್ಪೆಯ ಕುರಿತು ಕನ್ನಡಿಗರು ನಿರ್ಮಿಸಿರುವ ‘ಕಪ್ಪೆರಾಗ-ಕುಂಬಾರನ ಹಾಡು’ ಸಾಕ್ಷ್ಯಚಿತ್ರ, ಗ್ರೀನ್ ಆಸ್ಕರ್ ಎಂದೇ ಹೆಸರಾದ ಪ್ರತಿಷ್ಟಿತ ‘ಜ್ಯಾಕ್ಸನ್ ವೈಲ್ಡ್ ಮೀಡಿಯಾ’ ಪ್ರಶಸ್ತಿಗೆ ಭಾಜನಾವಾಗಿದೆ. ಪ್ರಶಸ್ತಿ ವಿಜೇತ ಸಾಕ್ಷ್ಯಚಿತ್ರ ಚಿತ್ರ ನಿರ್ಮಿಸಿದ ತಂಡಕ್ಕೆ ಅಭಿನಂದನೆಗಳು.” ಎಂದು ಸಚಿವ ದಿನೇಶ್‌ ಗುಂಡೂರಾವ್‌ ಅವರು ಟ್ವೀಟ್‌ ಮಾಡಿದ್ದಾರೆ.

ಕಪ್ಪೆ ರಾಗ ಹಾಡು ಅಮೆರಿಕದ ಪ್ರತಿಷ್ಠಿತ ಲಾಸ್ ಏಂಜಲೀಸ್‌ನ ಇಂಡಿಪೆಂಡೆಂಟ್ ಶಾರ್ಟ್ಸ್ ಅವಾರ್ಡ್‌ನಲ್ಲಿ ಅತ್ಯುತ್ತಮ ಸಂಗೀತ ವೀಡಿಯೋಗಾಗಿ ಚಿನ್ನದ ಪ್ರಶಸ್ತಿಯನ್ನು ಗೆದ್ದಿದೆ. ಅಲ್ಲದೆ, 13 ನೇ ದಾದಾ ಸಾಹೇಬ್ ಫಾಲ್ಕೆ ಚಲನಚಿತ್ರೋತ್ಸವ 2023 ರಲ್ಲಿ ಅತ್ಯುತ್ತಮ ಸಂಗೀತ ವೀಡಿಯೊ ತೀರ್ಪುಗಾರರ ಆಯ್ಕೆ ಪ್ರಶಸ್ತಿಯನ್ನು ಗೆದ್ದಿದೆ.

andolanait

Recent Posts

ಸಂಪ್‌ಗೆ ಬಿದ್ದು ಎರಡು ವರ್ಷದ ಮಗು ಸಾವು

ಮಂಡ್ಯ: ಮನೆಯ ಮುಂದಿನ ನೀರಿನ ಸಂಪ್‌ಗೆ ಬಿದ್ದು ಮಗು ಸಾವನ್ನಪ್ಪಿರುವ ಘಟನೆ ಪಾಂಡವಪುರ ತಾಲ್ಲೂಕಿನ ಲಕ್ಷ್ಮೀಸಾಗರ ಗ್ರಾಮದಲ್ಲಿ ನಡೆದಿದೆ. ಗ್ರಾಮದ…

8 hours ago

ಬಸ್-ಲಾರಿ ನಡುವೆ ಡಿಕ್ಕಿ; ಹಲವರಿಗೆ ಗಾಯ

ಗುಂಡ್ಲುಪೇಟೆ: ರಾಷ್ಟ್ರೀಯ ಹೆದ್ದಾರಿ ಮೈಸೂರು-ಊಟಿ ರಸ್ತೆಯ ಗುಂಡ್ಲುಪೇಟೆ ತಾಲ್ಲೂಕಿನ ಮಳವಳ್ಳಿ ಗೇಟ್ ಬಳಿ ಗೂಡ್ಸ್ ಲಾರಿ ಹಾಗೂ ಕೆಎಸ್ಆರ್‌ಟಿಸಿ ಬಸ್…

9 hours ago

ಸಿಡಿಲು ಬಡಿದು ರೈತ ಸಾವು

ಬೆಟ್ಟದಪುರ: ಸಿಡಿಲು ಬಡಿದು ರೈತನೊಬ್ಬ ಮೃತಪಟ್ಟಿರುವ ಘಟನೆ ಪಿರಿಯಾಪಟ್ಟಣ ತಾಲ್ಲೂಕಿನ ಸಂಗರಶೆಟ್ಟಹಳ್ಳಿ ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ಗ್ರಾಮದ ಎಸ್.ಟಿ.ಆನಂದ್ (೬೦)…

10 hours ago

ಟಾಟಾ ಏಸ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಗುಂಡ್ಲುಪೇಟೆ: ಟಾಟಾ ಏಸ್ ಹಾಗೂ ಬೈಕ್ ನಡುವೆ ಅಪಘಾತವಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಚಾಮರಾಜನಗರ-ಗುಂಡ್ಲುಪೇಟೆ ರಸ್ತೆಯ…

10 hours ago

ಒಂದು ವಾರ ವಿದೇಶಕ್ಕೆ ಹಾರಿದ ಪ್ರಧಾನಿ ಮೋದಿ: ಫ್ರಾನ್ಸ್, ಸ್ಲೋವಾಕಿಯಾ ಪ್ರವಾಸ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಫ್ರಾನ್ಸ್ ಮತ್ತು ಸ್ಲೊವಾಕಿಯಾಕ್ಕೆ ಒಂದು ವಾರದ ಭೇಟಿಗಾಗಿ ತೆರಳಿದ್ದಾರೆ. ಈ ಸಂದರ್ಭದಲ್ಲಿ…

11 hours ago

ಉಡುಪಿ ಶ್ರೀಕೃಷ್ಣಮಠಕ್ಕೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಭೇಟಿ

ಉಡುಪಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಇಂದು ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣನ ದರ್ಶನ…

12 hours ago