ಚಿತ್ರ ಮಂಜರಿ

ಸದ್ದಿಲ್ಲದೆ ಓಟಿಟಿಗೆ ಬಂತು ಜಗ್ಗೇಶ್ ಅಭಿನಯದ ರಾಘವೇಂದ್ರ ಸ್ಟೋರ್ಸ್‌

ನವರಸ ನಾಯಕ ಜಗ್ಗೇಶ್ ಅಭಿನಯದ ‘ರಾಘವೇಂದ್ರ ಸ್ಟೋರ್ಸ್’ ಚಿತ್ರವು ಚಿತ್ರಮಂದಿರಗಳಲ್ಲಿ ಯಶಸ್ವಿ ಪ್ರದರ್ಶನ ಕಂಡಿದೆ. ಏ.28ರಂದು ರಿಲೀಸ್ ಆಗಿದ್ದ ಚಿತ್ರದ ಬಗ್ಗೆ ಉತ್ತಮ ಮಾತುಗಳು ಕೇಳಿಬಂದಿತ್ತು.

ಹೊಂಬಾಳೆ ಫಿಲಂಸ್ ಬ್ಯಾನರಿನಲ್ಲಿ ನಿರ್ಮಾಣವಾಗಿದ್ದ ಚಿತ್ರವು ಇದೀಗ ಸದ್ದಿಲ್ಲದೆ ಓಟಿಟಿಗೆ ಬಂದಿದೆ. ಯಶಸ್ವಿ ನಿರ್ದೇಶಕ ಸಂತೋಷ್ ಆನಂದ್ ರಾಮ್ ಆ್ಯಕ್ಷನ್ ಕಟ್ ಹೇಳಿದ್ದ ‘ರಾಘವೇಂದ್ರ ಸ್ಟೋರ್ಸ್’ ಚಿತ್ರವು ಇದೀಗ ಅಮೆಜಾನ್ ಪ್ರೈಮ್ ನಲ್ಲಿ ರಿಲೀಸ್ ಆಗಿದೆ.

ಮದುವೆ ಆಗದ ವ್ಯಕ್ತಿಯೊಬ್ಬನ ಕಥೆಯನ್ನು ಸಂತೋಷ್ ಆನಂದ್ ರಾಮ್ ತೆರೆಗೆ ತಂದಿದ್ದರು. ಚಿತ್ರದಲ್ಲಿ ಜಗ್ಗೇಶ್ ಜೋಡಿಯಾಗಿ ಶ್ವೇತಾ ಶ್ರೀವಾಸ್ತವ್ ಮಿಂಚಿದ್ದು, ತಂದೆ ಪಾತ್ರದಲ್ಲಿ ದತ್ತಣ್ಣ, ಸ್ನೇಹಿತರ ಪಾತ್ರದಲ್ಲಿ ರವಿಶಂಕರ್‌ ಗೌಡ, ಮಿತ್ರಾ ಕಾಣಿಸಿಕೊಂಡಿದ್ದಾರೆ. ಅಚ್ಯುತ್‌ ಕುಮಾರ್ ಕೂಡ ಮುಖ್ಯ ಪಾತ್ರದಲ್ಲಿ ಗಮನ ಸೆಳೆದಿದ್ದಾರೆ.

ಇನ್ನೂ ಹಲವು ಚಿತ್ರಗಳಲ್ಲಿ ಪ್ರದರ್ಶನ ಕಾಣುತ್ತಿರುವ ಚಿತ್ರವನ್ನು ಸದ್ದಿಲ್ಲದೆ ಓಟಿಟಿ ವೇದಿಕೆಯಲ್ಲಿ ಬಿಡುಗಡೆ ಮಾಡಲಾಗಿದೆ. ಚಿತ್ರಮಂದಿರಗಳಲ್ಲಿ ಬಿಡುಗಡೆಯಾದ 20 ದಿನಗಳಲ್ಲೇ ಓಟಿಟಿಗೆ ಬಂದಿರುವುದು ಹಲವರಿಗೆ ಅಚ್ಚರಿ ಮೂಡಿಸಿದೆ.

andolanait

Recent Posts

ಗುಲ್‌ಮೊಹರ್‌ ಮೋಹದಲ್ಲಿ ಮೋಹಕ ಮೈಸೂರು

ಸಿರಿ ಮೈಸೂರು ಇದು ಬೇಸಿಗೆ ಕಾಲ. ಕೆಲ ದಿನಗಳ ಹಿಂದಷ್ಟೇ ಫ್ರಾನ್ಸ್‌ನಲ್ಲಿ ಕ್ಯಾನ್ಸ್ ಫಿಲಂ ಫೆಸ್ಟಿವಲ್ ನಡೆಯಿತು. ಜಗತ್ತಿನಾದ್ಯಂತದಿಂದ ಸುರಸುಂದರ…

17 mins ago

ಬೇಸತ್ತ ಮನಸ್ಸುಗಳು ಸಿನೆಮಾ ನಾಯಕರಿಗೆ ಯಾಕೆ ಮಾರುಹೋಗುತ್ತವೆ?

ವಿಕ್ರಮ್ ಹತ್ವಾರ್ ಮೊನ್ನೆ ತಮಿಳುನಾಡಿನಲ್ಲಿ ಸಿನಿಮಾ ನಟ ವಿಜಯ್ ಚುನಾವಣೆಯಲ್ಲಿ ಸಾಧಿಸಿದ ಗೆಲುವಿನ ಕುರಿತು ಅಲ್ಲಿ ಯಾವೆಲ್ಲ ಸಂಗತಿಗಳು ಪ್ರಭಾವ…

21 mins ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಮೇ.18 ಭಾನುವಾರ

46 mins ago

ಬಿಡದಿ ರೈತರ ಪರ ನನ್ನ ಹೋರಾಟ ಇಂದಿನಿಂದ ಆರಂಭ: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಘೋಷಣೆ

ಬೆಂಗಳೂರು: ಬಿಡದಿ ಟೌನ್ ಶಿಪ್ ಹೆಸರಿನಲ್ಲಿ ರೈತರ ಜಮೀನು ಕಿತ್ತುಕೊಂಡು ದಂಧೆ ನಡೆಸಲು ಹೊರಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ಮಾಜಿ…

15 hours ago

ಪಿರಿಯಾಪಟ್ಟಣ: ಸಿಡಿಲು ಬಡಿದು ಎರಡು ಹಸುಗಳು ಹಾಗೂ ಓರ್ವ ಮಹಿಳೆ ಸಾವು

ನವೀನ್‌ ಕುಮಾರ್:‌ ಪಿರಿಯಾಪಟ್ಟಣ ತಾಲ್ಲೂಕು ವರದಿಗಾರರು ಪಿರಿಯಾಪಟ್ಟಣ: ಸಿಡಿಲು ಬಡಿದು ಎರಡು ಹಸುಗಳು ಹಾಗೂ ಓರ್ವ ಮಹಿಳೆ ಸಾವನ್ನಪ್ಪಿರುವ ಘಟನೆ…

15 hours ago

ಹನೂರು| ಅಮಾವಾಸ್ಯೆ ಪ್ರಯುಕ್ತ ಮಲೆ ಮಹದೇಶ್ವರ ಬೆಟ್ಟಕ್ಕೆ ಹರಿದುಬಂದ ಭಕ್ತಸಾಗರ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಇಂದು ಬಾದಾಮಿ ಅಮಾವಾಸ್ಯೆ ಪ್ರಯುಕ್ತ…

16 hours ago