ಚಿತ್ರ ಮಂಜರಿ

ಎರಡೇ ದಿನಕ್ಕೆ 100 ಕೋಟಿ ಗಳಿಸಿದ ಜೈಲರ್

ಸೂಪರ್ ಸ್ಟಾರ್ ರಜನಿಕಾಂತ್ ಮತ್ತು ಸೆಂಚುರಿ ಸ್ಟಾರ್ ಶಿವರಾಜ್ ಕುಮಾರ್ ಕಾಂಬಿನೇಷನ್ ನ ಜೈಲರ್ ಚಿತ್ರಕ್ಕೆ ಅದ್ಭುತ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಸಿನಿಮಾ ರಿಲೀಸ್ ಆಗಿ ಕೇವಲ ಎರಡೇ ದಿನಕ್ಕೆ ಜೈಲರ್ ನೂರು ಕೋಟಿ ರೂಪಾಯಿ ಕ್ಲಬ್ ಸೇರಿದೆ. ಈ ಮೂಲಕ ಮತ್ತೆ ಸೂಪರ್ ಸ್ಟಾರ್ ಅಬ್ಬರಿಸಿದ್ದಾರೆ. ಬರೀ ಸೋಲುಗಳ ಸುಳಿಯಲ್ಲೇ ತಿರುಗುತ್ತಿದ್ದ ರಜನಿಗೆ ಜೈಲರ್ ಕೈ ಹಿಡಿದಿದೆ.

ಜೈಲರ್ ಸಿನಿಮಾ ವಿಶ್ವದಾದ್ಯಂತ ಬಿಡುಗಡೆ ಆಗಿದ್ದು, ಏಳು ಸಾವಿರಕ್ಕೂ ಹೆಚ್ಚು ಸ್ಕ್ರೀನ್ ಗಳಲ್ಲಿ ಪ್ರದರ್ಶನ ಕಾಣುತ್ತಿದೆ. ಬಹುತೇಕ ಎಲ್ಲ ರಾಷ್ಟ್ರಗಳಲ್ಲೂ ಗ್ರ್ಯಾಂಡ್ ಓಪನಿಂಗ್ ಪಡೆದುಕೊಂಡಿದೆ. ಹಾಗಾಗಿ ಮೊದಲನೇ ದಿನ 72 ಕೋಟಿ ರೂಪಾಯಿ ಬಾಚಿದ್ದರೆ, ಎರಡನೇ ದಿನದ ಅಂತ್ಯಕ್ಕೆ 100 ಕೋಟಿ ರೂಪಾಯಿ ದಾಟಿದೆ ಎಂದು ಹೇಳಲಾಗುತ್ತಿದೆ. ಸಾಲು ಸಾಲು ರಜೆಗಳು ಇರುವುದರಿಂದ ನಾಲ್ಕು ದಿನದ ಗಳಿಕೆ ಇನ್ನೂ ನೂರು ಕೋಟಿ ಆಗಲಿದೆ ಎಂದು ಅಂದಾಜಿಸಲಾಗಿದೆ.

ಜೈಲರ್ ಈ ವರ್ಷದ ಬಹುನಿರೀಕ್ಷಿತ ಸಿನಿಮಾಗಳಲ್ಲಿ ಒಂದಾಗಿತ್ತು. ತಲೈವ ವೃತ್ತಿ ಬದುಕಿನ ವಿಶೇಷ ಚಿತ್ರ‌ ಇದಾಗಿದ್ದು, ದಕ್ಷಿಣ ಭಾರತ ಹಾಗೂ ಬಾಲಿವುಡ್‌ ದಿಗ್ಗಜರು‌ ಜೈಲರ್ ಸಿನಿಮಾದ ಭಾಗವಾಗಿದ್ದಾರೆ. ಕಾವಾಲಾಯ್ಯ ಹಾಡಿನ ಮೂಲಕ ಭಾರೀ ಸೆನ್ಸೇಷನ್ ಸೃಷ್ಟಿಸಿದ್ದ ಈ ಚಿತ್ರ ಆಗಸ್ಟ್ 10ಕ್ಕೆ ಕನ್ನಡ, ತಮಿಳು ಹಾಗೂ ತೆಲುಗು ಭಾಷೆಯಲ್ಲಿ ರಿಲೀಸ್ ಆಗಿದೆ.

ಸನ್ ಪಿಕ್ಚರ್ ನಿರ್ಮಾಣ ಮಾಡಿರುವ ಈ ಸಿನಿಮಾವನ್ನು ನೆಲ್ಸನ್ ದಿಲೀಪ್ ಕುಮಾರ್ ನಿರ್ದೇಶಿಸಿದ್ದಾರೆ. ಇದೇ ಮೊದಲ ಬಾರಿಗೆ ರಜನಿಕಾಂತ್ ಜೊತೆ ಶಿವರಾಜ್‌ಕುಮಾರ್ ವಿಶೇಷ ಪಾತ್ರದಲ್ಲಿ ನಟಿಸಿರೋದು ಕುತೂಹಲ ಕೆರಳಿಸಿತ್ತು. ಇನ್ನು ಬಾಲಿವುಡ್‌ ನಟ ಜಾಕಿ ಶ್ರಾಫ್, ಮಲಯಾಳಂ ಸೂಪರ್‌ಸ್ಟಾರ್ ಮೋಹನ್‌ಲಾಲ್, ಟಾಲಿವುಡ್ ನಟ ಸುನಿಲ್, ನಾಗಬಾಬು, ನಟಿ ರಮ್ಯಾ ಕೃಷ್ಣ, ತಮನ್ನಾ ಭಾಟಿಯಾ ನಟಿಸಿದ್ದು, ಸಿನಿಪ್ರಿಯರಿಗೆ ಇವರೆಲ್ಲರನ್ನೂ ಒಂದೇ ಸಿನಿಮಾದಲ್ಲಿ ನೋಡುವ ಅವಕಾಶ ಸಿಕ್ಕಿದೆ.

lokesh

Recent Posts

ಮಂಗಳೂರು ಕುಕ್ಕರ್‌ ಬಾಂಬ್‌ ಸ್ಫೋಟ ಪ್ರಕರಣ : ಶಾರಿಕ್‌ಗೆ 10 ವರ್ಷ ಜೈಲು

ಬೆಂಗಳೂರು : ಮಂಗಳೂರು ನಗರದಲ್ಲಿ ನಡೆದಿದ್ದ ಆತಂಕಕಾರಿ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ಮೊಹಮ್ಮದ್ ಶಾರಿಕ್‌ನನ್ನು ದೋಷಿ…

10 mins ago

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭದ್ರತಾ ಲೋಪ ಪ್ರಕರಣ | ಸಿಬ್ಬಂದಿಗಳಿಂದಲೇ ಕೃತ್ಯ ; ಇಬ್ಬರ ಬಂಧನ

ಬೆಂಗಳೂರು : ಐಪಿಎಲ್ ಪಂದ್ಯಗಳ ವೇಳೆ ಭದ್ರತೆ ನಿರ್ವಹಣೆಗಾಗಿ ಎಂ.ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಅಳವಡಿಸಿದ್ದ ಸಿಸಿಟಿವಿ ಕ್ಯಾಮೆರಾಗಳ ಸಂಪರ್ಕ ಕಡಿತಗೊಳಿಸುವ ಮೂಲಕ…

41 mins ago

ಮೂರು ದಿನಗಳೊಳಗೆ ಒಪ್ಪಂದಕ್ಕೆ ಬನ್ನಿ : ಇರಾನ್‌ಗೆ ಟ್ರಂಪ್‌ ವಾರ್ನಿಂಗ್‌

ವಾಷಿಂಗ್ಟನ್‌ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇರಾನ್‌ಗೆ ಹೊಸ ಎಚ್ಚರಿಕೆ ನೀಡಿದ್ದು, ಕದನ ವಿರಾಮವನ್ನು ಒಪ್ಪಿಕೊಳ್ಳಲು ಮೂರು…

1 hour ago

ಕೆರೆಯ ನೀರಿಗೆ ಯೂರಿಯಾ ಬೆರಕೆ ; ನೀರು ಕುಡಿದು 7 ಕುರಿಗಳು ಸಾವು

ಹನೂರು : ಜಾನುವಾರುಗಳು ಕುಡಿಯುವ ಕೆರೆಯ ನೀರಿಗೆ ಯೂರಿಯಾ ಬೆರಕೆ ಮಾಡಿದ್ದ ವಿಷಪೂರಿತ ನೀರು ಕುಡಿದು ಏಳು ಕುರಿಗಳು ಮೃತಪಟ್ಟಿರುವ…

2 hours ago

KCET 2026 | ಸಿಇಟಿ ಪರೀಕ್ಷೆಯೆ ವಿಷಯವಾರು ಕೀ ಉತ್ತರ ಪ್ರಕಟಿಸಿದ ಕೆಇಎ

ಬೆಂಗಳೂರು : ಪ್ರಸಕ್ತ-2026ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ)ಯ ಎಲ್ಲ ವಿಷಯಗಳ ಕೀ ಉತ್ತರಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತನ್ನ…

2 hours ago

ಹೊರ್ಮುಜ್‌ ಬಿಕ್ಕಟ್ಟು : ಸಂಘರ್ಷ ಶಮನಕ್ಕೆ ಇರಾನ್‌ ಹೊಸ ದಾಳ

ಟೆಹ್ರಾನ್‌ : ಅಮೆರಿಕವು ಶಾಂತಿ ಮಾತುಕತೆಯನ್ನು ರದ್ದುಗೊಳಿಸಿದ ಬೆನ್ನಲ್ಲೇ ಇರಾನ್ ಸಂಘರ್ಷ ಶಮನಕ್ಕೆ ಹೊಸ ದಾಳ ಉರುಳಿಸಿದೆ. ಪಾಕಿಸ್ತಾನದ ಸಂಧಾನಕಾರರ…

3 hours ago