ಸೂಪರ್ ಸ್ಟಾರ್ ರಜನಿಕಾಂತ್ ಮತ್ತು ಸೆಂಚುರಿ ಸ್ಟಾರ್ ಶಿವರಾಜ್ ಕುಮಾರ್ ಕಾಂಬಿನೇಷನ್ ನ ಜೈಲರ್ ಚಿತ್ರಕ್ಕೆ ಅದ್ಭುತ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಸಿನಿಮಾ ರಿಲೀಸ್ ಆಗಿ ಕೇವಲ ಎರಡೇ ದಿನಕ್ಕೆ ಜೈಲರ್ ನೂರು ಕೋಟಿ ರೂಪಾಯಿ ಕ್ಲಬ್ ಸೇರಿದೆ. ಈ ಮೂಲಕ ಮತ್ತೆ ಸೂಪರ್ ಸ್ಟಾರ್ ಅಬ್ಬರಿಸಿದ್ದಾರೆ. ಬರೀ ಸೋಲುಗಳ ಸುಳಿಯಲ್ಲೇ ತಿರುಗುತ್ತಿದ್ದ ರಜನಿಗೆ ಜೈಲರ್ ಕೈ ಹಿಡಿದಿದೆ.
ಜೈಲರ್ ಸಿನಿಮಾ ವಿಶ್ವದಾದ್ಯಂತ ಬಿಡುಗಡೆ ಆಗಿದ್ದು, ಏಳು ಸಾವಿರಕ್ಕೂ ಹೆಚ್ಚು ಸ್ಕ್ರೀನ್ ಗಳಲ್ಲಿ ಪ್ರದರ್ಶನ ಕಾಣುತ್ತಿದೆ. ಬಹುತೇಕ ಎಲ್ಲ ರಾಷ್ಟ್ರಗಳಲ್ಲೂ ಗ್ರ್ಯಾಂಡ್ ಓಪನಿಂಗ್ ಪಡೆದುಕೊಂಡಿದೆ. ಹಾಗಾಗಿ ಮೊದಲನೇ ದಿನ 72 ಕೋಟಿ ರೂಪಾಯಿ ಬಾಚಿದ್ದರೆ, ಎರಡನೇ ದಿನದ ಅಂತ್ಯಕ್ಕೆ 100 ಕೋಟಿ ರೂಪಾಯಿ ದಾಟಿದೆ ಎಂದು ಹೇಳಲಾಗುತ್ತಿದೆ. ಸಾಲು ಸಾಲು ರಜೆಗಳು ಇರುವುದರಿಂದ ನಾಲ್ಕು ದಿನದ ಗಳಿಕೆ ಇನ್ನೂ ನೂರು ಕೋಟಿ ಆಗಲಿದೆ ಎಂದು ಅಂದಾಜಿಸಲಾಗಿದೆ.
ಜೈಲರ್ ಈ ವರ್ಷದ ಬಹುನಿರೀಕ್ಷಿತ ಸಿನಿಮಾಗಳಲ್ಲಿ ಒಂದಾಗಿತ್ತು. ತಲೈವ ವೃತ್ತಿ ಬದುಕಿನ ವಿಶೇಷ ಚಿತ್ರ ಇದಾಗಿದ್ದು, ದಕ್ಷಿಣ ಭಾರತ ಹಾಗೂ ಬಾಲಿವುಡ್ ದಿಗ್ಗಜರು ಜೈಲರ್ ಸಿನಿಮಾದ ಭಾಗವಾಗಿದ್ದಾರೆ. ಕಾವಾಲಾಯ್ಯ ಹಾಡಿನ ಮೂಲಕ ಭಾರೀ ಸೆನ್ಸೇಷನ್ ಸೃಷ್ಟಿಸಿದ್ದ ಈ ಚಿತ್ರ ಆಗಸ್ಟ್ 10ಕ್ಕೆ ಕನ್ನಡ, ತಮಿಳು ಹಾಗೂ ತೆಲುಗು ಭಾಷೆಯಲ್ಲಿ ರಿಲೀಸ್ ಆಗಿದೆ.
ಸನ್ ಪಿಕ್ಚರ್ ನಿರ್ಮಾಣ ಮಾಡಿರುವ ಈ ಸಿನಿಮಾವನ್ನು ನೆಲ್ಸನ್ ದಿಲೀಪ್ ಕುಮಾರ್ ನಿರ್ದೇಶಿಸಿದ್ದಾರೆ. ಇದೇ ಮೊದಲ ಬಾರಿಗೆ ರಜನಿಕಾಂತ್ ಜೊತೆ ಶಿವರಾಜ್ಕುಮಾರ್ ವಿಶೇಷ ಪಾತ್ರದಲ್ಲಿ ನಟಿಸಿರೋದು ಕುತೂಹಲ ಕೆರಳಿಸಿತ್ತು. ಇನ್ನು ಬಾಲಿವುಡ್ ನಟ ಜಾಕಿ ಶ್ರಾಫ್, ಮಲಯಾಳಂ ಸೂಪರ್ಸ್ಟಾರ್ ಮೋಹನ್ಲಾಲ್, ಟಾಲಿವುಡ್ ನಟ ಸುನಿಲ್, ನಾಗಬಾಬು, ನಟಿ ರಮ್ಯಾ ಕೃಷ್ಣ, ತಮನ್ನಾ ಭಾಟಿಯಾ ನಟಿಸಿದ್ದು, ಸಿನಿಪ್ರಿಯರಿಗೆ ಇವರೆಲ್ಲರನ್ನೂ ಒಂದೇ ಸಿನಿಮಾದಲ್ಲಿ ನೋಡುವ ಅವಕಾಶ ಸಿಕ್ಕಿದೆ.
ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…
ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…
೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…