ಚೆನ್ನೈ: ‘ಜೈಲರ್’ ಚಿತ್ರ ಭರ್ಜರಿ ಯಶಸ್ಸು ಕಂಡಿದ್ದು, ಈಗಾಗಲೇ 600 ಕೋಟಿ ರೂ.ಗಳಿಗೂ ಅಧಿಕ ಮೊತ್ತವನ್ನು ಬಾಚಿಕೊಂಡಿದೆ. ಈ ಯಶಸ್ಸಿನ ಸಂಭ್ರಮವನ್ನು ಚಿತ್ರದ ನಿರ್ಮಾಣ ಸಂಸ್ಥೆಯಾದ ಸನ್ ಪಿಕ್ಚರ್ಸ್, ನಟ ರಜಿನಿಕಾಂತ್ ಹಾಗೂ ನಿರ್ದೇಶಕ ನೆಲ್ಸನ್ ದಿಲೀಪ್ ಕುಮಾರ್ ಜೊತೆ ಹಂಚಿಕೊಂಡಿದೆ.
ರಜಿನಿಕಾಂತ್ ಅವರಿಗೆ ಪ್ರೊಡಕ್ಷನ್ ಹೌಸ್ ಸನ್ ಪಿಕ್ಚರ್ಸ್ ಮುಖ್ಯಸ್ಥ ಕಲಾನಿದಿ ಮಾರನ್ ಹೊಚ್ಚ ಹೊಸ BMW ಕಾರನ್ನು ಉಡುಗೊರೆಯಾಗಿ ನೀಡಿದ್ದು, ಚಿತ್ರದ ಲಾಭಾಂಶವಾಗಿ ಸುಮಾರು 100 ಕೋಟಿ ರೂ. ಮೊತ್ತದ ಚೆಕ್ ಅನ್ನೂ ವಿತರಿಸಿದ್ದಾರೆ ಎಂದು ವರದಿಯಾಗಿದೆ.
ಜೈಲರ್ ನಿರ್ದೇಶಕ ನೆಲ್ಸನ್ ದಿಲೀಪ್ಕುಮಾರ್ ಅವರಿಗೆ ಕೂಡಾ ಚಿತ್ರದ ಲಾಭದಿಂದ ಒಂದಂಶವನ್ನು ಹಾಗೂ ಹೊಸ ಪೋರ್ಷ್ ಕಾರನ್ನು ಉಡುಗೊರೆಯಾಗಿ ನೀಡಲಾಗಿದೆ.
ಸನ್ ಪಿಕ್ಚರ್ಸ್ ಸಿಇಒ ಮತ್ತು ‘ಜೈಲರ್’ನ ಫೈನಾನ್ಶಿಯರ್ ಕಲಾನಿದಿ ಮಾರನ್ ಅವರು ಆಗಸ್ಟ್ 31 ರಂದು ರಜನಿಕಾಂತ್ ಅವರನ್ನು ಅವರ ಚೆನ್ನೈ ನಿವಾಸದಲ್ಲಿ ಭೇಟಿ ಮಾಡಿ ಚೆಕ್ ವಿತರಿಸಿದ್ದಾರೆ.
ರಜನಿಕಾಂತ್ ಅವರು ಲಾಭ ಹಂಚಿಕೆ ಆಧಾರದ ಮೇಲೆ ಸನ್ ಪಿಕ್ಚರ್ಸ್ ಜೊತೆ ‘ಜೈಲರ್’ ಒಪ್ಪಂದಕ್ಕೆ ಸಹಿ ಹಾಕಿದ್ದರು.
ರಜನಿಕಾಂತ್ ಅಭಿನಯದ ‘ಜೈಲರ್’ ಚಿತ್ರಮಂದಿರದಲ್ಲಿ ಬಿಡುಗಡೆಯಾಗಿ ಭರ್ಜರಿ ಯಶಸ್ಸು ಕಂಡಿದೆ. ಚಿತ್ರವು ಈಗಾಗಲೇ ಮೂರು ವಾರಗಳಿಂದ ಚಿತ್ರಮಂದಿರಗಳಲ್ಲಿದ್ದು, ಈ ಚಿತ್ರವು 2023 ರ ಅತಿ ಹೆಚ್ಚು ಗಳಿಕೆಯ ಚಿತ್ರಗಳಲ್ಲಿ ಒಂದಾಗಿದೆ ಎಂದು ಹೇಳಲಾಗುತ್ತದೆ.
ಚಿತ್ರ ತಾರಾಗಣದಲ್ಲಿ ರಜನಿಕಾಂತ್, ರಮ್ಯಾ ಕೃಷ್ಣನ್, ಶಿವರಾಜಕುಮಾರ್, ಮೋಹನ್ ಲಾಲ್, ಟೈಗರ್ ಶ್ರಾಫ್, ಸುನೀಲ್, ತಮನ್ನಾ ಭಾಟಿಯಾ, ವಿನಾಯಕನ್, ವಸಂತ್ ರವಿ, ಮಿರ್ನಾ, ಯೋಗಿ ಬಾಬು ಮತ್ತು ಜಾಫರ್ ಸಾದಿಕ್ ಮೊದಲಾದವರು ಇದ್ದಾರೆ. ಚಿತ್ರದ ಸಂಗೀತವನ್ನು ಅನಿರುದ್ಧ್ ರವಿಚಂದರ್ ಸಂಯೋಜಿಸಿದ್ದಾರೆ.
ರಾಹುಲ್ ಗಾಂಧಿಯವರಿಗೆ ಪ್ರಬುದ್ಧತೆ ಇಲ್ಲ, ಮಕ್ಕಳಂತೆ ಆಟವಾಡುತ್ತಾರೆ ಬೆಂಗಳೂರು: ಒಂದು ದೇಶ, ಒಂದು ಚುನಾವಣೆ ನಡೆಸಲು ಕೇಂದ್ರ ಸರ್ಕಾರ ಕೈಗೊಳ್ಳುತ್ತಿರುವ…
ಮೈಸೂರು: ಪ್ರವಾಸೋದ್ಯಮ ಮತ್ತು ಶಾಂತಿ ಎಂಬ ಧ್ಯೇಯ ವಾಕ್ಯದೊಂದಿಗೆ ಸೆಪ್ಟೆಂಬರ್ ಸೆ. 27 ರಂದು ಬೆಳಿಗ್ಗೆ 10 ಗಂಟೆಗೆ ಮೈಸೂರು…
ಮೈಸೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಪ್ರಕರಣದಲ್ಲಿ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೈಲು ಸೇರಿ ಇಂದಿಗೆ ಬರೊಬ್ಬರಿ 100 ದಿನ…
ಬೆಂಗಳೂರು: ಭೂಸಾರ ಹಾಗೂ ಇ ಸ್ಯಾಪ್ ಆ್ಯಪ್ ಗಳು ಕೃಷಿ ಉತ್ಪಾದನೆ ಹೆಚ್ಚಿಸುವಲ್ಲಿ ಪರಿಣಕಾರಿಯಾಗಿ ನೆರವಾಗಲಿವೆ .ಇದೇ ರೀತಿ ರೈತರಿಗೆ…
ಮೈಸೂರು: ದಸರಾ ಚಲನಚಿತ್ರೋತ್ಸವ 2024 ರ ಅಂಗವಾಗಿ ಅಂತಿಮವಾಗಿ ಚಿತ್ರಮಂದಿರದಲ್ಲಿ ಪ್ರದರ್ಶನಗೊಳ್ಳಲು ಕಿರುಚಿತ್ರ ಸ್ಪರ್ಧೆಯಲ್ಲಿ ಆಯ್ಕೆಯಾಗಿರುತ್ತವೆ. ಅಭಿಜಿತ್ ಪುರೋಹಿತ್ ನಿರ್ದೇಶನದ…
ಮೈಸೂರು: ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿಯಲ್ಲಿ ವಯೋಮಿತಿ ಹೆಚ್ಚಿಸಿ ಹಾಗೂ ಖಾಲಿ ಇರುವ ಎಲ್ಲಾ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡಬೇಕು ಎಂದು…