ಚಿತ್ರ ಮಂಜರಿ

ʼಜೈಲರ್‌’ ಯಶಸ್ಸು: ನಿರ್ಮಾಪಕರಿಂದ ರಜಿನಿಕಾಂತ್‌, ನೆಲ್ಸನ್‌ಗೆ ದುಬಾರಿ ಕಾರು ಉಡುಗೊರೆ

ಚೆನ್ನೈ: ‘ಜೈಲರ್‌’ ಚಿತ್ರ ಭರ್ಜರಿ ಯಶಸ್ಸು ಕಂಡಿದ್ದು, ಈಗಾಗಲೇ 600 ಕೋಟಿ ರೂ.ಗಳಿಗೂ ಅಧಿಕ ಮೊತ್ತವನ್ನು ಬಾಚಿಕೊಂಡಿದೆ. ಈ ಯಶಸ್ಸಿನ ಸಂಭ್ರಮವನ್ನು ಚಿತ್ರದ ನಿರ್ಮಾಣ ಸಂಸ್ಥೆಯಾದ ಸನ್‌ ಪಿಕ್ಚರ್ಸ್‌, ನಟ ರಜಿನಿಕಾಂತ್‌ ಹಾಗೂ ನಿರ್ದೇಶಕ ನೆಲ್ಸನ್‌ ದಿಲೀಪ್‌ ಕುಮಾರ್‌ ಜೊತೆ ಹಂಚಿಕೊಂಡಿದೆ.

ರಜಿನಿಕಾಂತ್‌ ಅವರಿಗೆ ಪ್ರೊಡಕ್ಷನ್ ಹೌಸ್ ಸನ್ ಪಿಕ್ಚರ್ಸ್ ಮುಖ್ಯಸ್ಥ ಕಲಾನಿದಿ ಮಾರನ್ ಹೊಚ್ಚ ಹೊಸ BMW ಕಾರನ್ನು ಉಡುಗೊರೆಯಾಗಿ ನೀಡಿದ್ದು, ಚಿತ್ರದ ಲಾಭಾಂಶವಾಗಿ ಸುಮಾರು 100 ಕೋಟಿ ರೂ. ಮೊತ್ತದ ಚೆಕ್‌ ಅನ್ನೂ ವಿತರಿಸಿದ್ದಾರೆ ಎಂದು ವರದಿಯಾಗಿದೆ.

ಜೈಲರ್ ನಿರ್ದೇಶಕ ನೆಲ್ಸನ್ ದಿಲೀಪ್‌ಕುಮಾರ್ ಅವರಿಗೆ ಕೂಡಾ ಚಿತ್ರದ ಲಾಭದಿಂದ ಒಂದಂಶವನ್ನು ಹಾಗೂ ಹೊಸ ಪೋರ್ಷ್ ಕಾರನ್ನು ಉಡುಗೊರೆಯಾಗಿ ನೀಡಲಾಗಿದೆ.

ಸನ್ ಪಿಕ್ಚರ್ಸ್ ಸಿಇಒ ಮತ್ತು ‘ಜೈಲರ್’ನ ಫೈನಾನ್ಶಿಯರ್ ಕಲಾನಿದಿ ಮಾರನ್ ಅವರು ಆಗಸ್ಟ್ 31 ರಂದು ರಜನಿಕಾಂತ್ ಅವರನ್ನು ಅವರ ಚೆನ್ನೈ ನಿವಾಸದಲ್ಲಿ ಭೇಟಿ ಮಾಡಿ ಚೆಕ್‌ ವಿತರಿಸಿದ್ದಾರೆ.

ರಜನಿಕಾಂತ್ ಅವರು ಲಾಭ ಹಂಚಿಕೆ ಆಧಾರದ ಮೇಲೆ ಸನ್ ಪಿಕ್ಚರ್ಸ್ ಜೊತೆ ‘ಜೈಲರ್’ ಒಪ್ಪಂದಕ್ಕೆ ಸಹಿ ಹಾಕಿದ್ದರು.

ರಜನಿಕಾಂತ್ ಅಭಿನಯದ ‘ಜೈಲರ್’ ಚಿತ್ರಮಂದಿರದಲ್ಲಿ ಬಿಡುಗಡೆಯಾಗಿ ಭರ್ಜರಿ ಯಶಸ್ಸು ಕಂಡಿದೆ. ಚಿತ್ರವು ಈಗಾಗಲೇ ಮೂರು ವಾರಗಳಿಂದ ಚಿತ್ರಮಂದಿರಗಳಲ್ಲಿದ್ದು, ಈ ಚಿತ್ರವು 2023 ರ ಅತಿ ಹೆಚ್ಚು ಗಳಿಕೆಯ ಚಿತ್ರಗಳಲ್ಲಿ ಒಂದಾಗಿದೆ ಎಂದು ಹೇಳಲಾಗುತ್ತದೆ.

ಚಿತ್ರ ತಾರಾಗಣದಲ್ಲಿ ರಜನಿಕಾಂತ್, ರಮ್ಯಾ ಕೃಷ್ಣನ್, ಶಿವರಾಜಕುಮಾರ್, ಮೋಹನ್ ಲಾಲ್, ಟೈಗರ್ ಶ್ರಾಫ್, ಸುನೀಲ್, ತಮನ್ನಾ ಭಾಟಿಯಾ, ವಿನಾಯಕನ್, ವಸಂತ್ ರವಿ, ಮಿರ್ನಾ, ಯೋಗಿ ಬಾಬು ಮತ್ತು ಜಾಫರ್ ಸಾದಿಕ್ ಮೊದಲಾದವರು ಇದ್ದಾರೆ. ಚಿತ್ರದ ಸಂಗೀತವನ್ನು ಅನಿರುದ್ಧ್ ರವಿಚಂದರ್ ಸಂಯೋಜಿಸಿದ್ದಾರೆ.

andolanait

Recent Posts

ಮನೆಯ ಚಾವಣಿ ಕುಸಿದು ನಾಲ್ವರು ಸಾವು ; ತಲಾ 5 ಲಕ್ಷ ಪರಿಹಾರ ಘೋಷಣೆ

ವಿಜಯಪುರ : ಭಾರೀ ಗಾಳಿ ಮತ್ತು ಮಳೆಯಿಂದಾಗಿ ಹಳೆಯ ಮನೆಯ ಮೇಲ್ಚಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ದುರ್ಮರಣವನ್ನಪ್ಪಿದ ಘಟನೆ…

5 hours ago

ಡಿ.ಕೆ.ಶಿವಕುಮಾರ್‌ ಜನ್ಮದಿನಾಚರಣೆ : ರಾರಾಜಿಸಿದ ಮುಂದಿನ ಮುಖ್ಯಮಂತ್ರಿ ಡಿಕೆಶಿ ಬ್ಯಾನರ್‌ಗಳು

ಬೆಂಗಳೂರು : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ 64ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಶುಭ ಹಾರೈಸಲು ಅಭಿಮಾನಿಗಳು, ಕಾರ್ಯಕರ್ತರು, ಹಿತೈಷಿಗಳ ದಂಡೇ…

6 hours ago

ದರ್ಶನ್‌ಗೆ ಇನ್ನೂ ಒಂದು ವರ್ಷ ಜಾಮೀನು ಇಲ್ಲ : ಅರ್ಜಿ ವಜಾಗೊಳಿಸಿದ ಸುಪೀಂ

ನವದೆಹಲಿ : ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ನಟ ದರ್ಶನ್‌ಗೆ ಸುಪ್ರೀಂ ಕೋರ್ಟ್‌ನಲ್ಲಿ ಭಾರೀ ಹಿನ್ನಡೆಯಾಗಿದ್ದು, ಇನ್ನು ಒಂದು…

6 hours ago

ಜೂನ್‌ 21ರಂದು ನೀಟ್-ಯುಜಿ 2026ರ ಮರು ಪರೀಕ್ಷೆ

ನವದೆಹಲಿ : ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ ರದ್ದುಗೊಂಡಿದ್ದ ‘ನೀಟ್-ಯುಜಿ 2026’ ವೈದ್ಯಕೀಯ ಪ್ರವೇಶ ಪರೀಕ್ಷೆಯ ಮರು ಪರೀಕ್ಷೆ ಜೂನ್…

8 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ; ಪ್ರತಿಷ್ಠಿತ ಕಾನ್‌ ಚಿತ್ರೋತ್ಸವದಲ್ಲಿ ಭಾರತ ಚಿತ್ರೋದ್ಯಮ

ಉತ್ಸವಗಳ ಉತ್ಸವ ಎಂದೇ ಪ್ರತೀತಿ ಪಡೆದಿರುವ ಅಂತಾರಾಷ್ಟ್ರೀಯ ಚಿತ್ರೋತ್ಸವ ಫ್ರಾನ್ಸ್‌ನ ಕಾನ್‌ನದು. ಇದೀಗ ಮೊನ್ನೆ ಅದರ ೭೯ನೇ ಆವೃತ್ತಿಗೆ ಚಾಲನೆ…

11 hours ago

ಗಗನಮುಖಿಯಾಗಿದ್ದ ತೆಂಗಿನ ಕಾಯಿ ದರ ಕುಸಿತ

ಎಚ್‌.ಎಸ್.ದಿನೇಶ್‌ ಕುಮಾರ್‌ ಮೈಸೂರು : ಕಳೆದ ವರ್ಷ ಗಗನಕ್ಕೇರಿದ್ದ ತೆಂಗಿನಕಾಯಿ ಬೆಲೆ ಇದೀಗ ಶೇ. ೫೦ರಷ್ಟು ದರ ಇಳಿದಿದೆ. ಇದರಿಂದಾಗಿ…

12 hours ago