ಚಿತ್ರ ಮಂಜರಿ

ʼಜೈಲರ್‌’ ಯಶಸ್ಸು: ನಿರ್ಮಾಪಕರಿಂದ ರಜಿನಿಕಾಂತ್‌, ನೆಲ್ಸನ್‌ಗೆ ದುಬಾರಿ ಕಾರು ಉಡುಗೊರೆ

ಚೆನ್ನೈ: ‘ಜೈಲರ್‌’ ಚಿತ್ರ ಭರ್ಜರಿ ಯಶಸ್ಸು ಕಂಡಿದ್ದು, ಈಗಾಗಲೇ 600 ಕೋಟಿ ರೂ.ಗಳಿಗೂ ಅಧಿಕ ಮೊತ್ತವನ್ನು ಬಾಚಿಕೊಂಡಿದೆ. ಈ ಯಶಸ್ಸಿನ ಸಂಭ್ರಮವನ್ನು ಚಿತ್ರದ ನಿರ್ಮಾಣ ಸಂಸ್ಥೆಯಾದ ಸನ್‌ ಪಿಕ್ಚರ್ಸ್‌, ನಟ ರಜಿನಿಕಾಂತ್‌ ಹಾಗೂ ನಿರ್ದೇಶಕ ನೆಲ್ಸನ್‌ ದಿಲೀಪ್‌ ಕುಮಾರ್‌ ಜೊತೆ ಹಂಚಿಕೊಂಡಿದೆ.

ರಜಿನಿಕಾಂತ್‌ ಅವರಿಗೆ ಪ್ರೊಡಕ್ಷನ್ ಹೌಸ್ ಸನ್ ಪಿಕ್ಚರ್ಸ್ ಮುಖ್ಯಸ್ಥ ಕಲಾನಿದಿ ಮಾರನ್ ಹೊಚ್ಚ ಹೊಸ BMW ಕಾರನ್ನು ಉಡುಗೊರೆಯಾಗಿ ನೀಡಿದ್ದು, ಚಿತ್ರದ ಲಾಭಾಂಶವಾಗಿ ಸುಮಾರು 100 ಕೋಟಿ ರೂ. ಮೊತ್ತದ ಚೆಕ್‌ ಅನ್ನೂ ವಿತರಿಸಿದ್ದಾರೆ ಎಂದು ವರದಿಯಾಗಿದೆ.

ಜೈಲರ್ ನಿರ್ದೇಶಕ ನೆಲ್ಸನ್ ದಿಲೀಪ್‌ಕುಮಾರ್ ಅವರಿಗೆ ಕೂಡಾ ಚಿತ್ರದ ಲಾಭದಿಂದ ಒಂದಂಶವನ್ನು ಹಾಗೂ ಹೊಸ ಪೋರ್ಷ್ ಕಾರನ್ನು ಉಡುಗೊರೆಯಾಗಿ ನೀಡಲಾಗಿದೆ.

ಸನ್ ಪಿಕ್ಚರ್ಸ್ ಸಿಇಒ ಮತ್ತು ‘ಜೈಲರ್’ನ ಫೈನಾನ್ಶಿಯರ್ ಕಲಾನಿದಿ ಮಾರನ್ ಅವರು ಆಗಸ್ಟ್ 31 ರಂದು ರಜನಿಕಾಂತ್ ಅವರನ್ನು ಅವರ ಚೆನ್ನೈ ನಿವಾಸದಲ್ಲಿ ಭೇಟಿ ಮಾಡಿ ಚೆಕ್‌ ವಿತರಿಸಿದ್ದಾರೆ.

ರಜನಿಕಾಂತ್ ಅವರು ಲಾಭ ಹಂಚಿಕೆ ಆಧಾರದ ಮೇಲೆ ಸನ್ ಪಿಕ್ಚರ್ಸ್ ಜೊತೆ ‘ಜೈಲರ್’ ಒಪ್ಪಂದಕ್ಕೆ ಸಹಿ ಹಾಕಿದ್ದರು.

ರಜನಿಕಾಂತ್ ಅಭಿನಯದ ‘ಜೈಲರ್’ ಚಿತ್ರಮಂದಿರದಲ್ಲಿ ಬಿಡುಗಡೆಯಾಗಿ ಭರ್ಜರಿ ಯಶಸ್ಸು ಕಂಡಿದೆ. ಚಿತ್ರವು ಈಗಾಗಲೇ ಮೂರು ವಾರಗಳಿಂದ ಚಿತ್ರಮಂದಿರಗಳಲ್ಲಿದ್ದು, ಈ ಚಿತ್ರವು 2023 ರ ಅತಿ ಹೆಚ್ಚು ಗಳಿಕೆಯ ಚಿತ್ರಗಳಲ್ಲಿ ಒಂದಾಗಿದೆ ಎಂದು ಹೇಳಲಾಗುತ್ತದೆ.

ಚಿತ್ರ ತಾರಾಗಣದಲ್ಲಿ ರಜನಿಕಾಂತ್, ರಮ್ಯಾ ಕೃಷ್ಣನ್, ಶಿವರಾಜಕುಮಾರ್, ಮೋಹನ್ ಲಾಲ್, ಟೈಗರ್ ಶ್ರಾಫ್, ಸುನೀಲ್, ತಮನ್ನಾ ಭಾಟಿಯಾ, ವಿನಾಯಕನ್, ವಸಂತ್ ರವಿ, ಮಿರ್ನಾ, ಯೋಗಿ ಬಾಬು ಮತ್ತು ಜಾಫರ್ ಸಾದಿಕ್ ಮೊದಲಾದವರು ಇದ್ದಾರೆ. ಚಿತ್ರದ ಸಂಗೀತವನ್ನು ಅನಿರುದ್ಧ್ ರವಿಚಂದರ್ ಸಂಯೋಜಿಸಿದ್ದಾರೆ.

andolanait

Recent Posts

ಅಪ್ಪಟ ಸಮಾಜವಾದಿ, ಗುಡಿಸಲೂ ಇರದಿದ್ದ ಜೋಗಿ ಕಿಶನ್ ಪಟ್ನಾಯಕ್

ಪ್ರೊ.ರವಿವರ್ಮಕುಮಾರ್, ಸಮಾಜವಾದಿ ಚಿಂತಕರು ಹಾಗೂ ಮಾಜಿ ಅಡ್ವೋಕೇಟ್ ಜನರಲ್ ಇಂದು ಕಿಶನ್ ಜನ್ಮದಿನ; ಅವರ ನೆನಪು ನಮ್ಮೊಡನೆ ಸದಾ ಹಸಿರಾಗಿರಲಿ.…

4 hours ago

ಶೀಘ್ರವೇ ಆಟೋ ಬಾಡಿಗೆ ಪರಿಷ್ಕೃತ ದರ ಪ್ರಕಟ

ನವೀನ್ ಡಿಸೋಜ ಮಡಿಕೇರಿಯಲ್ಲಿ ನಡೆದ ಸಾರಿಗೆ ಪ್ರಾಧಿಕಾರದ ಸಭೆಯಲ್ಲಿ ದರ ಹೆಚ್ಚಳಕ್ಕೆ ನಿರ್ಧಾರ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಆಟೋ ರಿಕ್ಷಾ…

4 hours ago

ಜೇನು ಕೃಷಿಗೆ ಸರ್ಕಾರದ ಬಲ

ಎಚ್.ಎಸ್.ದಿನೇಶ್‌ಕುಮಾರ್ ಮೈಸೂರು: ಕುರಿ ಸಾಕಾಣಿಕೆ, ಹೈನುಗಾರಿಕೆ ಹೀಗೆ ರೈತರಿಗೆ ಉಪಯೋಗವಾಗುವಂತಹ ಹಲವಾರು ಯೋಜನೆಗಳನ್ನು ರಾಜ್ಯ ಸರ್ಕಾರ ಹಮ್ಮಿಕೊಂಡಿದೆ. ಇದೀಗ ರೈತರು…

4 hours ago

ಜು.20ಕ್ಕೆ ವಿಧಾನಪರಿಷತ್ ಐದು ಸ್ಥಾನ ತೆರವು

ಕೆ.ಬಿ.ರಮೇಶನಾಯಕ ಮೈಸೂರು: ರಾಜ್ಯದಲ್ಲಿ ಜುಲೈ ೨೦ಕ್ಕೆ ತೆರವಾಗಲಿರುವ ವಿಧಾನಪರಿಷತ್‌ನ ಐದು ನಾಮನಿರ್ದೇಶಿತ ಸ್ಥಾನಗಳಿಗೆ ಸದಸ್ಯರನ್ನು ನೇಮಕ ಮಾಡುವುದಕ್ಕೆ ದಿನಗಣನೆ ಶುರುವಾಗಿದೆ.…

4 hours ago

ಮೈಸೂರಿನ 2 ಹೋಟೆಲ್‌, ಚಾ.ನಗರ ಕೋರ್ಟ್‌ಗೆ ಬಾಂಬ್‌ ಬೆದರಿಕೆ ; ಒಬ್ಬ ವ್ಯಕ್ತಿಯಿಂದಲೇ ಇ-ಮೇಲ್

ಮೈಸೂರು‌ : ಭಾನುವಾರವಷ್ಟೇ ಎರಡು ನಗರದ ಎರಡು ಹೋಟೆಲ್‌ಗಳಿಗೆ ಬಾಂಬ್ ಇಟ್ಟಿರುವುದಾಗಿ ಬೆದರಿಕೆಯ ಇ-ಮೇಲ್ ಬಂದಿತ್ತು. ಇದೀಗ ಚಾಮರಾಜನಗರ ನ್ಯಾಯಾಲಯಕ್ಕೆ…

13 hours ago