ಚಿತ್ರ ಮಂಜರಿ

ಡಬ್ಬಿಂಗ್ ಮಾಡುವಾಗಲೇ ನಿಧನರಾದ ‘ಜೈಲರ್’ ಸಿನಿಮಾ ನಟ ಜಿ.ಮಾರಿಮುತ್ತು

ಖ್ಯಾತ ತಮಿಳು ನಟ, ನಿರ್ದೇಶಕ ಮಾರಿಮುತ್ತು ಅವರು ಇಂದು ನಿಧನರಾಗಿದ್ದಾರೆ. 58 ವರ್ಷದ ಮಾರಿಮುತ್ತು ಅವರು ಇಂದು ಬೆಳಗ್ಗೆ 8.30ಕ್ಕೆ ಧಾರಾವಾಹಿಯೊಂದಕ್ಕೆ ಡಬ್ಬಿಂಗ್ ಮಾಡುವ ಸಮಯದಲ್ಲಿ ನಿಧನರಾಗಿದ್ದಾರೆ. ಅವರನ್ನು ಆದಷ್ಟು ಬೇಗ ಆಸ್ಪತ್ರೆಗೆ ಕರೆದುಕೊಂಡು ಬರಲಾಗಿದ್ದರೂ ಕೂಡ ಯಾವುದೇ ಪ್ರಯೋಜನ ಆಗಲಿಲ್ಲ.

ಪತ್ನಿ, ಇಬ್ಬರು ಮಕ್ಕಳನ್ನು ಅಗಲಿದ ನಟ
ರಜನಿಕಾಂತ್ ಅವರ ‘ಜೈಲರ್’ ಸಿನಿಮಾದಲ್ಲಿ ಮಾರಿಮುತ್ತು ನಟಿಸಿದ್ದರು. ‘ರೆಡ್ ಸ್ಯಾಂಡಲ್ ವುಡ್’ ಚಿತ್ರದಲ್ಲಿಯೂ ಅವರು ನಟಿಸಿದ್ದರು. ಮಾರಿಮುತ್ತು ನಿಧನ ಎಲ್ಲರಿಗೂ ಶಾಕ್ ನೀಡಿದೆ. ಮಾರಿಮುತ್ತು ಅವರಿಗೆ ಭಾಗ್ಯಲಕ್ಷ್ಮೀ ಎಂಬ ಪತ್ನಿಯಿದ್ದಾಳೆ. ಅಕಿಲನ್, ಈಶ್ವರ್ಯಾ ಎಂಬ ಮಕ್ಕಳಿದ್ದಾರೆ.

ವೈರಲ್ ಆಗುತ್ತಿದ್ದ ಮಾರಿಮುತ್ತು ಹೇಳಿಕೆಗಳು
ಜಿ ಮಾರಿಮುತ್ತು ಅವರು ಯಾವಾಗಲೂ ಬೋಲ್ಡ್ ಹೇಳಿಕೆಗಳನ್ನು ನೀಡುವ ಮೂಲಕ ಹೆಸರು ಮಾಡಿದ್ದರು. ಮಾರಿಮುತ್ತು ಹೇಳಿಕೆಗಳು ಸದಾ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ಆಗುತ್ತಿದ್ದವು. ‘ಜೈಲರ್’ ಸಿನಿಮಾದಲ್ಲಿ ಮಾರಿಮುತ್ತು ಅವರು ಖಳನಾಯಕನ ಪಾತ್ರ ಮಾಡಿದ್ದರು.

ಈ ಘಟನೆ ಹೇಗಾಯ್ತು?
ಸೆಪ್ಟೆಂಬರ್ 8ರಂದು ಸಹ ಕಲಾವಿದ ಕಮಲೇಶ್ ಜೊತೆ ‘Ethir Necchal’ ಎನ್ನುವ ಧಾರಾವಾಹಿಯ ಡಬ್ಬಿಂಗ್ ಮಾಡುತ್ತಿದ್ದರು. ಆ ವೇಳೆ ಅವರು ಚೆನ್ನೈನ ಸ್ಟುಡಿಯೋದಲ್ಲಿ ಬಿದ್ದರು. ಆನಂತರ ಅವರನ್ನು ಚೆನ್ನೈನ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯ್ತು. ಆದರೆ ಆ ವೇಳೆಗೆ ಅವರ ಪ್ರಾಣಪಕ್ಷಿ ಹಾರಿ ಹೋಗಿತ್ತು. ಇನ್ನು ಮಾರಿಮುತ್ತು ಅವರ ಮನೆಯಲ್ಲಿ ಪಾರ್ಥಿವ ಶರೀರವರನ್ನು ಇಡಲಾಗುವುದಂತೆ.

ನಿರ್ದೇಶಕನಾಗಬೇಕು ಅಂತ ಮನೆಯಿಂದ ಓಡಿ ಹೋಗಿದ್ದ ಮಾರಿಮುತ್ತು
ಈ ಹಿಂದಿನ ಸಂದರ್ಶನಗಳಲ್ಲಿ ಮಾತನಾಡಿದ್ದ ಮಾರಿಮುತ್ತು ಅವರು, ತಮಿಳು ಚಿತ್ರರಂಗದಲ್ಲಿ ಡೈರೆಕ್ಟರ್ ಆಗಬೇಕು ಎನ್ನುವ ಹುಚ್ಚಿನಿಂದ ಮನೆ ಬಿಟ್ಟು ಓಡಿ ಹೋಗಿದ್ರಂತೆ. 2008ರಲ್ಲಿ ತೆರೆ ಕಂಡ ‘ಕನ್ನುಮ್ ಕನ್ನುಮ್’ ಸಿನಿಮಾ ಮೂಲಕ ಅವರು ಡೈರೆಕ್ಟರ್ ಕ್ಯಾಪ್ ತೊಟ್ಟಿದ್ದರು. ಸಿನಿಮಾಗಳನ್ನು ನಿರ್ದೇಶನ ಮಾಡುವುದರ ಜೊತೆಗೆ ಅವರು ತಮಿಳು ಸಿನಿಮಾಗಳಲ್ಲಿ ಕೂಡ ನಟಿಸಿದ್ದಾರೆ. ವೃತ್ತಿ ಜೀವನದ ಆರಂಭದ ದಿನಗಳಲ್ಲಿ ಮಾರಿಮುತ್ತು ಅವರು ಗೀತರಚನೆಕಾರ ವೈರಮುತ್ತು ಜೊತೆ ಕೆಲಸ ಮಾಡಿದ್ದರು. ಕೆಲ ತಮಿಳು ಸಿನಿಮಾಗಳಿಗೆ ಸಹಾಯಕ ನಿರ್ದೇಶಕ ಕೂಡ ಆಗಿದ್ದರು.

‘ವಾಲಿ’, ‘ಜೀವ’, ‘ಪರಿಯೆರಮ್ ಪೆರುಮಲ್’ ಸಿನಿಮಾಗಳಲ್ಲಿ ನಟಿಸಿರುವ ಇವರು 2022ರಿಂದ ಧಾರಾವಾಹಿಯಲ್ಲಿಯೂ ನಟಿಸುತ್ತಿದ್ದಾರೆ.

andolanait

Recent Posts

ಮುಡಾ ಪ್ರಕರಣ: ಮುಡಾ ಕಚೇರಿಗಿಂತ ಸಚಿವ ಭೈರತಿ ಸುರೇಶ್‌ ಮನೆಯಲ್ಲೇ ಅಧಿಕ ಫೈಲ್‌: ಶ್ರೀವತ್ಸ

ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಫೈಲ್‌ಗಳು ಮುಡಾ ಕಚೇರಿಯಲ್ಲಿರುವುದಕ್ಕಿಂತ ಸಚಿವ ಭೈರತಿ ಸುರೇಶ್‌ ಮನೆಯಲ್ಲೇ ಅಧಿಕವಾಗಿವೆ ಎಂದು ಶಾಸಕ ಟಿ.ಎಸ್‌.ಶ್ರೀವತ್ಸ…

8 mins ago

ಮುಡಾ ಕಚೇರಿ ಮೇಲೆ ಇಡಿ ದಾಳಿ: ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ

ಮಂಡ್ಯ: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಸರ್ಕಾರಿ ಭೂಮಿಯನ್ನು ಲಪಾಟಾಯಿಸಿದ್ದಾರೆ, ಅದಕ್ಕೆ ಆ ನಿವೇಶನಗಳನ್ನು ವಾಪಾಸ್ಸು ಮಾಡಿದ್ದಾರೆ ಎಂದು ಕೇಂದ್ರ…

1 hour ago

ಮುಡಾ ಕಚೇರಿಯ ಮೇಲೆ ಇಡಿ ದಾಳಿ ದುರುದ್ದೇಶಪೂರ್ವಕ: ಮಾಜಿ ಸಂಸದ ಡಿ.ಕೆ.ಸುರೇಶ್‌

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಇಂದು (ಅಕ್ಟೋಬರ್‌.18) ಮೂರು ಕಡೆಗಳಲ್ಲಿ ದಾಳಿ ನಡೆಸಿದ್ದು, ಈ ದಾಳಿಯು ಸಂಪೂರ್ಣವಾಗಿ…

2 hours ago

ಮುಡಾ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ಮುಡಾ ಕೇಸ್‌ ಮುಚ್ಚಿ ಹಾಕುವಲ್ಲಿ ಸರ್ಕಾರಕ್ಕೆ ಲೋಕಾಯುಕ್ತ ಸಹಾಯ ಮಾಡುತ್ತದೆ ಎಂಬ ಶಂಕೆ ಇದೆ. ಹೀಗಾಗಿ ಮುಡಾ ಪ್ರಕರಣವನ್ನು…

2 hours ago

ಭವಾನಿ ರೇವಣ್ಣಗೆ ಬಿಗ್‌ ರಿಲೀಫ್:‌ ಹೈಕೋರ್ಟ್‌ ಆದೇಶ ಎತ್ತಿ ಹಿಡಿದ ಸುಪ್ರೀಂ ಕೋರ್ಟ್‌

ಹೊಸದಿಲ್ಲಿ: ಆತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ ಹೈಕೋರ್ಟ್‌ನಿಂದ ಜಾಮೀನು ಮಂಜೂರು ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಎಸ್‌ಐಟಿ…

2 hours ago

ಮುಡಾ ಪ್ರಕರಣ: ಮುಡಾ ಕಚೇರಿಯ ಮೇಲೆ ಇ.ಡಿ ದಾಳಿ

ಮೈಸೂರು: ಮುಡಾದಲ್ಲಿ ಹಗರಣ ನಡೆದಿದೆ ಎಂದು ಆರ್‌ಐಟಿ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಇ.ಡಿ.ಗೆ ದೂರು ನೀಡಿದ್ದರು. ಈ ದೂರಿನ ಆಧಾರದ…

3 hours ago