ಚಿತ್ರ ಮಂಜರಿ

ಡಬ್ಬಿಂಗ್ ಮಾಡುವಾಗಲೇ ನಿಧನರಾದ ‘ಜೈಲರ್’ ಸಿನಿಮಾ ನಟ ಜಿ.ಮಾರಿಮುತ್ತು

ಖ್ಯಾತ ತಮಿಳು ನಟ, ನಿರ್ದೇಶಕ ಮಾರಿಮುತ್ತು ಅವರು ಇಂದು ನಿಧನರಾಗಿದ್ದಾರೆ. 58 ವರ್ಷದ ಮಾರಿಮುತ್ತು ಅವರು ಇಂದು ಬೆಳಗ್ಗೆ 8.30ಕ್ಕೆ ಧಾರಾವಾಹಿಯೊಂದಕ್ಕೆ ಡಬ್ಬಿಂಗ್ ಮಾಡುವ ಸಮಯದಲ್ಲಿ ನಿಧನರಾಗಿದ್ದಾರೆ. ಅವರನ್ನು ಆದಷ್ಟು ಬೇಗ ಆಸ್ಪತ್ರೆಗೆ ಕರೆದುಕೊಂಡು ಬರಲಾಗಿದ್ದರೂ ಕೂಡ ಯಾವುದೇ ಪ್ರಯೋಜನ ಆಗಲಿಲ್ಲ.

ಪತ್ನಿ, ಇಬ್ಬರು ಮಕ್ಕಳನ್ನು ಅಗಲಿದ ನಟ
ರಜನಿಕಾಂತ್ ಅವರ ‘ಜೈಲರ್’ ಸಿನಿಮಾದಲ್ಲಿ ಮಾರಿಮುತ್ತು ನಟಿಸಿದ್ದರು. ‘ರೆಡ್ ಸ್ಯಾಂಡಲ್ ವುಡ್’ ಚಿತ್ರದಲ್ಲಿಯೂ ಅವರು ನಟಿಸಿದ್ದರು. ಮಾರಿಮುತ್ತು ನಿಧನ ಎಲ್ಲರಿಗೂ ಶಾಕ್ ನೀಡಿದೆ. ಮಾರಿಮುತ್ತು ಅವರಿಗೆ ಭಾಗ್ಯಲಕ್ಷ್ಮೀ ಎಂಬ ಪತ್ನಿಯಿದ್ದಾಳೆ. ಅಕಿಲನ್, ಈಶ್ವರ್ಯಾ ಎಂಬ ಮಕ್ಕಳಿದ್ದಾರೆ.

ವೈರಲ್ ಆಗುತ್ತಿದ್ದ ಮಾರಿಮುತ್ತು ಹೇಳಿಕೆಗಳು
ಜಿ ಮಾರಿಮುತ್ತು ಅವರು ಯಾವಾಗಲೂ ಬೋಲ್ಡ್ ಹೇಳಿಕೆಗಳನ್ನು ನೀಡುವ ಮೂಲಕ ಹೆಸರು ಮಾಡಿದ್ದರು. ಮಾರಿಮುತ್ತು ಹೇಳಿಕೆಗಳು ಸದಾ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ಆಗುತ್ತಿದ್ದವು. ‘ಜೈಲರ್’ ಸಿನಿಮಾದಲ್ಲಿ ಮಾರಿಮುತ್ತು ಅವರು ಖಳನಾಯಕನ ಪಾತ್ರ ಮಾಡಿದ್ದರು.

ಈ ಘಟನೆ ಹೇಗಾಯ್ತು?
ಸೆಪ್ಟೆಂಬರ್ 8ರಂದು ಸಹ ಕಲಾವಿದ ಕಮಲೇಶ್ ಜೊತೆ ‘Ethir Necchal’ ಎನ್ನುವ ಧಾರಾವಾಹಿಯ ಡಬ್ಬಿಂಗ್ ಮಾಡುತ್ತಿದ್ದರು. ಆ ವೇಳೆ ಅವರು ಚೆನ್ನೈನ ಸ್ಟುಡಿಯೋದಲ್ಲಿ ಬಿದ್ದರು. ಆನಂತರ ಅವರನ್ನು ಚೆನ್ನೈನ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯ್ತು. ಆದರೆ ಆ ವೇಳೆಗೆ ಅವರ ಪ್ರಾಣಪಕ್ಷಿ ಹಾರಿ ಹೋಗಿತ್ತು. ಇನ್ನು ಮಾರಿಮುತ್ತು ಅವರ ಮನೆಯಲ್ಲಿ ಪಾರ್ಥಿವ ಶರೀರವರನ್ನು ಇಡಲಾಗುವುದಂತೆ.

ನಿರ್ದೇಶಕನಾಗಬೇಕು ಅಂತ ಮನೆಯಿಂದ ಓಡಿ ಹೋಗಿದ್ದ ಮಾರಿಮುತ್ತು
ಈ ಹಿಂದಿನ ಸಂದರ್ಶನಗಳಲ್ಲಿ ಮಾತನಾಡಿದ್ದ ಮಾರಿಮುತ್ತು ಅವರು, ತಮಿಳು ಚಿತ್ರರಂಗದಲ್ಲಿ ಡೈರೆಕ್ಟರ್ ಆಗಬೇಕು ಎನ್ನುವ ಹುಚ್ಚಿನಿಂದ ಮನೆ ಬಿಟ್ಟು ಓಡಿ ಹೋಗಿದ್ರಂತೆ. 2008ರಲ್ಲಿ ತೆರೆ ಕಂಡ ‘ಕನ್ನುಮ್ ಕನ್ನುಮ್’ ಸಿನಿಮಾ ಮೂಲಕ ಅವರು ಡೈರೆಕ್ಟರ್ ಕ್ಯಾಪ್ ತೊಟ್ಟಿದ್ದರು. ಸಿನಿಮಾಗಳನ್ನು ನಿರ್ದೇಶನ ಮಾಡುವುದರ ಜೊತೆಗೆ ಅವರು ತಮಿಳು ಸಿನಿಮಾಗಳಲ್ಲಿ ಕೂಡ ನಟಿಸಿದ್ದಾರೆ. ವೃತ್ತಿ ಜೀವನದ ಆರಂಭದ ದಿನಗಳಲ್ಲಿ ಮಾರಿಮುತ್ತು ಅವರು ಗೀತರಚನೆಕಾರ ವೈರಮುತ್ತು ಜೊತೆ ಕೆಲಸ ಮಾಡಿದ್ದರು. ಕೆಲ ತಮಿಳು ಸಿನಿಮಾಗಳಿಗೆ ಸಹಾಯಕ ನಿರ್ದೇಶಕ ಕೂಡ ಆಗಿದ್ದರು.

‘ವಾಲಿ’, ‘ಜೀವ’, ‘ಪರಿಯೆರಮ್ ಪೆರುಮಲ್’ ಸಿನಿಮಾಗಳಲ್ಲಿ ನಟಿಸಿರುವ ಇವರು 2022ರಿಂದ ಧಾರಾವಾಹಿಯಲ್ಲಿಯೂ ನಟಿಸುತ್ತಿದ್ದಾರೆ.

andolanait

Recent Posts

ಜ್ಯೋತಿಷಿ ಮಾತು ಕೇಳಿ ಹೆತ್ತ ತಾಯಿಯನ್ನೇ ಕೊಂದ ಮಗಳು !

ತುಮಕೂರು : ಜ್ಯೋತಿಷಿಯ ಮಾತು ನಂಬಿ ಮಗಳು ತಾಯಿಯನ್ನೇ ಕೊಲೆ‌ ಮಾಡಿರುವ ಘಟನೆ ತುಮಕೂರು ತಾಲೂಕಿನ ಅನುಪನಹಳ್ಳಿಯಲ್ಲಿ ನಡೆದಿದೆ. ಪುಷ್ಪಲತಾ…

36 mins ago

ಆರೋಗ್ಯ ಇಲಾಖೆಯ ಅಧಿಕಾರಿ ಅಬಕಾರಿ ಡಿಸಿಯಾಗಿ ನಿಯೋಜನೆ : ನಿಯಮ ಉಲ್ಲಂಘನೆ ಆರೋಪ

ಮಂಡ್ಯ : ಇತ್ತೀಚೆಗೆ ಹಲವು ಇಲಾಖಾ ಅಧಿಕಾರಿಗಳ ವರ್ಗಾವಣೆಗೆ ಸಂಬಂಧಿಸಿದ ಸರ್ಕಾರ ಆದೇಶ ಹೊರಡಿಸಿದ್ದು, ಅದರಲ್ಲಿ ಮಂಡ್ಯ ಜಿಲ್ಲಾ ಆರೋಗ್ಯ…

1 hour ago

ಸಿದ್ದರಾಮಯ್ಯ ಅವರೇ ಐದು ವರ್ಷ ಮುಂದುವರಿಯುವ ಆಸೆ ಇದೆ : ಶಾಸಕ ಕೆ.ಹರೀಶ್‌ ಗೌಡ

ಮೈಸೂರು : ಸಿದ್ದರಾಮಯ್ಯ ಅವರೇ ಐದು ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ಮುಂದುವರಿಯುವ ಆಸೆ ಇದೆ. ಹೈಕಮಾಂಡ್ ಏನೇ ತೀರ್ಮಾನ ಮಾಡಿದರೂ…

2 hours ago

ಭೀಕರ ಸರಣಿ ಅಪಘಾತ : ಬೆಂಗಳೂರಿನ 6 ವಿದ್ಯಾರ್ಥಿಗಳು ಸೇರಿ 7 ಮಂದಿ ಸಾವು

ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಎಂ.ಸತ್ಯವರ ಗ್ರಾಮದ ಸಮೀಪದ ಹೊಸಕೋಟೆ-ದಾಬಸ್‌ಪೇಟೆ ರಾಷ್ಟ್ರೀಯ ಹೆದ್ದಾರಿ (NH-648) ಮತ್ತು…

2 hours ago

ಓದುಗರ ಪತ್ರ | ಬಸ್ ತಂಗುದಾಣ ನಿರ್ಮಿಸಿ

ಮೈಸೂರಿನ ರಾಮಕೃಷ್ಣ ನಗರದಲ್ಲಿರುವ, ರಾಮಕೃಷ್ಣ ವೃತ್ತದಿಂದ (ಆಂದೋಲನ ಸರ್ಕಲ್), ಕುವೆಂಪು ನಗರದ ಕಾಂಪ್ಲೆಕ್ ತನಕದ ಸುಮಾರು ಒಂದು ಕಿ.ಮೀ. ದೂರದ…

2 hours ago

ಶಿವರಾತ್ರಿ ಜಾತ್ರೆ | ಮ.ಬೆಟ್ಟದಲ್ಲಿ ಸಕಲ ಸಿದ್ಧತೆ ; ನಾಳೆಯಿಂದ ಐದು ದಿನ ಸಂಭ್ರಮ

ಹನೂರು : ಪ್ರಸಿದ್ಧ ಧಾರ್ಮಿಕ ಯಾತ್ರಾ ಸ್ಥಳ ಮಲೆ ಮಹದೇಶ್ವರ ಬೆಟ್ಟದಲ್ಲಿ ಫೆ.14 ರಿಂದ 18 ರವರೆಗೆ ಐದು ದಿನಗಳ…

3 hours ago