ಚಿತ್ರ ಮಂಜರಿ

ಡಬ್ಬಿಂಗ್ ಮಾಡುವಾಗಲೇ ನಿಧನರಾದ ‘ಜೈಲರ್’ ಸಿನಿಮಾ ನಟ ಜಿ.ಮಾರಿಮುತ್ತು

ಖ್ಯಾತ ತಮಿಳು ನಟ, ನಿರ್ದೇಶಕ ಮಾರಿಮುತ್ತು ಅವರು ಇಂದು ನಿಧನರಾಗಿದ್ದಾರೆ. 58 ವರ್ಷದ ಮಾರಿಮುತ್ತು ಅವರು ಇಂದು ಬೆಳಗ್ಗೆ 8.30ಕ್ಕೆ ಧಾರಾವಾಹಿಯೊಂದಕ್ಕೆ ಡಬ್ಬಿಂಗ್ ಮಾಡುವ ಸಮಯದಲ್ಲಿ ನಿಧನರಾಗಿದ್ದಾರೆ. ಅವರನ್ನು ಆದಷ್ಟು ಬೇಗ ಆಸ್ಪತ್ರೆಗೆ ಕರೆದುಕೊಂಡು ಬರಲಾಗಿದ್ದರೂ ಕೂಡ ಯಾವುದೇ ಪ್ರಯೋಜನ ಆಗಲಿಲ್ಲ.

ಪತ್ನಿ, ಇಬ್ಬರು ಮಕ್ಕಳನ್ನು ಅಗಲಿದ ನಟ
ರಜನಿಕಾಂತ್ ಅವರ ‘ಜೈಲರ್’ ಸಿನಿಮಾದಲ್ಲಿ ಮಾರಿಮುತ್ತು ನಟಿಸಿದ್ದರು. ‘ರೆಡ್ ಸ್ಯಾಂಡಲ್ ವುಡ್’ ಚಿತ್ರದಲ್ಲಿಯೂ ಅವರು ನಟಿಸಿದ್ದರು. ಮಾರಿಮುತ್ತು ನಿಧನ ಎಲ್ಲರಿಗೂ ಶಾಕ್ ನೀಡಿದೆ. ಮಾರಿಮುತ್ತು ಅವರಿಗೆ ಭಾಗ್ಯಲಕ್ಷ್ಮೀ ಎಂಬ ಪತ್ನಿಯಿದ್ದಾಳೆ. ಅಕಿಲನ್, ಈಶ್ವರ್ಯಾ ಎಂಬ ಮಕ್ಕಳಿದ್ದಾರೆ.

ವೈರಲ್ ಆಗುತ್ತಿದ್ದ ಮಾರಿಮುತ್ತು ಹೇಳಿಕೆಗಳು
ಜಿ ಮಾರಿಮುತ್ತು ಅವರು ಯಾವಾಗಲೂ ಬೋಲ್ಡ್ ಹೇಳಿಕೆಗಳನ್ನು ನೀಡುವ ಮೂಲಕ ಹೆಸರು ಮಾಡಿದ್ದರು. ಮಾರಿಮುತ್ತು ಹೇಳಿಕೆಗಳು ಸದಾ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ಆಗುತ್ತಿದ್ದವು. ‘ಜೈಲರ್’ ಸಿನಿಮಾದಲ್ಲಿ ಮಾರಿಮುತ್ತು ಅವರು ಖಳನಾಯಕನ ಪಾತ್ರ ಮಾಡಿದ್ದರು.

ಈ ಘಟನೆ ಹೇಗಾಯ್ತು?
ಸೆಪ್ಟೆಂಬರ್ 8ರಂದು ಸಹ ಕಲಾವಿದ ಕಮಲೇಶ್ ಜೊತೆ ‘Ethir Necchal’ ಎನ್ನುವ ಧಾರಾವಾಹಿಯ ಡಬ್ಬಿಂಗ್ ಮಾಡುತ್ತಿದ್ದರು. ಆ ವೇಳೆ ಅವರು ಚೆನ್ನೈನ ಸ್ಟುಡಿಯೋದಲ್ಲಿ ಬಿದ್ದರು. ಆನಂತರ ಅವರನ್ನು ಚೆನ್ನೈನ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯ್ತು. ಆದರೆ ಆ ವೇಳೆಗೆ ಅವರ ಪ್ರಾಣಪಕ್ಷಿ ಹಾರಿ ಹೋಗಿತ್ತು. ಇನ್ನು ಮಾರಿಮುತ್ತು ಅವರ ಮನೆಯಲ್ಲಿ ಪಾರ್ಥಿವ ಶರೀರವರನ್ನು ಇಡಲಾಗುವುದಂತೆ.

ನಿರ್ದೇಶಕನಾಗಬೇಕು ಅಂತ ಮನೆಯಿಂದ ಓಡಿ ಹೋಗಿದ್ದ ಮಾರಿಮುತ್ತು
ಈ ಹಿಂದಿನ ಸಂದರ್ಶನಗಳಲ್ಲಿ ಮಾತನಾಡಿದ್ದ ಮಾರಿಮುತ್ತು ಅವರು, ತಮಿಳು ಚಿತ್ರರಂಗದಲ್ಲಿ ಡೈರೆಕ್ಟರ್ ಆಗಬೇಕು ಎನ್ನುವ ಹುಚ್ಚಿನಿಂದ ಮನೆ ಬಿಟ್ಟು ಓಡಿ ಹೋಗಿದ್ರಂತೆ. 2008ರಲ್ಲಿ ತೆರೆ ಕಂಡ ‘ಕನ್ನುಮ್ ಕನ್ನುಮ್’ ಸಿನಿಮಾ ಮೂಲಕ ಅವರು ಡೈರೆಕ್ಟರ್ ಕ್ಯಾಪ್ ತೊಟ್ಟಿದ್ದರು. ಸಿನಿಮಾಗಳನ್ನು ನಿರ್ದೇಶನ ಮಾಡುವುದರ ಜೊತೆಗೆ ಅವರು ತಮಿಳು ಸಿನಿಮಾಗಳಲ್ಲಿ ಕೂಡ ನಟಿಸಿದ್ದಾರೆ. ವೃತ್ತಿ ಜೀವನದ ಆರಂಭದ ದಿನಗಳಲ್ಲಿ ಮಾರಿಮುತ್ತು ಅವರು ಗೀತರಚನೆಕಾರ ವೈರಮುತ್ತು ಜೊತೆ ಕೆಲಸ ಮಾಡಿದ್ದರು. ಕೆಲ ತಮಿಳು ಸಿನಿಮಾಗಳಿಗೆ ಸಹಾಯಕ ನಿರ್ದೇಶಕ ಕೂಡ ಆಗಿದ್ದರು.

‘ವಾಲಿ’, ‘ಜೀವ’, ‘ಪರಿಯೆರಮ್ ಪೆರುಮಲ್’ ಸಿನಿಮಾಗಳಲ್ಲಿ ನಟಿಸಿರುವ ಇವರು 2022ರಿಂದ ಧಾರಾವಾಹಿಯಲ್ಲಿಯೂ ನಟಿಸುತ್ತಿದ್ದಾರೆ.

andolanait

Recent Posts

ಎಲ್ಲಾ ಧರ್ಮದವರೂ ದೇಶದಲ್ಲಿರುವಾಗ ವಂದೇ ಮಾತರಂ ರಾಷ್ಟ್ರಗೀತೆ ಆಗಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್‌

ಬೆಂಗಳೂರು: ಎಲ್ಲಾ ಧರ್ಮದವರೂ ದೇಶದಲ್ಲಿರುವಾಗ ವಂದೇ ಮಾತರಂ ರಾಷ್ಟ್ರಗೀತೆ ಆಗಲು ಸಾಧ್ಯವಿಲ್ಲ ಎಂದು ಎಂಎಲ್‌ಸಿ ಬಿ.ಕೆ.ಹರಿಪ್ರಸಾದ್‌ ಕೇಂದ್ರ ಸರ್ಕಾರದ ವಿರುದ್ಧ…

22 mins ago

ಮಡಿಕೇರಿ ನ್ಯಾಯಾಲಯಕ್ಕೆ ಬಾಂಬ್‌ ಬೆದರಿಕೆ

ಮಡಿಕೇರಿ: ಮಡಿಕೇರಿ ನ್ಯಾಯಾಲಯಕ್ಕೆ ಬಾಂಬ್‌ ಬೆದರಿಕೆ ಕರೆ ಬಂದಿದ್ದು, ಸಿಬ್ಬಂದಿ ಕೆಲಕಾಲ ಆತಂಕ್ಕೀಡಾಗಿದ್ದರು. ಇತ್ತೀಚಿನ ದಿನಗಳಲ್ಲಿ ದಿನದಿಂದ ದಿನಕ್ಕೆ ಬಾಂಬ್‌…

1 hour ago

ನಟ ದರ್ಶನ್‌ 49ನೇ ಹುಟ್ಟುಹಬ್ಬಕ್ಕೆ ಪತ್ನಿ ವಿಜಯಲಕ್ಷ್ಮೀ ಶುಭಾಶಯ

ನಟ ದರ್ಶನ್‌ ಅವರಿಗೆ ಇಂದು 49ನೇ ಹುಟ್ಟುಹಬ್ಬದ ಸಂಭ್ರಮ. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ದರ್ಶನ್‌ ಬೆಂಗಳೂರಿನ…

2 hours ago

ಹನೂರು| ಭೈರನತ್ತ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ: ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಣಗಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಭೈರನತ್ತ ಗ್ರಾಮದಲ್ಲಿ ಕಳೆದ…

2 hours ago

ಈಶಾ ಫೌಂಡೇಶನ್‌ ಬಳಿ ಅರಣ್ಯ ಪ್ರದೇಶದಲ್ಲಿ ಬೆಂಕಿ ಅವಘಡ

ಚಿಕ್ಕಬಳ್ಳಾಪುರ: ಮಹಾಶಿವರಾತ್ರಿ ಸಂಭ್ರಮದ ಹಿನ್ನೆಲೆಯಲ್ಲಿ ಲಕ್ಷಾಂತರ ಭಕ್ತರು ಚಿಕ್ಕಬಳ್ಳಾಪುರದ ಈಶಾ ಫೌಂಡೇಶನ್‌ಗೆ ಆಗಮಿಸಿದ್ದರು. ಎಲ್ಲೆಡೆ ಶಿವನಾಮ ಸ್ಮರಣೆ ಕೇಳಿಬರುತ್ತಿದೆ. ಈ…

5 hours ago

ಕೇಂದ್ರದ ವಿರುದ್ಧ ರಾಹುಲ್‌ ಗಾಂಧಿ ಮತ್ತೆ ವಾಗ್ದಾಳಿ

ನವದೆಹಲಿ: ಭಾರತ-ಅಮೇರಿಕಾ ಮಧ್ಯಂತರ ವ್ಯಾಪಾರ ಒಪ್ಪಂದ ಕುರಿತು ಕೇಂದ್ರ ಸರ್ಕಾರದ ಒಪ್ಪಂದ ಕುರಿತು ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್‌ ನಾಯಕ…

5 hours ago