ಖ್ಯಾತ ತಮಿಳು ನಟ, ನಿರ್ದೇಶಕ ಮಾರಿಮುತ್ತು ಅವರು ಇಂದು ನಿಧನರಾಗಿದ್ದಾರೆ. 58 ವರ್ಷದ ಮಾರಿಮುತ್ತು ಅವರು ಇಂದು ಬೆಳಗ್ಗೆ 8.30ಕ್ಕೆ ಧಾರಾವಾಹಿಯೊಂದಕ್ಕೆ ಡಬ್ಬಿಂಗ್ ಮಾಡುವ ಸಮಯದಲ್ಲಿ ನಿಧನರಾಗಿದ್ದಾರೆ. ಅವರನ್ನು ಆದಷ್ಟು ಬೇಗ ಆಸ್ಪತ್ರೆಗೆ ಕರೆದುಕೊಂಡು ಬರಲಾಗಿದ್ದರೂ ಕೂಡ ಯಾವುದೇ ಪ್ರಯೋಜನ ಆಗಲಿಲ್ಲ.
ಪತ್ನಿ, ಇಬ್ಬರು ಮಕ್ಕಳನ್ನು ಅಗಲಿದ ನಟ
ರಜನಿಕಾಂತ್ ಅವರ ‘ಜೈಲರ್’ ಸಿನಿಮಾದಲ್ಲಿ ಮಾರಿಮುತ್ತು ನಟಿಸಿದ್ದರು. ‘ರೆಡ್ ಸ್ಯಾಂಡಲ್ ವುಡ್’ ಚಿತ್ರದಲ್ಲಿಯೂ ಅವರು ನಟಿಸಿದ್ದರು. ಮಾರಿಮುತ್ತು ನಿಧನ ಎಲ್ಲರಿಗೂ ಶಾಕ್ ನೀಡಿದೆ. ಮಾರಿಮುತ್ತು ಅವರಿಗೆ ಭಾಗ್ಯಲಕ್ಷ್ಮೀ ಎಂಬ ಪತ್ನಿಯಿದ್ದಾಳೆ. ಅಕಿಲನ್, ಈಶ್ವರ್ಯಾ ಎಂಬ ಮಕ್ಕಳಿದ್ದಾರೆ.
ವೈರಲ್ ಆಗುತ್ತಿದ್ದ ಮಾರಿಮುತ್ತು ಹೇಳಿಕೆಗಳು
ಜಿ ಮಾರಿಮುತ್ತು ಅವರು ಯಾವಾಗಲೂ ಬೋಲ್ಡ್ ಹೇಳಿಕೆಗಳನ್ನು ನೀಡುವ ಮೂಲಕ ಹೆಸರು ಮಾಡಿದ್ದರು. ಮಾರಿಮುತ್ತು ಹೇಳಿಕೆಗಳು ಸದಾ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ಆಗುತ್ತಿದ್ದವು. ‘ಜೈಲರ್’ ಸಿನಿಮಾದಲ್ಲಿ ಮಾರಿಮುತ್ತು ಅವರು ಖಳನಾಯಕನ ಪಾತ್ರ ಮಾಡಿದ್ದರು.
ಈ ಘಟನೆ ಹೇಗಾಯ್ತು?
ಸೆಪ್ಟೆಂಬರ್ 8ರಂದು ಸಹ ಕಲಾವಿದ ಕಮಲೇಶ್ ಜೊತೆ ‘Ethir Necchal’ ಎನ್ನುವ ಧಾರಾವಾಹಿಯ ಡಬ್ಬಿಂಗ್ ಮಾಡುತ್ತಿದ್ದರು. ಆ ವೇಳೆ ಅವರು ಚೆನ್ನೈನ ಸ್ಟುಡಿಯೋದಲ್ಲಿ ಬಿದ್ದರು. ಆನಂತರ ಅವರನ್ನು ಚೆನ್ನೈನ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯ್ತು. ಆದರೆ ಆ ವೇಳೆಗೆ ಅವರ ಪ್ರಾಣಪಕ್ಷಿ ಹಾರಿ ಹೋಗಿತ್ತು. ಇನ್ನು ಮಾರಿಮುತ್ತು ಅವರ ಮನೆಯಲ್ಲಿ ಪಾರ್ಥಿವ ಶರೀರವರನ್ನು ಇಡಲಾಗುವುದಂತೆ.
ನಿರ್ದೇಶಕನಾಗಬೇಕು ಅಂತ ಮನೆಯಿಂದ ಓಡಿ ಹೋಗಿದ್ದ ಮಾರಿಮುತ್ತು
ಈ ಹಿಂದಿನ ಸಂದರ್ಶನಗಳಲ್ಲಿ ಮಾತನಾಡಿದ್ದ ಮಾರಿಮುತ್ತು ಅವರು, ತಮಿಳು ಚಿತ್ರರಂಗದಲ್ಲಿ ಡೈರೆಕ್ಟರ್ ಆಗಬೇಕು ಎನ್ನುವ ಹುಚ್ಚಿನಿಂದ ಮನೆ ಬಿಟ್ಟು ಓಡಿ ಹೋಗಿದ್ರಂತೆ. 2008ರಲ್ಲಿ ತೆರೆ ಕಂಡ ‘ಕನ್ನುಮ್ ಕನ್ನುಮ್’ ಸಿನಿಮಾ ಮೂಲಕ ಅವರು ಡೈರೆಕ್ಟರ್ ಕ್ಯಾಪ್ ತೊಟ್ಟಿದ್ದರು. ಸಿನಿಮಾಗಳನ್ನು ನಿರ್ದೇಶನ ಮಾಡುವುದರ ಜೊತೆಗೆ ಅವರು ತಮಿಳು ಸಿನಿಮಾಗಳಲ್ಲಿ ಕೂಡ ನಟಿಸಿದ್ದಾರೆ. ವೃತ್ತಿ ಜೀವನದ ಆರಂಭದ ದಿನಗಳಲ್ಲಿ ಮಾರಿಮುತ್ತು ಅವರು ಗೀತರಚನೆಕಾರ ವೈರಮುತ್ತು ಜೊತೆ ಕೆಲಸ ಮಾಡಿದ್ದರು. ಕೆಲ ತಮಿಳು ಸಿನಿಮಾಗಳಿಗೆ ಸಹಾಯಕ ನಿರ್ದೇಶಕ ಕೂಡ ಆಗಿದ್ದರು.
‘ವಾಲಿ’, ‘ಜೀವ’, ‘ಪರಿಯೆರಮ್ ಪೆರುಮಲ್’ ಸಿನಿಮಾಗಳಲ್ಲಿ ನಟಿಸಿರುವ ಇವರು 2022ರಿಂದ ಧಾರಾವಾಹಿಯಲ್ಲಿಯೂ ನಟಿಸುತ್ತಿದ್ದಾರೆ.
ಬೆಂಗಳೂರು: ಕರ್ನಾಟಕದವರಿಗೆ, ವೋಟ್ ಇದ್ದವರಿಗೆ ಮಾತ್ರ ನಾವು ಗ್ಯಾರಂಟಿ ಕೊಡುತ್ತೇವೆ ಎಂದು ಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ…
ಬೆಂಗಳೂರು: ರಾಮನಗರ ಶಾಸಕ ಇಕ್ಬಾಲ್ ಹುಸೇನ್ಗೆ ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇಕ್ಬಾಲ್ ಹುಸೇನ್ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ…
ಬೆಂಗಳೂರು: ಲಂಕೇಶ್ ಪತ್ರಿಕೆಯ ಸಂಪಾದಕರಾಗಿದ್ದ ಖ್ಯಾತ ಪತ್ರಕರ್ತ ಪಿ.ಲಂಕೇಶ್ ಅವರ ಪತ್ನಿ ಇಂದಿರಾ ಲಂಕೇಶ್ ಅವರು ಬೆಂಗಳೂರಿನ ಉತ್ತರಹಳ್ಳಿಯಲ್ಲಿರುವ ತಮ್ಮ…
ಮುಂಬೈ: ಪಿಕ್ ಅಪ್ ವಾಹನವೊಂದು ರಸ್ತೆ ಬದಿಯ ತೆರೆದ ಬಾವಿಗೆ ಬಿದ್ದ ಪರಿಣಾಮ ನಾಲ್ವರು ಮಹಿಳೆಯರು ಹಾಗೂ ನಾಲ್ವರು ಮಕ್ಕಳು…
೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಜಾರಿಗೊಳಿಸಿದ್ದರು. ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ,…
ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ ಮುಂಬರುವ ವಿಧಾನಸಭಾ ಚುನಾವಣೆಗೆ ತಂತಮ್ಮ ಪಕ್ಷದ ವೈಯಕ್ತಿಕ ಬಲ ಹೆಚ್ಚಿಸಿಕೊಳ್ಳಲೂ ಕೂಡ ತಂತ್ರ ರಾಜ್ಯ ಕಾಂಗ್ರೆಸ್ನ…