ಚಿತ್ರ ಮಂಜರಿ

ಡಬ್ಬಿಂಗ್ ಮಾಡುವಾಗಲೇ ನಿಧನರಾದ ‘ಜೈಲರ್’ ಸಿನಿಮಾ ನಟ ಜಿ.ಮಾರಿಮುತ್ತು

ಖ್ಯಾತ ತಮಿಳು ನಟ, ನಿರ್ದೇಶಕ ಮಾರಿಮುತ್ತು ಅವರು ಇಂದು ನಿಧನರಾಗಿದ್ದಾರೆ. 58 ವರ್ಷದ ಮಾರಿಮುತ್ತು ಅವರು ಇಂದು ಬೆಳಗ್ಗೆ 8.30ಕ್ಕೆ ಧಾರಾವಾಹಿಯೊಂದಕ್ಕೆ ಡಬ್ಬಿಂಗ್ ಮಾಡುವ ಸಮಯದಲ್ಲಿ ನಿಧನರಾಗಿದ್ದಾರೆ. ಅವರನ್ನು ಆದಷ್ಟು ಬೇಗ ಆಸ್ಪತ್ರೆಗೆ ಕರೆದುಕೊಂಡು ಬರಲಾಗಿದ್ದರೂ ಕೂಡ ಯಾವುದೇ ಪ್ರಯೋಜನ ಆಗಲಿಲ್ಲ.

ಪತ್ನಿ, ಇಬ್ಬರು ಮಕ್ಕಳನ್ನು ಅಗಲಿದ ನಟ
ರಜನಿಕಾಂತ್ ಅವರ ‘ಜೈಲರ್’ ಸಿನಿಮಾದಲ್ಲಿ ಮಾರಿಮುತ್ತು ನಟಿಸಿದ್ದರು. ‘ರೆಡ್ ಸ್ಯಾಂಡಲ್ ವುಡ್’ ಚಿತ್ರದಲ್ಲಿಯೂ ಅವರು ನಟಿಸಿದ್ದರು. ಮಾರಿಮುತ್ತು ನಿಧನ ಎಲ್ಲರಿಗೂ ಶಾಕ್ ನೀಡಿದೆ. ಮಾರಿಮುತ್ತು ಅವರಿಗೆ ಭಾಗ್ಯಲಕ್ಷ್ಮೀ ಎಂಬ ಪತ್ನಿಯಿದ್ದಾಳೆ. ಅಕಿಲನ್, ಈಶ್ವರ್ಯಾ ಎಂಬ ಮಕ್ಕಳಿದ್ದಾರೆ.

ವೈರಲ್ ಆಗುತ್ತಿದ್ದ ಮಾರಿಮುತ್ತು ಹೇಳಿಕೆಗಳು
ಜಿ ಮಾರಿಮುತ್ತು ಅವರು ಯಾವಾಗಲೂ ಬೋಲ್ಡ್ ಹೇಳಿಕೆಗಳನ್ನು ನೀಡುವ ಮೂಲಕ ಹೆಸರು ಮಾಡಿದ್ದರು. ಮಾರಿಮುತ್ತು ಹೇಳಿಕೆಗಳು ಸದಾ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ಆಗುತ್ತಿದ್ದವು. ‘ಜೈಲರ್’ ಸಿನಿಮಾದಲ್ಲಿ ಮಾರಿಮುತ್ತು ಅವರು ಖಳನಾಯಕನ ಪಾತ್ರ ಮಾಡಿದ್ದರು.

ಈ ಘಟನೆ ಹೇಗಾಯ್ತು?
ಸೆಪ್ಟೆಂಬರ್ 8ರಂದು ಸಹ ಕಲಾವಿದ ಕಮಲೇಶ್ ಜೊತೆ ‘Ethir Necchal’ ಎನ್ನುವ ಧಾರಾವಾಹಿಯ ಡಬ್ಬಿಂಗ್ ಮಾಡುತ್ತಿದ್ದರು. ಆ ವೇಳೆ ಅವರು ಚೆನ್ನೈನ ಸ್ಟುಡಿಯೋದಲ್ಲಿ ಬಿದ್ದರು. ಆನಂತರ ಅವರನ್ನು ಚೆನ್ನೈನ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯ್ತು. ಆದರೆ ಆ ವೇಳೆಗೆ ಅವರ ಪ್ರಾಣಪಕ್ಷಿ ಹಾರಿ ಹೋಗಿತ್ತು. ಇನ್ನು ಮಾರಿಮುತ್ತು ಅವರ ಮನೆಯಲ್ಲಿ ಪಾರ್ಥಿವ ಶರೀರವರನ್ನು ಇಡಲಾಗುವುದಂತೆ.

ನಿರ್ದೇಶಕನಾಗಬೇಕು ಅಂತ ಮನೆಯಿಂದ ಓಡಿ ಹೋಗಿದ್ದ ಮಾರಿಮುತ್ತು
ಈ ಹಿಂದಿನ ಸಂದರ್ಶನಗಳಲ್ಲಿ ಮಾತನಾಡಿದ್ದ ಮಾರಿಮುತ್ತು ಅವರು, ತಮಿಳು ಚಿತ್ರರಂಗದಲ್ಲಿ ಡೈರೆಕ್ಟರ್ ಆಗಬೇಕು ಎನ್ನುವ ಹುಚ್ಚಿನಿಂದ ಮನೆ ಬಿಟ್ಟು ಓಡಿ ಹೋಗಿದ್ರಂತೆ. 2008ರಲ್ಲಿ ತೆರೆ ಕಂಡ ‘ಕನ್ನುಮ್ ಕನ್ನುಮ್’ ಸಿನಿಮಾ ಮೂಲಕ ಅವರು ಡೈರೆಕ್ಟರ್ ಕ್ಯಾಪ್ ತೊಟ್ಟಿದ್ದರು. ಸಿನಿಮಾಗಳನ್ನು ನಿರ್ದೇಶನ ಮಾಡುವುದರ ಜೊತೆಗೆ ಅವರು ತಮಿಳು ಸಿನಿಮಾಗಳಲ್ಲಿ ಕೂಡ ನಟಿಸಿದ್ದಾರೆ. ವೃತ್ತಿ ಜೀವನದ ಆರಂಭದ ದಿನಗಳಲ್ಲಿ ಮಾರಿಮುತ್ತು ಅವರು ಗೀತರಚನೆಕಾರ ವೈರಮುತ್ತು ಜೊತೆ ಕೆಲಸ ಮಾಡಿದ್ದರು. ಕೆಲ ತಮಿಳು ಸಿನಿಮಾಗಳಿಗೆ ಸಹಾಯಕ ನಿರ್ದೇಶಕ ಕೂಡ ಆಗಿದ್ದರು.

‘ವಾಲಿ’, ‘ಜೀವ’, ‘ಪರಿಯೆರಮ್ ಪೆರುಮಲ್’ ಸಿನಿಮಾಗಳಲ್ಲಿ ನಟಿಸಿರುವ ಇವರು 2022ರಿಂದ ಧಾರಾವಾಹಿಯಲ್ಲಿಯೂ ನಟಿಸುತ್ತಿದ್ದಾರೆ.

andolanait

Recent Posts

ಸಿಎಂ ಆದ ಬಳಿಕ ಮೊದಲ ಬಾರಿಗೆ ಕೊಡಗಿಗೆ ಡಿಕೆಶಿ ಭೇಟಿ

ಕೊಡಗು: ಸಿಎಂ ಡಿ.ಕೆ.ಶಿವಕುಮಾರ್‌ ಅವರಿಂದು ಕೊಡಗಿಗೆ ಭೇಟಿ ನೀಡಿದ್ದಾರೆ. ಕೊಡಗಿಗೆ ಆಗಮಿಸುತ್ತಿದ್ದಂತೆ ಕೊಡವ ಸಂಪ್ರದಾಯದಂತೆ ಸಿಎಂ ಡಿ.ಕೆ.ಶಿವಕುಮಾರ್‌ ಅವರಿಗೆ ಕೊಡವತಿಯರು…

5 mins ago

ಕೊಲೆ ಆರೋಪಿ ಪವಿತ್ರಾಗೌಡ ಬೇರೆ ಸೆಲ್‌ಗೆ ಶಿಫ್ಟ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ಪವಿತ್ರಾಗೌಡರನ್ನು ಪರಪ್ಪನ ಅಗ್ರಹಾರದಲ್ಲಿ ಬೇರೆ ಸೆಲ್‌ಗೆ ಶಿಫ್ಟ್‌ ಮಾಡಲಾಗಿದೆ. ಇಬ್ಬರ ಬ್ಯಾರಕ್‌ನಲ್ಲಿದ್ದ…

33 mins ago

ಶೂಟೌಟ್ ಪ್ರಕರಣ: ಇನ್ಸ್‌ಪೆಕ್ಟರ್ ಮೇಲೆ ಹಲ್ಲೆಗೆ ಯತ್ನ: ಪೊಲೀಸರ ಲಘು ಲಾಟಿ ಪ್ರಹಾರ, 5 ಮಂದಿ ವಶ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆಯುತ್ತಿದ್ದ ಪ್ರತಿಭಟನೆಯಲ್ಲಿ…

3 hours ago

ಹನೂರು ಗುಂಡಿನ ದಾಳಿ: ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ ಕುಟುಂಬಸ್ಥರು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹನೂರು ತಾಲೂಕಿನ ಕಾವೇರಿ ವನ್ಯಜೀವಿಧಾಮದ ಶಾಖೆ ಅರಣ್ಯದಲ್ಲಿ ನಡೆದ ಗುಂಡಿನ…

3 hours ago

ಕುಶಾಲನಗರ| ಬೀದಿ ನಾಯಿ ದಾಳಿ: ವ್ಯಕ್ತಿಗೆ ಗಾಯ

ಕುಶಾಲನಗರ: ತಾಲ್ಲೂಕಿನ ಕೂಡಿಗೆ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿ ಮುಂದುವರಿದಿದ್ದು, ವ್ಯಕ್ತಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ. ಹೆಗ್ಗಡಹಳ್ಳಿ ಗ್ರಾಮದ…

3 hours ago

ಇಂಡೋನೇಷ್ಯಾದಲ್ಲಿ 7.7 ತೀವ್ರತೆಯ ಪ್ರಬಲ ಭೂಕಂಪ: ಮೃತರ ಸಂಖ್ಯೆ 40ಕ್ಕೆ ಏರಿಕೆ

ಜಕಾರ್ತ: ಇಂಡೋನೇಷ್ಯಾದ ಫ್ಲೋರ್ಸ್‌ ದ್ವೀಪದಲ್ಲಿ ಶನಿವಾರ ಮುಂಜಾನೆ 7.7 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಮೃತರ ಸಂಖ್ಯೆ 40ಕ್ಕೆ ಏರಿಕೆಯಾಗಿದೆ.…

6 hours ago