ಚಿತ್ರ ಮಂಜರಿ

ಜನವರಿ 26ರಂದು ಮೈಸೂರಿನಲ್ಲಿ ಸಿಂಹ-ಪ್ರಿಯ ಮದುವೆ

ಬೆಂಗಳೂರು: ಹರಿಪ್ರಿಯಾ ಮತ್ತು ವಸಿಷ್ಠ ಸಿಂಹ ಮದುವೆಗೆ ತಯಾರಿ ನಡೆಯುತ್ತಿದೆ. ಮೈಸೂರಿನ ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ವಿವಾಹ ನಡೆಯಲಿದೆ.

ಮೈಸೂರಿನ ಗಣಪತಿ ಸಚ್ಚಿದಾನಂದ ಆಶ್ರಮಕ್ಕೆ ಹರಿಪ್ರಿಯಾ ಮತ್ತು ವಸಿಷ್ಠ ಸಿಂಹ ಭೇಟಿ ಸ್ಯಾಂಡಲ್​ವುಡ್​ ಸ್ಟಾರ್​ ಕಪಲ್​ ಆದಂತಹ ವಸಿಷ್ಠ ಸಿಂಹ ಮತ್ತು ಹರಿಪ್ರಿಯಾ  ಅವರು ಹಸೆಮಣೆ ಏರಲು ಸಜ್ಜಾಗಿದ್ದಾರೆ.

ಕೆಲವೇ ದಿನಗಳ ಹಿಂದೆ ಅವರ ಎಂಗೇಜ್​ಮೆಂಟ್​ ಫೋಟೋಗಳು ವೈರಲ್​ ಆಗಿದ್ದವು. ಈಗ ಮದುವೆ ದಿನಾಂಕ ಕೂಡ ಬಹಿರಂಗ ಆಗಿದೆ. ಜನವರಿ 26ರಂದು ಹರಿಪ್ರಿಯಾ-ವಸಿಷ್ಠ ಸಿಂಹ  ಮದುವೆ ನೆರವೇರಲಿದೆ. ವಿವಾಹದ ಡೇಟ್​ ಕುರಿತು ಸಂಸದ ಪ್ರತಾಪ್​ ಸಿಂಹ ಅವರು ಸೋಶಿಯಲ್​ ಮೀಡಿಯಾದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

ಮೈಸೂರಿನ ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ವಿವಾಹ ನಡೆಯಲಿದೆ ಎಂದು ಅವರು ತಿಳಿಸಿದ್ದಾರೆ. ಮದುವೆಗೆ ಸಕಲ ತಯಾರಿ ನಡೆಯುತ್ತಿದೆ.  ಹರಿಪ್ರಿಯಾ ಮತ್ತು ವಸಿಷ್ಠ ಸಿಂಹ ಅವರು ಆಶ್ರಮಕ್ಕೆ ತೆರಳಿ ಶ್ರೀಗಳ ಆಶೀರ್ವಾದ ಪಡೆದಿದ್ದಾರೆ. ಈ ಸಂದರ್ಭದಲ್ಲಿ ಪ್ರತಾಪ್​ ಸಿಂಹ ಕೂಡ ಜೊತೆಗಿದ್ದರು. ಈ ಫೋಟೋಗಳನ್ನು ಅವರು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

 

andolanait

Recent Posts

ವಿ.ಬಾಡಗದಲ್ಲಿ ಕೌಟುಂಬಿಕ ಹಾಕಿ ಪಂದ್ಯಕ್ಕೆ ಚಾಲನೆ

ಕೊಡಗಿನ ಖ್ಯಾತಿ ಹೆಚ್ಚಿಸುವಲ್ಲಿ ಕ್ರೀಡಾಪಟುಗಳ ಕೊಡುಗೆ ಅಪಾರ: ಸುಜಾ ಕುಶಾಲಪ್ಪ ಪೊನ್ನಂಪೇಟೆ: ಕೊಡಗು ಜಿಲ್ಲೆ ರಾಷ್ಟ್ರಮಟ್ಟದಲ್ಲಿ ವಿಭಿನ್ನವಾಗಿ ಗುರುತಿಸಿಕೊಂಡಿದೆ. ಎಲ್ಲ…

2 hours ago

ಮದ್ಯಪಾನಿಗಳ ತಾಣವಾದ ಶಾಲಾ ಕಟ್ಟಡ

ಮುಚ್ಚಲ್ಪಟ್ಟಿರುವ ಶಾಲೆಯ ಕೊಠಡಿಯಲ್ಲಿ ರಾರಾಜಿಸುತ್ತಿರುವ ಮದ್ಯದ ಬಾಟಲಿಗಳು; ನಾಗರಿಕರ ಆಕ್ರೋಶ ಹನೂರು: ನಿಗದಿತ ಸಂಖ್ಯೆಯ ಮಕ್ಕಳಿಲ್ಲ ಎಂಬ ಕಾರಣಕ್ಕೆ ಮುಚ್ಚಲ್ಪಟ್ಟಿರುವ…

2 hours ago

ಎಂಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಸ್ಥಾನ: ಆಕಾಂಕ್ಷಿಗಳ ಕಸರತ್ತು

ಕೆ.ಬಿ.ರಮೇಶನಾಯಕ ಅಪೆಕ್ಸ್ ಬ್ಯಾಂಕ್ ಉಪಾಧ್ಯಕ್ಷರ ಹುದ್ದೆಯತ್ತ ಶಾಸಕ ಅನಿಲ್ ಚಿತ್ತ ತಂದೆಗೆ ಅಧ್ಯಕ್ಷ ಹುದ್ದೆ ಕೊಡಿಸಲು ಶಾಸಕ ಡಿ.ರವಿಶಂಕರ್ ಯತ್ನ …

2 hours ago

ಜಾತೀಯತೆ ತೊಲಗಲಿ : ಡಾ.ಯತೀಂದ್ರ ಸಿದ್ದರಾಮಯ್ಯ

ನಂಜನಗೂಡು : ಜಾತೀಯತೆ ಎಂಬುದು ಸಂಪೂರ್ಣವಾಗಿ ತೊಲಗಬೇಕು. ಎಲ್ಲ ಸಮುದಾಯದವರು ನಮ್ಮವರೇ ಎಂದು ತಿಳಿದಾಗ ಮಾತ್ರ ಜಾತೀಯತೆ ದೂರವಾಗಲು ಸಾಧ್ಯ…

12 hours ago

ರಂಗಾಯಣ | ಐದು ದಿನಗಳ ʼನಿರಂತರ ರಂಗ ಉತ್ಸವʼಕ್ಕೆ ತೆರೆ

ಮೈಸೂರು : ನಿರಂತರ ರಂಗ ತಂಡದ ‘ನಿರಂತರ ರಂಗ ಉತ್ಸವ-2025-26’ರ ಐದು ದಿನಗಳ ರಂಗೋತ್ಸವದ ಕೊನೆಯ ದಿನ ‘ಕೊಡಲ್ಲ ಅಂದ್ರೆ…

12 hours ago