ಚಿತ್ರ ಮಂಜರಿ

ಜನವರಿ 26ರಂದು ಮೈಸೂರಿನಲ್ಲಿ ಸಿಂಹ-ಪ್ರಿಯ ಮದುವೆ

ಬೆಂಗಳೂರು: ಹರಿಪ್ರಿಯಾ ಮತ್ತು ವಸಿಷ್ಠ ಸಿಂಹ ಮದುವೆಗೆ ತಯಾರಿ ನಡೆಯುತ್ತಿದೆ. ಮೈಸೂರಿನ ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ವಿವಾಹ ನಡೆಯಲಿದೆ.

ಮೈಸೂರಿನ ಗಣಪತಿ ಸಚ್ಚಿದಾನಂದ ಆಶ್ರಮಕ್ಕೆ ಹರಿಪ್ರಿಯಾ ಮತ್ತು ವಸಿಷ್ಠ ಸಿಂಹ ಭೇಟಿ ಸ್ಯಾಂಡಲ್​ವುಡ್​ ಸ್ಟಾರ್​ ಕಪಲ್​ ಆದಂತಹ ವಸಿಷ್ಠ ಸಿಂಹ ಮತ್ತು ಹರಿಪ್ರಿಯಾ  ಅವರು ಹಸೆಮಣೆ ಏರಲು ಸಜ್ಜಾಗಿದ್ದಾರೆ.

ಕೆಲವೇ ದಿನಗಳ ಹಿಂದೆ ಅವರ ಎಂಗೇಜ್​ಮೆಂಟ್​ ಫೋಟೋಗಳು ವೈರಲ್​ ಆಗಿದ್ದವು. ಈಗ ಮದುವೆ ದಿನಾಂಕ ಕೂಡ ಬಹಿರಂಗ ಆಗಿದೆ. ಜನವರಿ 26ರಂದು ಹರಿಪ್ರಿಯಾ-ವಸಿಷ್ಠ ಸಿಂಹ  ಮದುವೆ ನೆರವೇರಲಿದೆ. ವಿವಾಹದ ಡೇಟ್​ ಕುರಿತು ಸಂಸದ ಪ್ರತಾಪ್​ ಸಿಂಹ ಅವರು ಸೋಶಿಯಲ್​ ಮೀಡಿಯಾದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

ಮೈಸೂರಿನ ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ವಿವಾಹ ನಡೆಯಲಿದೆ ಎಂದು ಅವರು ತಿಳಿಸಿದ್ದಾರೆ. ಮದುವೆಗೆ ಸಕಲ ತಯಾರಿ ನಡೆಯುತ್ತಿದೆ.  ಹರಿಪ್ರಿಯಾ ಮತ್ತು ವಸಿಷ್ಠ ಸಿಂಹ ಅವರು ಆಶ್ರಮಕ್ಕೆ ತೆರಳಿ ಶ್ರೀಗಳ ಆಶೀರ್ವಾದ ಪಡೆದಿದ್ದಾರೆ. ಈ ಸಂದರ್ಭದಲ್ಲಿ ಪ್ರತಾಪ್​ ಸಿಂಹ ಕೂಡ ಜೊತೆಗಿದ್ದರು. ಈ ಫೋಟೋಗಳನ್ನು ಅವರು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

 

andolanait

Recent Posts

ಸಾಲ ಬಾಧೆ ; ದಂಪತಿ ಆತ್ಮಹತ್ಯೆ

ಮಂಡ್ಯ : ಸಾಲ ಬಾಧೆಯಿಂದ ದಂಪತಿಗಳಿಬ್ಬರು ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಬಿ.ಹಟ್ಟಣ ಗ್ರಾಮದಲ್ಲಿ…

5 hours ago

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

18 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

18 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

18 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

18 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

18 hours ago