ಚಿತ್ರ ಮಂಜರಿ

ರಿಲೀಸ್ ಗೂ ಮುನ್ನ ಜವಾನ್ ಚಿತ್ರದ ವಿಡಿಯೋ ಲೀಕ್ : ಪೊಲೀಸ್ ಠಾಣೆ ಮೆಟ್ಟಿಲೇರಿದ ಚಿತ್ರ ತಂಡ

ಬಾಲಿವುಡ್ ಬಾದ್ ಷಾ ಶಾರುಖ್ ಖಾನ್ ನಟನೆಯ ಜವಾನ್ ಸಿನಿಮಾ ಇನ್ನಷ್ಟೇ ಬಿಡುಗಡೆಯಾಗಬೇಕಿದೆ. ರಿಲೀಸ್ ಗೂ ಮುನ್ನ ಚಿತ್ರತಂಡಕ್ಕೆ ಭರ್ಜರಿ ಶಾಕ್ ಕೊಟ್ಟಿದೆ ಮೈಕ್ರೋ ಬ್ಲಾಗ್ ವೊಂದು ಚಿತ್ರದ ವಿಡಿಯೋ ತುಣಕೊಂದನ್ನು ಪೋಸ್ಟ್ ಮಾಡಿದ್ದು, ಅದರಿಂದಾಗಿ ಸಿನಿಮಾದ ಹಲವು ವಿಷಯಗಳು ಬಹಿರಂಗವಾಗಿವೆಯಂತೆ. ಹಾಗಾಗಿ ಚಿತ್ರತಂಡದ ಪ್ರದೀಪ್ ನಿಮಾನಿ ಮುಂಬೈನ ಸಾಂತಾಕ್ರೂಜ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಎಫ್.ಐ.ಆರ್ ಕೂಡ ದಾಖಲಾಗಿದೆ.

ಶಾರುಖ್ ಖಾನ್ ಅಭಿನಯದ ಪಠಾಣ್ ಚಿತ್ರವು ಜಗತ್ತಿನಾದ್ಯಂತ 1000 ಕೋಟಿ ರೂ. ಗಳಿಕೆ ಮಾಡುವ ಮೂಲಕ ಬ್ಲಾಕ್ಬಸ್ಟರ್ ಆಗಿತ್ತು. ಇದರಿಂದ ಸಹಜವಾಗಿಯೇ ಅವರ ಮುಂದಿನ ಚಿತ್ರ ಜವಾನ್ ಮೇಲೆ ಸಾಕಷ್ಟು ನಿರೀಕ್ಷೆಗಳು ಹೆಚ್ಚಾಗಿವೆ. ಈ ಚಿತ್ರದ ಹಕ್ಕುಗಳನ್ನು ತಮ್ಮದಾಗಿಸಿಕೊಳ್ಳುವುದಕ್ಕೆ ಹಲವು ಪ್ರತಿಷ್ಠಿತ ಸಂಸ್ಥೆಗಳು ಮುಂದಾಗಿದ್ದು, ಈ ಪೈಕಿ ಚಿತ್ರದ ಆಡಿಯೋ ಹಕ್ಕುಗಳು ದಾಖಲೆಯ 36 ಕೋಟಿ ರೂ. ಮೊತ್ತಕ್ಕೆ ಮಾರಾಟವಾಗಿರುವ ಸುದ್ದಿ ಬಂದಿದೆ.

ಜವಾನ್ ಚಿತ್ರದ ಆಡಿಯೋ ಹಕ್ಕುಗಳನ್ನು ಭಾರತದ ಖ್ಯಾತ ಆಡಿಯೋ ಸಂಸ್ಥೆಯಾದ ಟಿ-ಸೀರೀಸ್ ತನ್ನದಾಗಿಸಿಕೊಂಡಿದ್ದು, 36 ಕೋಟಿ ರೂ.ಗಳನ್ನು ಕೊಟ್ಟು ಹಕ್ಕುಗಳನ್ನು ಪಡೆದಿದೆ ಎಂದು ಹೇಳಲಾಗಿದೆ. ಚಿತ್ರಕ್ಕೆ ತಮಿಳಿನ ಜನಪ್ರಿಯ ಸಂಗೀತ ನಿರ್ದೇಶಕರಾದ ಅನಿರುದ್ಧ್ ರವಿಚಂದರ್, ಈ ಚಿತ್ರದ ಮೂಲಕ ಬಾಲಿವುಡ್ ಗೆ ಎಂಟ್ರಿ ಕೊಟ್ಟಿದ್ದಾರೆ.

ಈ ವರ್ಷದ ಅತೀ ನಿರೀಕ್ಷಿತ ಮತ್ತು ದುಬಾರಿ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಜವಾನ್ ಚಿತ್ರವನ್ನು ರೆಡ್ ಚಿಲ್ಲೀಸ್ ಎಂಟರ್ಟೈನ್ಮೆಂಟ್ ಸಂಸ್ಥೆಯಡಿ ಶಾರುಖ್ ಖಾನ್ ಅವರ ಪತ್ನಿ ಗೌರಿ ಖಾನ್ ನಿರ್ಮಿಸುತ್ತಿದ್ದು, ದಕ್ಷಿಣ ಭಾರತದ ಜನಪ್ರಿಯ ನಿರ್ದೇಶಕರಾದ ಅಟ್ಲಿ ನಿರ್ದೇಶನ ಮಾಡಿದ್ದಾರೆ.

ಜವಾನ್ ಒಂದು ಆಕ್ಷನ್ ಥ್ರಿಲ್ಲರ್ ಚಿತ್ರವಾಗಿದ್ದು, ಶಾರುಖ್ ಖಾನ್ ಜೊತೆಗೆ ನಯನತಾರಾ, ವಿಜಯ್ ಸೇತುಪತಿ, ಪ್ರಿಯಾಮಣಿ, ಯೋಗಿ ಬಾಬು, ಸುನೀಲ್ ಗ್ರೋವರ್, ಸಾನ್ಯಾ ಮಲ್ಹೋತ್ರಾ ಸೇರಿದಂತ ಹಲವು ಜನಪ್ರಿಯ ಕಲಾವಿದರು ಅಭಿನಯಿಸಿದ್ದಾರೆ. ದೀಪಿಕಾ ಪಡುಕೋಣೆ, ಸಂಜಯ್ ದತ್ ಮತ್ತು ವಿಜಯ್ ಅತಿಥಿ ಕಲಾವಿದರಾಗಿ ನಟಿಸಿದ್ದಾರೆ ಎಂದು ಹೇಳಲಾಗುತ್ತಿದೆ.‘ಜವಾನ್’ ಚಿತ್ರವು ಸೆಪ್ಟೆಂಬರ್ 7ರಂದು ಜಗತ್ತಿನಾದ್ಯಂತ ಬಿಡುಗಡೆಯಾಗುತ್ತಿದೆ.

lokesh

Recent Posts

2.20ಕೋಟಿ ರೂ.ಮೌಲ್ಯದ ಚಿನ್ನಾಭರಣ ವಶ ; 26 ಮಂದಿ ಬಂಧನ.

ಮಂಡ್ಯ : ಜಿಲ್ಲೆಯ ನಾಲ್ಕು ಪೊಲೀಸ್ ಉಪ ವಿಭಾಗಗಳಲ್ಲಿ ನಡೆದಿದ್ದ ಕಳ್ಳತನ ಪ್ರಕರಣಗಳನ್ನು ಪೊಲೀಸರು ಬೇಧಿಸಿದ್ದಾರೆ. 28 ಮಂದಿ ಆರೋಪಿಗಳನ್ನು…

3 hours ago

ತಳಸಮುದಾಯಕ್ಕೆ ಆರ್ಥಿಕ ಸಾಮಾಜಿಕ ಶಕ್ತಿ ಅಗತ್ಯ : ಸಿಎಂ

ಬಾಗಲಕೋಟೆ : ಕಾಂಗ್ರೆಸ್ ಸರ್ಕಾರ ಮಹಿಳೆಯರು, ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು ಸೇರಿದಂತೆ ಶೋಷಿತ ವರ್ಗಗಳ ಏಳಿಗೆಗೆ ಶ್ರಮಿಸುತ್ತಿದೆ. ತಳಸಮುದಾಯದವರಿಗೆ ಆರ್ಥಿಕ…

4 hours ago

ಅಭಿವೃದ್ಧಿ ವಿಷಯದಲ್ಲಿ ರಾಜ್ಯ ಸರ್ಕಾರದ ಜತೆ ನಿಲ್ಲುತ್ತೇನೆ : ಕೇಂದ್ರ ಸಚಿವ ಎಚ್‌ಡಿಕೆ

ರಾಯಚೂರು : ಜಿಲ್ಲೆಯ ಸಿಂಧನೂರು ಪಟ್ಟಣದ ಶ್ರೀ ಕೃಷ್ಣದೇವರಾಯ ವಿದ್ಯಾಸಂಸ್ಥೆಯಲ್ಲಿ ನೂತನವಾಗಿ ಸ್ಥಾಪಿಸಲಾಗಿರುವ ಸೈನಿಕ ಶಾಲೆಯನ್ನು ಕೇಂದ್ರದ ಬೃಹತ್ ಕೈಗಾರಿಕೆ…

4 hours ago

IPL 2026 | ಮುಂಬೈ ವಿರುದ್ಧ ಡೆಲ್ಲಿಗೆ ಭರ್ಜರಿ ಜಯ

ನವದೆಹಲಿ : ಸಮೀರ್ ರಿಜ್ವಿ ಸ್ಫೋಟಕ ಬ್ಯಾಟಿಂಗ್ ಜತೆಗೆ ಸಂಘಟಿತ ಬೌಲಿಂಗ್ ನೆರವಿನಿಂದ ಮುಂಬೈ ಇಂಡಿಯನ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್…

4 hours ago

ಇರಾನ್ ಮೇಲೆ ಕ್ಷಿಪಣಿ ದಾಳಿ ; ಬುಶೆಹರ್ ಅಣುಸ್ಥಾವರದ ಬಳಿ ಹಾನಿ

ಟೆಹ್ರಾನ್ : ಅಮೆರಿಕದ ಮಿತ್ರರಾಷ್ಟ್ರಗಳಲ್ಲಿನ ಸೇನಾ ನೆಲೆಗಳ ಮೇಲೆ ಇರಾನ್ ಕ್ಷಿಪಣಿ ದಾಳಿ ಮುಂದುವರಿದಿರುವಂತೆಯೇ ಇತ್ತ ಇರಾನ್ ಮೇಲೆ ಮುಗಿಬಿದ್ದಿರುವ…

5 hours ago

ಇಂಧನ ವ್ಯತ್ಯಯ ಆತಂಕ ; ಎಲೆಕ್ಟ್ರಿಕ್‌ ವಾಹನ ಮಾರಾಟದಲ್ಲಿ ಏರಿಕೆ

ಬೆಂಗಳೂರು : ಯುದ್ಧದ ಪರಿಣಾಮ ಕೆಲ ಉದ್ಯಮಗಳಿಗೆ ಹೊಡೆತ ನೀಡಿದರೆ, ಇನ್ನೂ ಕೆಲವು ಕ್ಷೇತ್ರಗಳಿಗೆ ಅದೇ ಅವಕಾಶವಾಗಿ ಪರಿಣಮಿಸಿದೆ. ಅದರಲ್ಲೂ…

5 hours ago