ಚಿತ್ರ ಮಂಜರಿ

ಜೂ. ‘ಎನ್‌ಟಿಆರ್‌’ ಅಭಿನಯದ ದೇವರ ಸಿನಿಮಾ ಬಿಡುಗಡೆ ದಿನಾಂಕ ಮುಂದೂಡಿಕೆ : ಚಿತ್ರ ಬಿಡುಗಡೆ ಯಾವಾಗ!

ತೆಲಂಗಾಣ : ಜೂನಿಯರ್ ಎನ್‌.ಟಿ.ಆರ್‌ ವಿವಿಧ ಪಾತ್ರಗಳಲ್ಲಿ ಅಭಿನಯ ಮಾಡುವ ಮೂಲಕ ಪ್ಯಾನ್‌ ಇಂಡಿಯಾದಲ್ಲಿ ಮಿಂಚಿದ್ದಾರೆ. ಅವರ ಮುಂದಿನ ಸಿನಿಮಾದ ಬಗ್ಗೆ ಕುತೂಹಲವೂ ಅಷ್ಟೇ ಹೆಚ್ಚಾಗಿದೆ. ಇವರು ಕೊರಟಾಲ ಶಿವ ಅವರೊಂದಿಗೆ ʼದೇವರʼ ಸಿನಿಮಾದಲ್ಲಿ ಅಭಿನಯ ಮಾಡುತ್ತಿದಾರೆ.

ಸಿನಿಮಾ ಅನೌನ್ಸ್‌ ಆದ ದಿನದಿಂದ ದೊಡ್ಡಮಟ್ಟದಲ್ಲಿ ಸದ್ದು ಮಾಡಿದೆ. ಸಿನಿಮಾದಲ್ಲಿ ಬಾಲಿವುಡ್‌ ನಟಿ ಜಾಹ್ನವಿ ಕಪೂರ್‌, ನಟ ಸೈಫ್‌ ಅಲಿಖಾನ್‌ ಅವರು ಪ್ರಧಾನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವುದರಿಂದ ಬಿಟೌನ್‌ ಸಿನಿಮಂದಿಗೂ ʼದೇವರʼ ಸಿನಿಮಾ ಕುತೂಹಲ ಹುಟ್ಟಿಸಿದೆ. ಎರಡು ಭಾಗದಲ್ಲಿ ʼದೇವರʼ ತೆರೆ ಕಾಣಲಿದೆ.

ಮೊದಲ ಭಾಗ ಇದೇ ಏಪ್ರಿಲ್‌ 5 ರಂದು ರಿಲೀಸ್‌ ಮಾಡುವ ಯೋಜನೆಯನ್ನು ಚಿತ್ರತಂಡ ಹಾಕಿಕೊಂಡಿತ್ತು. ಆದರೆ ಇದೀಗ ಸಿನಿಮಾ ಅಂದುಕೊಂಡ ದಿನಕ್ಕೆ ತೆರೆಗೆ ಬರುವುದಿಲ್ಲ ʼಪಿಂಕ್‌ ವಿಲ್ಲಾʼ ವರದಿ ಮಾಡಿದೆಯಾಗಿದೆ.

“ದೇವರ ಸಿನಿಮಾಗೆ ವಿಎಫ್‌ ಎಕ್ಸ್‌ ಕೆಲಸ ಹೆಚ್ಚಿದೆ. ಔಟ್‌ ಪುಟ್‌ ಬರಲು ನಿರೀಕ್ಷೆಗಿಂತ ಹೆಚ್ಚಿನ ಸಮಯ ಬೇಕಾಗುತ್ತದೆ. ಈ ಕಾರಣದಿಂದ ಚಿತ್ರತಂಡ ಈ ವಿಚಾರದಲ್ಲಿ ಯಾವುದೇ ರಾಜಿ ಮಾಡಿಕೊಳ್ಳದೆ.

ಅಂದುಕೊಂಡ ದಿನಕ್ಕೆ (ಏ.5 ರಂದು) ರಿಲೀಸ್‌ ಮಾಡದಿರಲು ನಿರ್ಧರಿಸಿದೆ” ಎಂದು ಮೂಲಗಳು ಹೇಳಿರುವುದಾಗಿ ʼಪಿಂಕ್‌ ವಿಲ್ಲಾʼ ವರದಿ ಮಾಡಿದೆ.”ಇನ್ನು ಕೂಡ 20 ದಿನದ ಚಿತ್ರೀಕರಣ ಬಾಕಿಯಿದೆ.

ಇದಲ್ಲದೆ ಸೈಫ್‌ ಅಲಿಖಾನ್‌ ಅವರಿಗೆ ಭುಜದ ಶಸ್ತ್ರ ಚಿಕಿತ್ಸೆಯಾಗಿದ್ದು, ಚಿತ್ರೀಕರಣ ಇನ್ನಷ್ಟು ತಡವಾಗುವ ಸಾಧ್ಯತೆಯಿದೆ. ಈ ಕಾರಣದಿಂದ ರಿಸ್ಕ್‌ ತೆಗದುಕೊಳ್ಳದೆ ಸಿನಿಮಾ ರಿಲೀಸ್‌ ದಿನವನ್ನು ಮುಂದೂಡಲಾಗಿದೆ.

ಸಿನಿಮಾ 2024 ರ ದ್ವಿತೀಯಾರ್ಧದಲ್ಲಿ ತೆರೆ ಕಾಣಲಿದೆ” ಎಂದು ಮೂಲಗಳು ಹೇಳಿರುವುದಾಗಿ ವರದಿ ತಿಳಿಸಿದೆಯಾಗಿದೆ.

andolanait

Recent Posts

ಘೋಷಣೆಗೆ ಸೀಮಿತವಾದ ವಾಣಿಜ್ಯ ಗ್ಯಾಸ್ ಪೂರೈಕೆ

ಪ್ರಶಾಂತ್ ಮಲ್ಲಿಕ್‌  ಹೋಟೆಲ್ ಉದ್ಯಮದ ಕಂಗಾಲು ಸ್ಥಿತಿ ಮುಂದುವರಿಕೆ ಮೈಸೂರಲ್ಲಿ ಶೇ.೧೦ರಷ್ಟು ಹೋಟೆಲ್‌ಗಳು ಬಂದ್ ಗ್ಯಾಸ್ ಸಿಗದ ಕಾರಣ ಸೌದೆಗೆ…

12 mins ago

ಇಂದಿರಾ ಕ್ಯಾಂಟೀನ್‌ಗೂ ಸಂಕಷ್ಟ ; ಸೀಮಿತಗೊಂಡ ತಿನಿಸುಗಳ ತಯಾರಿ

ನವೀನ್ ಡಿಸೋಜ ಹೋಟೆಲ್‌ಗಳಿಗೆ ಪೂರೈಕೆಯಾಗದ ವಾಣಿಜ್ಯ ಬಳಕೆಯ ಅನಿಲ ಸಿಲಿಂಡರ್ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಅಗತ್ಯವಿರುವಷ್ಟು ವಾಣಿಜ್ಯ ಬಳಕೆಯ ಅನಿಲ…

17 mins ago

ಮಂಡ್ಯ ಜಿಲ್ಲೆಯ 307 ಗ್ರಾಮಗಳಲ್ಲಿ ನೀರಿನ ಸಮಸ್ಯೆ

ಖಾಸಗಿ ಬೋರ್‌ವೆಲ್‌ಗಳನ್ನು ವಶಕ್ಕೆ ಪಡೆದು ನೀರು ಪೂರೈಸಲು ಜಿಲ್ಲಾಡಳಿತ ನಿರ್ಧಾರ ಮಂಡ್ಯ: ಪಂಚ ನದಿಗಳು ಹರಿಯುವ ಮಂಡ್ಯ ಜಿಲ್ಲೆಯಲ್ಲಿ ಬೇಸಿಗೆ…

21 mins ago

ಚಾಮುಂಡಿ ವಿಹಾರದಲ್ಲಿರುವ ಈಜುಕೊಳಕ್ಕೆ ಹೈಟೆಕ್ ಸ್ಪರ್ಶ!

ಚಿರಂಜೀವಿ ಸಿ.ಹುಲ್ಲಹಳ್ಳಿ ದಸರಾ ವೇಳೆ ಆರಂಭವಾಗಿದ್ದ ಕಾಮಗಾರಿ ಈಗ ಪೂರ್ಣ; ಈಜು ಸ್ಪರ್ಧೆಗಳು ಆರಂಭ ಮೈಸೂರು: ನಗರದ ಚಾಮುಂಡಿವಿಹಾರ ಕ್ರೀಡಾಂಗಣದಲ್ಲಿರುವ…

26 mins ago

ರಸ್ತೆಗೆ ಹರಿಯುತ್ತಿರುವ ಒಳಚರಂಡಿ ಕೊಳಚೆ ನೀರು

೬ ತಿಂಗಳಿಂದ ಪರಿಹಾರವಾಗದ ಸಮಸ್ಯೆ; ರಾಮಕೃಷ್ಣನಗರ ‘ಐ’ ಬ್ಲಾಕ್ ನಿವಾಸಿಗಳಿಗೆ ನರಕಯಾತನೆ ಮೈಸೂರು: ರಾಮಕೃಷ್ಣನಗರ ‘ಐ’ ಬ್ಲಾಕ್‌ನ ೨ನೇ ಮುಖ್ಯರಸ್ತೆಯಲ್ಲಿ…

30 mins ago

ನಾಮಪತ್ರ ಭರಾಟೆ

ಬೆಂಗಳೂರು: ರಾಜ್ಯದಲ್ಲಿ ಬೇಸಿಗೆಯ ಬಿಸಿಲಿನ ಝಳ ಏರುತ್ತಿರುವಾಗಲೇ ಉಪಚುನಾವಣೆಯ ಕಾವೂ ಏರತೊಡಗಿದ್ದು, ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ…

39 mins ago