ಚಿತ್ರ ಮಂಜರಿ

ಜೂ. ‘ಎನ್‌ಟಿಆರ್‌’ ಅಭಿನಯದ ದೇವರ ಸಿನಿಮಾ ಬಿಡುಗಡೆ ದಿನಾಂಕ ಮುಂದೂಡಿಕೆ : ಚಿತ್ರ ಬಿಡುಗಡೆ ಯಾವಾಗ!

ತೆಲಂಗಾಣ : ಜೂನಿಯರ್ ಎನ್‌.ಟಿ.ಆರ್‌ ವಿವಿಧ ಪಾತ್ರಗಳಲ್ಲಿ ಅಭಿನಯ ಮಾಡುವ ಮೂಲಕ ಪ್ಯಾನ್‌ ಇಂಡಿಯಾದಲ್ಲಿ ಮಿಂಚಿದ್ದಾರೆ. ಅವರ ಮುಂದಿನ ಸಿನಿಮಾದ ಬಗ್ಗೆ ಕುತೂಹಲವೂ ಅಷ್ಟೇ ಹೆಚ್ಚಾಗಿದೆ. ಇವರು ಕೊರಟಾಲ ಶಿವ ಅವರೊಂದಿಗೆ ʼದೇವರʼ ಸಿನಿಮಾದಲ್ಲಿ ಅಭಿನಯ ಮಾಡುತ್ತಿದಾರೆ.

ಸಿನಿಮಾ ಅನೌನ್ಸ್‌ ಆದ ದಿನದಿಂದ ದೊಡ್ಡಮಟ್ಟದಲ್ಲಿ ಸದ್ದು ಮಾಡಿದೆ. ಸಿನಿಮಾದಲ್ಲಿ ಬಾಲಿವುಡ್‌ ನಟಿ ಜಾಹ್ನವಿ ಕಪೂರ್‌, ನಟ ಸೈಫ್‌ ಅಲಿಖಾನ್‌ ಅವರು ಪ್ರಧಾನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವುದರಿಂದ ಬಿಟೌನ್‌ ಸಿನಿಮಂದಿಗೂ ʼದೇವರʼ ಸಿನಿಮಾ ಕುತೂಹಲ ಹುಟ್ಟಿಸಿದೆ. ಎರಡು ಭಾಗದಲ್ಲಿ ʼದೇವರʼ ತೆರೆ ಕಾಣಲಿದೆ.

ಮೊದಲ ಭಾಗ ಇದೇ ಏಪ್ರಿಲ್‌ 5 ರಂದು ರಿಲೀಸ್‌ ಮಾಡುವ ಯೋಜನೆಯನ್ನು ಚಿತ್ರತಂಡ ಹಾಕಿಕೊಂಡಿತ್ತು. ಆದರೆ ಇದೀಗ ಸಿನಿಮಾ ಅಂದುಕೊಂಡ ದಿನಕ್ಕೆ ತೆರೆಗೆ ಬರುವುದಿಲ್ಲ ʼಪಿಂಕ್‌ ವಿಲ್ಲಾʼ ವರದಿ ಮಾಡಿದೆಯಾಗಿದೆ.

“ದೇವರ ಸಿನಿಮಾಗೆ ವಿಎಫ್‌ ಎಕ್ಸ್‌ ಕೆಲಸ ಹೆಚ್ಚಿದೆ. ಔಟ್‌ ಪುಟ್‌ ಬರಲು ನಿರೀಕ್ಷೆಗಿಂತ ಹೆಚ್ಚಿನ ಸಮಯ ಬೇಕಾಗುತ್ತದೆ. ಈ ಕಾರಣದಿಂದ ಚಿತ್ರತಂಡ ಈ ವಿಚಾರದಲ್ಲಿ ಯಾವುದೇ ರಾಜಿ ಮಾಡಿಕೊಳ್ಳದೆ.

ಅಂದುಕೊಂಡ ದಿನಕ್ಕೆ (ಏ.5 ರಂದು) ರಿಲೀಸ್‌ ಮಾಡದಿರಲು ನಿರ್ಧರಿಸಿದೆ” ಎಂದು ಮೂಲಗಳು ಹೇಳಿರುವುದಾಗಿ ʼಪಿಂಕ್‌ ವಿಲ್ಲಾʼ ವರದಿ ಮಾಡಿದೆ.”ಇನ್ನು ಕೂಡ 20 ದಿನದ ಚಿತ್ರೀಕರಣ ಬಾಕಿಯಿದೆ.

ಇದಲ್ಲದೆ ಸೈಫ್‌ ಅಲಿಖಾನ್‌ ಅವರಿಗೆ ಭುಜದ ಶಸ್ತ್ರ ಚಿಕಿತ್ಸೆಯಾಗಿದ್ದು, ಚಿತ್ರೀಕರಣ ಇನ್ನಷ್ಟು ತಡವಾಗುವ ಸಾಧ್ಯತೆಯಿದೆ. ಈ ಕಾರಣದಿಂದ ರಿಸ್ಕ್‌ ತೆಗದುಕೊಳ್ಳದೆ ಸಿನಿಮಾ ರಿಲೀಸ್‌ ದಿನವನ್ನು ಮುಂದೂಡಲಾಗಿದೆ.

ಸಿನಿಮಾ 2024 ರ ದ್ವಿತೀಯಾರ್ಧದಲ್ಲಿ ತೆರೆ ಕಾಣಲಿದೆ” ಎಂದು ಮೂಲಗಳು ಹೇಳಿರುವುದಾಗಿ ವರದಿ ತಿಳಿಸಿದೆಯಾಗಿದೆ.

andolanait

Recent Posts

ಚಿರತೆ ಸೆರೆ | ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

ಗುಂಡ್ಲುಪೇಟೆ : ತಾಲ್ಲೂಕಿನ ಬರಗಿ ಗ್ರಾಮದ ಜಮೀನುಗಳಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸಿ ಕೊಂದುಹಾಕಿದ್ದ ವಿಚಾರವಾಗಿ ಅರಣ್ಯ ಇಲಾಖೆ ಚಿರತೆ…

42 mins ago

ಮೈಸೂರಲ್ಲಿ ಡ್ರಗ್ಸ್‌ ಉತ್ಪಾದನೆ ಶಂಕೆ : ಓರ್ವನ ಬಂಧನ

ಮೈಸೂರು : ಬುಧವಾರವಷ್ಟೇ ಹೆಬ್ಬಾಳ್‌ನಲ್ಲಿ ಶೆಡ್‌ವೊಂದರ ಮೇಲೆ ದಾಳಿ ನಡೆಸಿದ್ದ ಎನ್‌ಸಿಬಿ ಪೊಲೀಸರು, ಮಾದಕ ವಸ್ತು ಮಾರಾಟ ಆರೋಪ ಪ್ರಕರಣದಲ್ಲಿ…

56 mins ago

ತೇಗದ ಮರ ಅಕ್ರಮ ಕಟಾವು : ಓರ್ವ ಬಂಧನ

ಹನೂರು : ತಾಲ್ಲೂಕಿನ ಬಿ.ಆರ್.ಟಿ ಹುಲಿ ಸಂರಕ್ಷಿತ ಪ್ರದೇಶದ ಬೈಲೂರು ವನ್ಯಜೀವಿ ವಲಯ ವ್ಯಾಪ್ತಿಯಲ್ಲಿ ಅಕ್ರಮವಾಗಿ ತೇಗದ ಮರಗಳನ್ನು ಕಟಾವು…

1 hour ago

ಮೈಸೂರು ವಿ.ವಿ | ಯುಜಿಸಿ ಉದ್ದೇಶಿತ ಹೊಸ ನಿಯಾಮವಳಿ ಜಾರಿಗೆ ಒತ್ತಾಯ

ಮೈಸೂರು : ವಿಶ್ವವಿದ್ಯಾನಿಲಯಗಳ ಕ್ಯಾಂಪಸ್‌ನಲ್ಲಿ ಜಾತಿ, ಧರ್ಮ,ಲಿಂಗ ಆಧಾರಿತ ಶೋಷಣೆಯನ್ನು ತಡೆಗಟ್ಟಲು ಯುಜಿಸಿಯ ಉದ್ದೇಶಿತ ಹೊಸ ನಿಯಮಾವಳಿಗಳ ಜಾರಿಗೆ ಒತ್ತಾಯಿಸಿ…

2 hours ago

ಸರ್ಕಾರಿ ನೌಕರರಿಗೆ ತಿಂಗಳಿಗೊಮ್ಮೆ ಖಾದಿ ಧಿರಿಸು ಕಡ್ಡಾಯ

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಖಾದಿ ಬಟ್ಟೆ ಬಳಕೆ ಕಡ್ಡಾಯಗೊಳಿಸಲಾಗಿದೆ. ಪ್ರತಿ ತಿಂಗಳ ಮೊದಲ ಶನಿವಾರ ಖಾದಿ ಬಟ್ಟೆ…

3 hours ago

ಕ್ಯಾಂಪಸ್‌ಗಳಲ್ಲಿ ಜಾತಿ ತಾರತಮ್ಯ : ಯುಜಿಸಿ ನಿಯಮಾವಳಿಗೆ ʻಸುಪ್ರೀಂʼ ತಡೆ

ಹೊಸದಿಲ್ಲಿ : ಮಹತ್ವದ ಬೆಳವಣಿಗೆಯಲ್ಲಿ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಹೊಸ ನಿಯಮಗಳಿಗೆ ಸರ್ವೋಚ್ಚ ನ್ಯಾಯಾಲಯ ತಡೆ ನೀಡಿದೆ. ವಿಶ್ವವಿದ್ಯಾಲಯ…

3 hours ago