ತೆಲಂಗಾಣ : ಜೂನಿಯರ್ ಎನ್.ಟಿ.ಆರ್ ವಿವಿಧ ಪಾತ್ರಗಳಲ್ಲಿ ಅಭಿನಯ ಮಾಡುವ ಮೂಲಕ ಪ್ಯಾನ್ ಇಂಡಿಯಾದಲ್ಲಿ ಮಿಂಚಿದ್ದಾರೆ. ಅವರ ಮುಂದಿನ ಸಿನಿಮಾದ ಬಗ್ಗೆ ಕುತೂಹಲವೂ ಅಷ್ಟೇ ಹೆಚ್ಚಾಗಿದೆ. ಇವರು ಕೊರಟಾಲ ಶಿವ ಅವರೊಂದಿಗೆ ʼದೇವರʼ ಸಿನಿಮಾದಲ್ಲಿ ಅಭಿನಯ ಮಾಡುತ್ತಿದಾರೆ.
ಸಿನಿಮಾ ಅನೌನ್ಸ್ ಆದ ದಿನದಿಂದ ದೊಡ್ಡಮಟ್ಟದಲ್ಲಿ ಸದ್ದು ಮಾಡಿದೆ. ಸಿನಿಮಾದಲ್ಲಿ ಬಾಲಿವುಡ್ ನಟಿ ಜಾಹ್ನವಿ ಕಪೂರ್, ನಟ ಸೈಫ್ ಅಲಿಖಾನ್ ಅವರು ಪ್ರಧಾನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವುದರಿಂದ ಬಿಟೌನ್ ಸಿನಿಮಂದಿಗೂ ʼದೇವರʼ ಸಿನಿಮಾ ಕುತೂಹಲ ಹುಟ್ಟಿಸಿದೆ. ಎರಡು ಭಾಗದಲ್ಲಿ ʼದೇವರʼ ತೆರೆ ಕಾಣಲಿದೆ.
ಮೊದಲ ಭಾಗ ಇದೇ ಏಪ್ರಿಲ್ 5 ರಂದು ರಿಲೀಸ್ ಮಾಡುವ ಯೋಜನೆಯನ್ನು ಚಿತ್ರತಂಡ ಹಾಕಿಕೊಂಡಿತ್ತು. ಆದರೆ ಇದೀಗ ಸಿನಿಮಾ ಅಂದುಕೊಂಡ ದಿನಕ್ಕೆ ತೆರೆಗೆ ಬರುವುದಿಲ್ಲ ʼಪಿಂಕ್ ವಿಲ್ಲಾʼ ವರದಿ ಮಾಡಿದೆಯಾಗಿದೆ.
“ದೇವರ ಸಿನಿಮಾಗೆ ವಿಎಫ್ ಎಕ್ಸ್ ಕೆಲಸ ಹೆಚ್ಚಿದೆ. ಔಟ್ ಪುಟ್ ಬರಲು ನಿರೀಕ್ಷೆಗಿಂತ ಹೆಚ್ಚಿನ ಸಮಯ ಬೇಕಾಗುತ್ತದೆ. ಈ ಕಾರಣದಿಂದ ಚಿತ್ರತಂಡ ಈ ವಿಚಾರದಲ್ಲಿ ಯಾವುದೇ ರಾಜಿ ಮಾಡಿಕೊಳ್ಳದೆ.
ಅಂದುಕೊಂಡ ದಿನಕ್ಕೆ (ಏ.5 ರಂದು) ರಿಲೀಸ್ ಮಾಡದಿರಲು ನಿರ್ಧರಿಸಿದೆ” ಎಂದು ಮೂಲಗಳು ಹೇಳಿರುವುದಾಗಿ ʼಪಿಂಕ್ ವಿಲ್ಲಾʼ ವರದಿ ಮಾಡಿದೆ.”ಇನ್ನು ಕೂಡ 20 ದಿನದ ಚಿತ್ರೀಕರಣ ಬಾಕಿಯಿದೆ.
ಇದಲ್ಲದೆ ಸೈಫ್ ಅಲಿಖಾನ್ ಅವರಿಗೆ ಭುಜದ ಶಸ್ತ್ರ ಚಿಕಿತ್ಸೆಯಾಗಿದ್ದು, ಚಿತ್ರೀಕರಣ ಇನ್ನಷ್ಟು ತಡವಾಗುವ ಸಾಧ್ಯತೆಯಿದೆ. ಈ ಕಾರಣದಿಂದ ರಿಸ್ಕ್ ತೆಗದುಕೊಳ್ಳದೆ ಸಿನಿಮಾ ರಿಲೀಸ್ ದಿನವನ್ನು ಮುಂದೂಡಲಾಗಿದೆ.
ಸಿನಿಮಾ 2024 ರ ದ್ವಿತೀಯಾರ್ಧದಲ್ಲಿ ತೆರೆ ಕಾಣಲಿದೆ” ಎಂದು ಮೂಲಗಳು ಹೇಳಿರುವುದಾಗಿ ವರದಿ ತಿಳಿಸಿದೆಯಾಗಿದೆ.
ನಂಜನಗೂಡು : ಹಾಡಾ ಹಗಲೇ ಜನನಿಬಿಡ ಪ್ರದೇಶದಲ್ಲಿ ನಿಲ್ಲಿಸಿದ್ದ ಸ್ಕೂಟಿಯಿಂದ ಹಣ ಕದ್ದ ಘಟನೆ ಪಟ್ಟಣದ ಮಿನಿ ವಿಧಾನಸೌಧದ ಬಳಿ…
ಮೈಸೂರು : ದಸರಾ ವಸ್ತು ಪ್ರದರ್ಶನವನ್ನು ಜಾಗತಿಕ ಮಟ್ಟದಲ್ಲಿ ಮತ್ತಷ್ಟು ಆಕರ್ಷಣೀಯವಾಗಿಸಲು ಕರ್ನಾಟಕ ಪ್ರದರ್ಶನ ಪ್ರಾಧಿಕಾರವು ವಸ್ತು ಪ್ರದರ್ಶನ ಆವರಣವನ್ನು…
ಬೆಂಗಳೂರು: ಇಂದಿನಿಂದ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆ ರಾಜ್ಯದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ…
ಮೈಸೂರು: ಇಂದು ಆಷಾಢ ಮಾಸದ ಮೊದಲ ಶುಕ್ರವಾರದ ಸಂಭ್ರಮ ಮನೆಮಾಡಿದ್ದು, ನಾಡ ಅಧಿದೇವತೆ ಚಾಮುಂಡೇಶ್ವರಿಗೆ ಮಹಾಲಕ್ಷ್ಮೀ ಅಲಂಕಾರ ಮಾಡಲಾಗಿದೆ. ಇಡೀ…
ಈ ವರ್ಷ ನಾಡ ಹಬ್ಬ ದಸರಾದಲ್ಲಿ ಕಂಬಳ ಕ್ರೀಡೆಯನ್ನು ಆಯೋಜಿಸಲು ಸರ್ಕಾರ ಹಠಕ್ಕೆ ಬಿದ್ದಂತೆ ವರ್ತಿಸುತ್ತಿದೆ. ಈಗಾಗಲೇ ಸಾರ್ವಜನಿಕರು ಹಾಗೂ…
ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ನೆಲೆಸಿರುವ ನಾಡದೇವತೆ ಶ್ರೀ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆಯಲು ಪ್ರತಿ ವರ್ಷ ಆಷಾಢ ಮಾಸದ ಶುಕ್ರವಾರಗಳಂದು…