ತೆಲಂಗಾಣ : ಜೂನಿಯರ್ ಎನ್.ಟಿ.ಆರ್ ವಿವಿಧ ಪಾತ್ರಗಳಲ್ಲಿ ಅಭಿನಯ ಮಾಡುವ ಮೂಲಕ ಪ್ಯಾನ್ ಇಂಡಿಯಾದಲ್ಲಿ ಮಿಂಚಿದ್ದಾರೆ. ಅವರ ಮುಂದಿನ ಸಿನಿಮಾದ ಬಗ್ಗೆ ಕುತೂಹಲವೂ ಅಷ್ಟೇ ಹೆಚ್ಚಾಗಿದೆ. ಇವರು ಕೊರಟಾಲ ಶಿವ ಅವರೊಂದಿಗೆ ʼದೇವರʼ ಸಿನಿಮಾದಲ್ಲಿ ಅಭಿನಯ ಮಾಡುತ್ತಿದಾರೆ.
ಸಿನಿಮಾ ಅನೌನ್ಸ್ ಆದ ದಿನದಿಂದ ದೊಡ್ಡಮಟ್ಟದಲ್ಲಿ ಸದ್ದು ಮಾಡಿದೆ. ಸಿನಿಮಾದಲ್ಲಿ ಬಾಲಿವುಡ್ ನಟಿ ಜಾಹ್ನವಿ ಕಪೂರ್, ನಟ ಸೈಫ್ ಅಲಿಖಾನ್ ಅವರು ಪ್ರಧಾನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವುದರಿಂದ ಬಿಟೌನ್ ಸಿನಿಮಂದಿಗೂ ʼದೇವರʼ ಸಿನಿಮಾ ಕುತೂಹಲ ಹುಟ್ಟಿಸಿದೆ. ಎರಡು ಭಾಗದಲ್ಲಿ ʼದೇವರʼ ತೆರೆ ಕಾಣಲಿದೆ.
ಮೊದಲ ಭಾಗ ಇದೇ ಏಪ್ರಿಲ್ 5 ರಂದು ರಿಲೀಸ್ ಮಾಡುವ ಯೋಜನೆಯನ್ನು ಚಿತ್ರತಂಡ ಹಾಕಿಕೊಂಡಿತ್ತು. ಆದರೆ ಇದೀಗ ಸಿನಿಮಾ ಅಂದುಕೊಂಡ ದಿನಕ್ಕೆ ತೆರೆಗೆ ಬರುವುದಿಲ್ಲ ʼಪಿಂಕ್ ವಿಲ್ಲಾʼ ವರದಿ ಮಾಡಿದೆಯಾಗಿದೆ.
“ದೇವರ ಸಿನಿಮಾಗೆ ವಿಎಫ್ ಎಕ್ಸ್ ಕೆಲಸ ಹೆಚ್ಚಿದೆ. ಔಟ್ ಪುಟ್ ಬರಲು ನಿರೀಕ್ಷೆಗಿಂತ ಹೆಚ್ಚಿನ ಸಮಯ ಬೇಕಾಗುತ್ತದೆ. ಈ ಕಾರಣದಿಂದ ಚಿತ್ರತಂಡ ಈ ವಿಚಾರದಲ್ಲಿ ಯಾವುದೇ ರಾಜಿ ಮಾಡಿಕೊಳ್ಳದೆ.
ಅಂದುಕೊಂಡ ದಿನಕ್ಕೆ (ಏ.5 ರಂದು) ರಿಲೀಸ್ ಮಾಡದಿರಲು ನಿರ್ಧರಿಸಿದೆ” ಎಂದು ಮೂಲಗಳು ಹೇಳಿರುವುದಾಗಿ ʼಪಿಂಕ್ ವಿಲ್ಲಾʼ ವರದಿ ಮಾಡಿದೆ.”ಇನ್ನು ಕೂಡ 20 ದಿನದ ಚಿತ್ರೀಕರಣ ಬಾಕಿಯಿದೆ.
ಇದಲ್ಲದೆ ಸೈಫ್ ಅಲಿಖಾನ್ ಅವರಿಗೆ ಭುಜದ ಶಸ್ತ್ರ ಚಿಕಿತ್ಸೆಯಾಗಿದ್ದು, ಚಿತ್ರೀಕರಣ ಇನ್ನಷ್ಟು ತಡವಾಗುವ ಸಾಧ್ಯತೆಯಿದೆ. ಈ ಕಾರಣದಿಂದ ರಿಸ್ಕ್ ತೆಗದುಕೊಳ್ಳದೆ ಸಿನಿಮಾ ರಿಲೀಸ್ ದಿನವನ್ನು ಮುಂದೂಡಲಾಗಿದೆ.
ಸಿನಿಮಾ 2024 ರ ದ್ವಿತೀಯಾರ್ಧದಲ್ಲಿ ತೆರೆ ಕಾಣಲಿದೆ” ಎಂದು ಮೂಲಗಳು ಹೇಳಿರುವುದಾಗಿ ವರದಿ ತಿಳಿಸಿದೆಯಾಗಿದೆ.
ನವದೆಹಲಿ: ಸೆಪ್ಟೆಂಬರ್ 5ರಂದು ದೆಹಲಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಮೆರವಣಿಗೆಯನ್ನು ಹಿಂಪಡೆಯಲಾಗಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ (CJP) ಸುಪ್ರೀಂ ಕೋರ್ಟ್ಗೆ…
ನವದೆಹಲಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಫ್ಐಆರ್ ಅನ್ನು ಸುಪ್ರೀಂಕೋರ್ಟ್ ರದ್ದುಪಡಿಸಿದೆ. ಜುಲೈನಲ್ಲಿ…
ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ ಮುಂದುವರಿದಿದ್ದು, ಮೃತರ ಸಂಖ್ಯೆ 939ಕ್ಕೆ ಏರಿಕೆಯಾಗಿದೆ. ಇನ್ನೂ ಸುಮಾರು 4 ಸಾವಿರ ಜನರು…
ಮಡಿಕೇರಿ: ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.…
ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್ ಕಲ್ಲುಬಂಡೆ ಆತಂಕ ಮೂಡಿಸಿದೆ. ಮಡಿಕೇರಿ ತಾಲೂಕಿನ ಕುಂದಚೇರಿ ಗ್ರಾಮದ ಪೊಲಮಾನಿ…
ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…