ಚಿತ್ರ ಮಂಜರಿ

ನ್ಯಾಯ ಅಂದ್ರೆ ನ್ಯಾಯ.. ಜೈ ಆಂಜನೇಯ: ರಮ್ಯಾಗೆ ರಿಷಬ್ -ರಾಜ್ ಟಾಂಗ್!

ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಸಿನಿಮಾದಲ್ಲಿ ತನ್ನ ಅನುಮತಿ ಇಲ್ಲದೆ ಸಿನಿಮಾಗಳಲ್ಲಿ ನನ್ನ ದೃಶ್ಯಗಳನ್ನು ಬಳಸಿಕೊಳ್ಳಲಾಗಿದೆ ಎಂದು ರಮ್ಯಾ ಸಲ್ಲಿಸಿದ್ದ ಅರ್ಜಿಯನ್ನು ಕಮರ್ಶಿಯಲ್ ಕೋರ್ಟ್ ವಜಾ ಮಾಡಿತ್ತು. ಹೀಗಾಗಿ ಸಿನಿಮಾ ರಿಲೀಸ್ ಆಗುತ್ತಿದೆ. ತೀರ್ಪು ಬರುತ್ತಿದ್ದಂತೆ ರಿಷಬ್ ಶೆಟ್ಟಿ ಹಾಗೂ ರಾಜ್ ಬಿ ಶೆಟ್ಟಿ ಸಂತಸ ಹೊರಹಾಕಿದ್ದಾರೆ.

ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಸಿನಿಮಾ ಇಂದು  ರಿಲೀಸ್ ಆಗಿದೆ. ಈ ಚಿತ್ರದ ಬಗ್ಗೆ ಅಭಿಮಾನಿಗಳು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಈ ಸಿನಿಮಾಗೆ ಇದ್ದ ವಿಘ್ನ ಗುರುವಾರ (ಜುಲೈ 20) ಕೊನೆಯಾಗಿತ್ತು. ರಮ್ಯಾ ಸಲ್ಲಿಸಿದ್ದ ಅರ್ಜಿಯನ್ನು ಕಮರ್ಶಿಯಲ್ ಕೋರ್ಟ್ ವಜಾ ಮಾಡಿತ್ತು. ಹೀಗಾಗಿ ಸಿನಿಮಾ ರಿಲೀಸ್ ಆಗುತ್ತಿದೆ.

ತೀರ್ಪು ಬರುತ್ತಿದ್ದಂತೆ ರಿಷಬ್ ಶೆಟ್ಟಿ ಹಾಗೂ ರಾಜ್ ಬಿ ಶೆಟ್ಟಿ ಸಂತಸ ಹೊರಹಾಕಿದ್ದಾರೆ. ‘ನ್ಯಾಯ ಅಂದ್ರೆ ನ್ಯಾಯ ಜೈ ಆಂಜನೇಯ’ ಎಂದು ರಿಷಬ್ ಟ್ವೀಟ್ ಮಾಡಿದ್ದಾರೆ. ರಾಜ್ ಬಿ ಶೆಟ್ಟಿ ಅವರು, ‘ಬನ್ನಿ ಬನ್ನಿ ಎಲ್ಲೆಲ್ಲಿ ಬೆಂಕಿ ಬೀಳುತ್ತೆ ನೋಡೋಣ’ ಎಂದಿದ್ದಾರೆ. ಈ ಪೋಸ್ಟ್ ವೈರಲ್ ಆಗುತ್ತಿದೆ.

ನಿತಿನ್​ ಕೃಷ್ಣಮೂರ್ತಿ ಅವರು ‘ಹಾಸ್ಟೆಲ್​ ಹುಡುಗರು ಬೇಕಾಗಿದ್ದಾರೆ’ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ಅಜನೀಶ್​ ಬಿ. ಲೋಕನಾಥ್​ ಅವರು ಸಂಗೀತ ನೀಡಿದ್ದಾರೆ. ಅರವಿಂದ್​ ಎಸ್​. ಕಶ್ಯಪ್​ ಛಾಯಾಗ್ರಹಣ ಮಾಡಿದ್ದಾರೆ. ರಕ್ಷಿತ್​ ಶೆಟ್ಟಿ ಅವರು ‘ಪರಂವಾ ಪಿಕ್ಚರ್ಸ್​’ ಮೂಲಕ ಬಿಡುಗಡೆ ಮಾಡಲಿದ್ದಾರೆ.

ತನ್ನ ಅನುಮತಿ ಇಲ್ಲದೆ ಸಿನಿಮಾಗಳಲ್ಲಿ ನನ್ನ ದೃಶ್ಯಗಳನ್ನು ಬಳಸಿಕೊಳ್ಳಲಾಗಿದೆ” ಎಂದು ಕೋರ್ಟ್ ಮೆಟ್ಟಿಲೇರಿದ್ದ ನಟಿ ರಮ್ಯಾ ಅವರಿಗೆ ಹಿನ್ನಡೆಯಾಗಿದೆ. ಚಿತ್ರ ಬಿಡುಗಡೆಗೆ ಎರಡು ದಿನ ಬಾಕಿ ಇರುವಾಗಲೇ ರಮ್ಯಾ ಅವರು ಕಾನೂನಿನ ಮೊರೆ ಹೋಗಿದ್ದರು. ಇದು ಚಿತ್ರತಂಡಕ್ಕೂ ಅಚ್ಚರಿ ಮೂಡಿಸಿತ್ತು.

andolanait

Recent Posts

ಜಿಬಿಎಗೆ ಪಕ್ಷದ ಅಧ್ಯಕ್ಷರನ್ನು ನೇಮಕ ಮಾಡಿದ ಜೆಡಿಎಸ್‌

ಬೆಂಗಳೂರು: ಜೆಡಿಎಸ್‌ ಪಕ್ಷ ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ಚುನಾವಣೆಗೆ ತಯಾರಿ ನಡೆಸುತ್ತಿದ್ದು, ಜಿಬಿಎಗೆ ಪಕ್ಷದ ಅಧ್ಯಕ್ಷರನ್ನು ನೇಮಕ ಮಾಡಿ ಆದೇಶ…

26 mins ago

ಕಾಂಗ್ರೆಸ್ ಸರ್ಕಾರದಿಂದ ರಾಜ್ಯದ ಅಭಿವೃದ್ಧಿ ಶೂನ್ಯ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

ಗುಂಡ್ಲುಪೇಟೆ: ಪಂಚ ಗ್ಯಾರಂಟಿಗಳ ಘೋಷಣೆಯೊಂದಿಗೆ ಅಧಿಕಾರಕ್ಕೇರಿದ ಕಾಂಗ್ರೆಸ್ ಸರ್ಕಾರದಿಂದ ರಾಜ್ಯದ ಅಭಿವೃದ್ಧಿ ಸಂಪೂರ್ಣವಾಗಿ ಕುಸಿದಿದೆ. ಈ ನಡುವೆ ಗ್ಯಾರಂಟಿಗಳಿಂದ ಸರ್ಕಾರಕ್ಕೆ…

56 mins ago

ಸ್ಪೀಕರ್‌ ಆಫ್‌ ದಿ ನೆಸ್ಸೆಟ್‌ ಪದಕ ಪಡೆದ ಮೊದಲ ಜಾಗತಿಕ ನಾಯಕ ಪ್ರಧಾನಿ ನರೇಂದ್ರ ಮೋದಿ

ಇಸ್ರೇಲ್:‌ ಭಾರತ ಮತ್ತು ಇಸ್ರೇಲ್‌ ನಡುವಿನ ಕಾರ್ಯತಂತ್ರದ ಸಂಬಂಧಗಳನ್ನು ಬಲಪಡಿಸುವಲ್ಲಿ ಅಸಾಧಾರಣ ಕೊಡುಗೆಗಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬುಧವಾರ…

1 hour ago

ದಾಂಪತ್ಯ ಜೀವನಕ್ಕೆ ಕಾಲಿಟ್ಟ ವಿಜಯ್‌ ದೇವರಕೊಂಡ-ರಶ್ಮಿಕಾ ಮಂದಣ್ಣ

ಉದಯಪುರ: ಉದಯಪುರದ ಅರಮನೆಯಲ್ಲಿ ವಿಜಯ್‌ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಅವರು ಇಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಇಂದು ಬೆಳಿಗ್ಗೆ…

1 hour ago

ಮೈಸೂರು ರೇಷ್ಮೆಗೆ ದೊಡ್ಡ ಇತಿಹಾಸವಿದೆ: ಬಡಗಲಪುರ ನಾಗೇಂದ್ರ

ಮೈಸೂರು: ಪಟ್ಟಣದ ಸಿಲ್ಕ್ ಫಿಲೇಚರ್ ಆವರಣದಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗಿರುವ ಸರ್ಕಾರದ ನಿರ್ಧಾರಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಈ ಬಗ್ಗೆ…

2 hours ago

ಓದುಗರ ಪತ್ರ: ಬಜೆಟ್ ಪರಿಸರ ಸಂರಕ್ಷಣೆಗೆ ಒತ್ತು ನೀಡಲಿ

ಬಜೆಟ್ ಪೂರ್ವ ಸಭೆಯಲ್ಲಿ ಪ್ರಸ್ತಾಪಗೊಂಡ ಹಸಿರು ಗೋಡೆ ಯೋಜನೆ ರಾಜ್ಯದ ಪರಿಸರ ರಕ್ಷಣೆಗೆ ಆಪದ್ಬಾಂಧವನಂತಿದೆ. ಉತ್ತರ ಕರ್ನಾಟಕದಲ್ಲಿ ಮರುಭೂಮೀಕರಣ ತಡೆಗಟ್ಟಲು…

6 hours ago