ಚಿತ್ರ ಮಂಜರಿ

ನ್ಯಾಯ ಅಂದ್ರೆ ನ್ಯಾಯ.. ಜೈ ಆಂಜನೇಯ: ರಮ್ಯಾಗೆ ರಿಷಬ್ -ರಾಜ್ ಟಾಂಗ್!

ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಸಿನಿಮಾದಲ್ಲಿ ತನ್ನ ಅನುಮತಿ ಇಲ್ಲದೆ ಸಿನಿಮಾಗಳಲ್ಲಿ ನನ್ನ ದೃಶ್ಯಗಳನ್ನು ಬಳಸಿಕೊಳ್ಳಲಾಗಿದೆ ಎಂದು ರಮ್ಯಾ ಸಲ್ಲಿಸಿದ್ದ ಅರ್ಜಿಯನ್ನು ಕಮರ್ಶಿಯಲ್ ಕೋರ್ಟ್ ವಜಾ ಮಾಡಿತ್ತು. ಹೀಗಾಗಿ ಸಿನಿಮಾ ರಿಲೀಸ್ ಆಗುತ್ತಿದೆ. ತೀರ್ಪು ಬರುತ್ತಿದ್ದಂತೆ ರಿಷಬ್ ಶೆಟ್ಟಿ ಹಾಗೂ ರಾಜ್ ಬಿ ಶೆಟ್ಟಿ ಸಂತಸ ಹೊರಹಾಕಿದ್ದಾರೆ.

ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಸಿನಿಮಾ ಇಂದು  ರಿಲೀಸ್ ಆಗಿದೆ. ಈ ಚಿತ್ರದ ಬಗ್ಗೆ ಅಭಿಮಾನಿಗಳು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಈ ಸಿನಿಮಾಗೆ ಇದ್ದ ವಿಘ್ನ ಗುರುವಾರ (ಜುಲೈ 20) ಕೊನೆಯಾಗಿತ್ತು. ರಮ್ಯಾ ಸಲ್ಲಿಸಿದ್ದ ಅರ್ಜಿಯನ್ನು ಕಮರ್ಶಿಯಲ್ ಕೋರ್ಟ್ ವಜಾ ಮಾಡಿತ್ತು. ಹೀಗಾಗಿ ಸಿನಿಮಾ ರಿಲೀಸ್ ಆಗುತ್ತಿದೆ.

ತೀರ್ಪು ಬರುತ್ತಿದ್ದಂತೆ ರಿಷಬ್ ಶೆಟ್ಟಿ ಹಾಗೂ ರಾಜ್ ಬಿ ಶೆಟ್ಟಿ ಸಂತಸ ಹೊರಹಾಕಿದ್ದಾರೆ. ‘ನ್ಯಾಯ ಅಂದ್ರೆ ನ್ಯಾಯ ಜೈ ಆಂಜನೇಯ’ ಎಂದು ರಿಷಬ್ ಟ್ವೀಟ್ ಮಾಡಿದ್ದಾರೆ. ರಾಜ್ ಬಿ ಶೆಟ್ಟಿ ಅವರು, ‘ಬನ್ನಿ ಬನ್ನಿ ಎಲ್ಲೆಲ್ಲಿ ಬೆಂಕಿ ಬೀಳುತ್ತೆ ನೋಡೋಣ’ ಎಂದಿದ್ದಾರೆ. ಈ ಪೋಸ್ಟ್ ವೈರಲ್ ಆಗುತ್ತಿದೆ.

ನಿತಿನ್​ ಕೃಷ್ಣಮೂರ್ತಿ ಅವರು ‘ಹಾಸ್ಟೆಲ್​ ಹುಡುಗರು ಬೇಕಾಗಿದ್ದಾರೆ’ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ಅಜನೀಶ್​ ಬಿ. ಲೋಕನಾಥ್​ ಅವರು ಸಂಗೀತ ನೀಡಿದ್ದಾರೆ. ಅರವಿಂದ್​ ಎಸ್​. ಕಶ್ಯಪ್​ ಛಾಯಾಗ್ರಹಣ ಮಾಡಿದ್ದಾರೆ. ರಕ್ಷಿತ್​ ಶೆಟ್ಟಿ ಅವರು ‘ಪರಂವಾ ಪಿಕ್ಚರ್ಸ್​’ ಮೂಲಕ ಬಿಡುಗಡೆ ಮಾಡಲಿದ್ದಾರೆ.

ತನ್ನ ಅನುಮತಿ ಇಲ್ಲದೆ ಸಿನಿಮಾಗಳಲ್ಲಿ ನನ್ನ ದೃಶ್ಯಗಳನ್ನು ಬಳಸಿಕೊಳ್ಳಲಾಗಿದೆ” ಎಂದು ಕೋರ್ಟ್ ಮೆಟ್ಟಿಲೇರಿದ್ದ ನಟಿ ರಮ್ಯಾ ಅವರಿಗೆ ಹಿನ್ನಡೆಯಾಗಿದೆ. ಚಿತ್ರ ಬಿಡುಗಡೆಗೆ ಎರಡು ದಿನ ಬಾಕಿ ಇರುವಾಗಲೇ ರಮ್ಯಾ ಅವರು ಕಾನೂನಿನ ಮೊರೆ ಹೋಗಿದ್ದರು. ಇದು ಚಿತ್ರತಂಡಕ್ಕೂ ಅಚ್ಚರಿ ಮೂಡಿಸಿತ್ತು.

andolanait

Recent Posts

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

19 hours ago

ಓದುಗರ ಪತ್ರ: ಎಲ್‌ಇಡಿ ಪರದೆ ಮೂಲಕ ಚಾಮುಂಡಿ ದರ್ಶನ ಮಾಡಿಸಿ

ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…

19 hours ago

ಓದುಗರ ಪತ್ರ: ಪಾಲಿಕೆ ಆಯುಕ್ತರಾದ ಎಂ.ಕೆ. ಸವಿತಾ ನಡೆ ಶ್ಲಾಘನೀಯ

ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…

19 hours ago

ಓದುಗರ ಪತ್ರ: ಏನೇ ಓದಿದ್ದರೂ ಬೇಕು ಪಿಸಿ ಹುದ್ದೆ !

ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…

19 hours ago

ರವಿಯ ನೋಡ ಹೋಗಿ ಶಶಿಯ ಕಂಡುಬಂದೆ

ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್‌ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…

19 hours ago

ಕಾರ್ಗಿಲ್ ಕಾಲದ ಸುಬೇದಾರ್ ಹೈದರ್ ಮೈಸೂರಿನಲ್ಲಿದ್ದಾರೆ

ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…

19 hours ago