ಚಿತ್ರ ಮಂಜರಿ

ʼಕಾಟೇರʼನ ಅಬ್ಬರಕ್ಕೆ ಬಾಕ್ಸ್‌ ಆಫೀಸ್‌ ಧೂಳ್;‌ 2 ದಿನಗಳ ಕಲೆಕ್ಷನ್‌ ಘೋಷಣೆ

ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಹಾಗೂ ನಿರ್ದೇಶಕ ತರುಣ್ ಕಿಶೋರ್‌ ಸುಧೀರ್‌ ಕಾಂಬಿನೇಶನ್‌ನಲ್ಲಿ ಮೂಡಿ ಬಂದಿರುವ ಎರಡನೇ ಚಿತ್ರ ಕಾಟೇರ ಮೊನ್ನೆಯಷ್ಟೇ ( ಡಿಸೆಂಬರ್‌ 29 ) ಬಿಡುಗಡೆಗೊಂಡಿದ್ದು ನಿರೀಕ್ಷೆಗೂ ಮೀರಿ ಪ್ರೇಕ್ಷಕರಿಂದ ಪ್ರತಿಕ್ರಿಯೆ ಪಡೆದುಕೊಳ್ಳುತ್ತಿದೆ.

ಪ್ರೇಕ್ಷಕರ ವಿಮರ್ಶೆಯಲ್ಲಿ ಮಾತ್ರವಲ್ಲದೇ ಬಾಕ್ಸ್‌ ಆಫೀಸ್‌ ಗಳಿಕೆಯಲ್ಲಿಯೂ ಸಹ ಕಾಟೇರ ಅಬ್ಬರ ಜೋರಾಗಿದೆ. ಬಿಡುಗಡೆಯಾದ ದಿನ ಬರೋಬ್ಬರಿ 19.79 ಕೋಟಿ ಗಳಿಕೆ ಮಾಡುವ ಮೂಲಕ ಭರ್ಜರಿ ಓಪನಿಂಗ್‌ ಪಡೆದುಕೊಂಡಿದ್ದ ಚಿತ್ರ ಎರಡನೇ ದಿನವೂ ಎರಡಂಕೆ ಕಲೆಕ್ಷನ್ ಮಾಡುವಲ್ಲಿ ಯಶಸ್ವಿಯಾಗಿದೆ.

ಎರಡನೇ ದಿನ ಬಾಕ್ಸ್‌ ಆಫೀಸ್‌ನಲ್ಲಿ 17.35 ಕೋಟಿ ಗಳಿಕೆ ಮಾಡಿದ ಕಾಟೇರ ಮೊದಲೆರಡು ದಿನಗಳಲ್ಲಿ ಒಟ್ಟು 37.14 ಕೋಟಿ ಗಳಿಕೆ ಮಾಡಿದೆ ಎಂದು ಚಿತ್ರ ನಿರ್ಮಾಣ ಸಂಸ್ಥೆ ರಾಕ್‌ಲೈನ್‌ ಪ್ರೊಡಕ್ಷನ್ಸ್‌ ಟ್ವೀಟ್‌ ಮಾಡಿ ಅಧಿಕೃತವಾಗಿ ತಿಳಿಸಿದೆ. ಇನ್ನು ಇಂದು ( ಡಿಸೆಂಬರ್‌ 31 ) ಭಾನುವಾರ ಹಾಗೂ ನಾಳೆ ಹೊಸ ವರ್ಷದ ಸಂಭ್ರಮದಲ್ಲಿ ಸಿನಿ ರಸಿಕರು ಚಿತ್ರಮಂದಿರಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ತೆರಳಲಿದ್ದು, ಚಿತ್ರ 60 ಕೋಟಿ ಗಡಿ ದಾಟುವ ನಿರೀಕ್ಷೆ ಇದೆ. ಒಟ್ಟಿನಲ್ಲಿ ಈ ವರ್ಷ ಪೂರ್ತಿ ಪರ್ಫೆಕ್ಟ್‌ ಹಿಟ್‌ ಸಿನಿಮಾವಿಲ್ಲದೇ ಬರ ಎದುರಿಸಿದ್ದ ಕನ್ನಡ ಚಿತ್ರರಂಗದಲ್ಲಿ ಕಾಟೇರ ಭರ್ಜರಿ ಫಸಲು ಬೆಳೆದು ನಂಬರ್‌ ಒನ್‌ ಎನಿಸಿಕೊಂಡಿದ್ದಾನೆ.

andolana

Recent Posts

ಬಂಡೀಪುರ, ನಾಗರಹೊಳೆಯಲ್ಲಿ ಹಂತ ಹಂತವಾಗಿ ಸಫಾರಿ ಆರಂಭ : ಸಿಎಂ

ಬೆಂಗಳೂರು : ಬಂಡೀಪುರ ಮತ್ತು ನಾಗರಹೊಳೆಯಲ್ಲಿ ಹಂತ ಹಂತವಾಗಿ ಸಫಾರಿ ಆರಂಭಿಸಲು ಮತ್ತು ಧಾರಣಾ ಶಕ್ತಿ ಮತ್ತು ಹುಲಿಗಳು ನಾಡಿನತ್ತ…

5 hours ago

ಜ.5, 6ರಂದು ಸಿಎಂ ಸಿದ್ದರಾಮಯ್ಯ ಮೈಸೂರು ಪ್ರವಾಸ ; ತವರಲ್ಲಿ ಸಂಭ್ರಮ ಸಾಧ್ಯತೆ?

ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತವರು ಜಿಲ್ಲೆ ಮೈಸೂರಿನಲ್ಲಿ ಎರಡು ದಿನಗಳ ಕಾಲ ಪ್ರವಾಸ ಹಮ್ಮಿಕೊಂಡಿದ್ದಾರೆ. ಜ.5ರಂದು ಬೆಳಿಗ್ಗೆ…

5 hours ago

ಜ.4ರಂದು ʼಚಾ.ಬೆಟ್ಟಕ್ಕೆ ನಡಿಗೆʼ ಜಾಗೃತಿ ಜಾಥ ; ಬೆಂಬಲಿಸಲು ಮನವಿ

ಮೈಸೂರು : ಅರಮನೆ ನಗರಿ ಮೈಸೂರಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಚಾಮುಂಡಿಬೆಟ್ಟದ ಸಂರಕ್ಷಣೆ ಮತ್ತು ಉಳಿವಿಗಾಗಿ ಜ.4ರಂದು(ಭಾನುವಾರ) ಜಾಗೃತಿ ಆಂದೋಲನವನ್ನು…

5 hours ago

ದೇಶದ ಸ್ವಚ್ಛ ನಗರ ಇಂದೋರ್‌ನಲ್ಲಿ ಕಲುಷಿತ ನೀರು ಸೇವನೆಯಿಂದ 11 ಮಂದಿ ಸಾವು!

ಭೋಪಾಲ್ : ಇಂದೋರ್‌ನ ಭಗೀರಥಪುರದಲ್ಲಿ ಕಲುಷಿತ ಕುಡಿಯುವ ನೀರು ಸೇವನೆಯಿಂದ 11 ಜೀವಗಳು ಬಲಿಯಾಗಿವೆ. ಮತ್ತು 1400ಕ್ಕೂ ಹೆಚ್ಚು ನಿವಾಸಿಗಳ…

6 hours ago

ಬಳ್ಳಾರಿ ಘರ್ಷಣೆ | ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಯಲಿ ; ಬಿವೈವಿ ಆಗ್ರಹ

ಬೆಂಗಳೂರು : ಬ್ಯಾನರ್ ಕಟ್ಟುವ ವಿಷಯದಲ್ಲಿ ಕಳೆದ ರಾತ್ರಿ ಬಳ್ಳಾರಿ ನಗರದಲ್ಲಿ ನಡೆದ ಘಟನೆಯ ಕುರಿತು ಉಚ್ಚ ನ್ಯಾಯಾಲಯದ ಹಾಲಿ…

8 hours ago

ಬಳ್ಳಾರಿ ಘರ್ಷಣೆ | ಕೈ ಕಾರ್ಯಕರ್ತ ಸಾವು, ಘಟನೆ ಬಗ್ಗೆ ಸಿಎಂ ಹೇಳಿದ್ದೇನು?

ಬೆಂಗಳೂರು : ಬಳ್ಳಾರಿಯಲ್ಲಿ ಗುರುವಾರ ರಾತ್ರಿ ವಾಲ್ಮೀಕಿ  ಬ್ಯಾನರ್‌ ವಿಚಾರದಲ್ಲಿ ನಡೆದ ಎರಡು ಗುಂಪುಗಳ ಘರ್ಷಣೆ ವೇಳೆ ಫೈರಿಂಗ್‌ ಆಗಿ…

9 hours ago