ಚಿತ್ರ ಮಂಜರಿ

ʼಕಾಟೇರʼನ ಅಬ್ಬರಕ್ಕೆ ಬಾಕ್ಸ್‌ ಆಫೀಸ್‌ ಧೂಳ್;‌ 2 ದಿನಗಳ ಕಲೆಕ್ಷನ್‌ ಘೋಷಣೆ

ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಹಾಗೂ ನಿರ್ದೇಶಕ ತರುಣ್ ಕಿಶೋರ್‌ ಸುಧೀರ್‌ ಕಾಂಬಿನೇಶನ್‌ನಲ್ಲಿ ಮೂಡಿ ಬಂದಿರುವ ಎರಡನೇ ಚಿತ್ರ ಕಾಟೇರ ಮೊನ್ನೆಯಷ್ಟೇ ( ಡಿಸೆಂಬರ್‌ 29 ) ಬಿಡುಗಡೆಗೊಂಡಿದ್ದು ನಿರೀಕ್ಷೆಗೂ ಮೀರಿ ಪ್ರೇಕ್ಷಕರಿಂದ ಪ್ರತಿಕ್ರಿಯೆ ಪಡೆದುಕೊಳ್ಳುತ್ತಿದೆ.

ಪ್ರೇಕ್ಷಕರ ವಿಮರ್ಶೆಯಲ್ಲಿ ಮಾತ್ರವಲ್ಲದೇ ಬಾಕ್ಸ್‌ ಆಫೀಸ್‌ ಗಳಿಕೆಯಲ್ಲಿಯೂ ಸಹ ಕಾಟೇರ ಅಬ್ಬರ ಜೋರಾಗಿದೆ. ಬಿಡುಗಡೆಯಾದ ದಿನ ಬರೋಬ್ಬರಿ 19.79 ಕೋಟಿ ಗಳಿಕೆ ಮಾಡುವ ಮೂಲಕ ಭರ್ಜರಿ ಓಪನಿಂಗ್‌ ಪಡೆದುಕೊಂಡಿದ್ದ ಚಿತ್ರ ಎರಡನೇ ದಿನವೂ ಎರಡಂಕೆ ಕಲೆಕ್ಷನ್ ಮಾಡುವಲ್ಲಿ ಯಶಸ್ವಿಯಾಗಿದೆ.

ಎರಡನೇ ದಿನ ಬಾಕ್ಸ್‌ ಆಫೀಸ್‌ನಲ್ಲಿ 17.35 ಕೋಟಿ ಗಳಿಕೆ ಮಾಡಿದ ಕಾಟೇರ ಮೊದಲೆರಡು ದಿನಗಳಲ್ಲಿ ಒಟ್ಟು 37.14 ಕೋಟಿ ಗಳಿಕೆ ಮಾಡಿದೆ ಎಂದು ಚಿತ್ರ ನಿರ್ಮಾಣ ಸಂಸ್ಥೆ ರಾಕ್‌ಲೈನ್‌ ಪ್ರೊಡಕ್ಷನ್ಸ್‌ ಟ್ವೀಟ್‌ ಮಾಡಿ ಅಧಿಕೃತವಾಗಿ ತಿಳಿಸಿದೆ. ಇನ್ನು ಇಂದು ( ಡಿಸೆಂಬರ್‌ 31 ) ಭಾನುವಾರ ಹಾಗೂ ನಾಳೆ ಹೊಸ ವರ್ಷದ ಸಂಭ್ರಮದಲ್ಲಿ ಸಿನಿ ರಸಿಕರು ಚಿತ್ರಮಂದಿರಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ತೆರಳಲಿದ್ದು, ಚಿತ್ರ 60 ಕೋಟಿ ಗಡಿ ದಾಟುವ ನಿರೀಕ್ಷೆ ಇದೆ. ಒಟ್ಟಿನಲ್ಲಿ ಈ ವರ್ಷ ಪೂರ್ತಿ ಪರ್ಫೆಕ್ಟ್‌ ಹಿಟ್‌ ಸಿನಿಮಾವಿಲ್ಲದೇ ಬರ ಎದುರಿಸಿದ್ದ ಕನ್ನಡ ಚಿತ್ರರಂಗದಲ್ಲಿ ಕಾಟೇರ ಭರ್ಜರಿ ಫಸಲು ಬೆಳೆದು ನಂಬರ್‌ ಒನ್‌ ಎನಿಸಿಕೊಂಡಿದ್ದಾನೆ.

andolana

Recent Posts

ಹೂ ಮಳೆಗಾಗಿ ಕಾದಿರುವ ಕಾಫಿ ಬೆಳೆಗಾರರು

ನವೀನ್ ಡಿಸೋಜ ಕೆಲವೆಡೆ ಸ್ಪಿಂಕ್ಲರ್ ಮೊರೆ ಹೋದ ಕೃಷಿಕರು; ಮಳೆಯ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ…

52 mins ago

ಫೆ.26, 27ಕ್ಕೆ ಕಡಬೂರಿನಲ್ಲಿ ಶಿವ, ಗಣೇಶ ದೇವಸ್ಥಾನ ಲೋಕಾರ್ಪಣೆ

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಕಡಬೂರು ಗ್ರಾಮದಲ್ಲಿ ಫೆ.೨೬ ಮತ್ತು ೨೭ರಂದು ನೂತನವಾಗಿ ನಿರ್ಮಾಣವಾಗಿರುವ ಶಿವ ಮತ್ತು ಗಣೇಶ ದೇವಾಲಯದ…

57 mins ago

ಅವ್ಯವಸ್ಥೆಯಿಂದ ಕೂಡಿದ ಚರಂಡಿ ಕಾಮಗಾರಿ: ಆರೋಪ

ಮಂಜು ಕೋಟೆ ಕೋಟೆ: ಅಧಿಕಾರಿಗಳು, ಗುತ್ತಿಗೆದಾರರ ವಿರುದ್ಧ ಸಾರ್ವಜನಿಕರ ಆಕ್ರೋಶ ಎಚ್.ಡಿ.ಕೋಟೆ: ಅಧಿಕಾರಿಗಳ ಬೇಜವಾಬ್ದಾರಿ, ಗುತ್ತಿಗೆದಾರರ ನಿರ್ಲಕ್ಷ್ಯದಿಂದ ಲಕ್ಷಾಂತರ ರೂ.…

1 hour ago

ನಾ.ದಿವಾಕರ ಅವರ ವಾರದ ಅಂಕಣ: ಎಳೆ ಪ್ರತಿಭೆಗೆ ಸಾಕ್ಷಿಯಾದ ರಂಗ ಪ್ರಯೋಗ

ರಂಗಕಲೆಯ ಜೀವಂತಿಕೆಯನ್ನು ಕಾಪಾಡುವ ಹೊಣೆ ವಿಶಾಲ ಸಮಾಜದ ಮೇಲಿದೆ.  ನಾ.ದಿವಾಕರ ವರ್ತಮಾನದ ಸಂದರ್ಭದಲ್ಲಿ ನಮ್ಮ ಸಮಾಜ ಎದುರಿಸುತ್ತಿರುವ ಜಟಿಲ ಸಮಸ್ಯೆಗಳನ್ನು…

1 hour ago

ಶಂಕರಾಚಾರ್ಯರ ಬಂಧನಕ್ಕೆ ವೇದಿಕೆ ಸಿದ್ಧ!

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ‘ಧರ್ಮ ಯುದ್ಧ’ ಸಾರಿರುವ ಆದಿಗುರು ಶಂಕರಾಚಾರ್ಯರೇ ಸ್ಥಾಪನೆ ಮಾಡಿದ ಜ್ಯೋತಿರ್ ಪೀಠದ…

1 hour ago

ಮೊಬೈಲ್ ಮಿತ ಬಳಕೆ; ವಿದ್ಯಾರ್ಥಿಗಳ ಬಯಕೆ

ಶಾಲಾ-ಕಾಲೇಜುಗಳಲ್ಲಿ ಮೊಬೈಲ್ ಬಳಕೆ ನಿಷೇಧಕ್ಕೆ ಸರ್ಕಾರ ಚಿಂತನೆ ಹಿನ್ನೆಲೆ ವಿದ್ಯಾರ್ಥಿಗಳ ಮನದ ಮಾತು ಶಾಲಾ-ಕಾಲೇಜುಗಳಲ್ಲಿ ಮೊಬೈಲ್ ಬಳಕೆ ನಿಷೇಧಕ್ಕೆ ಸರ್ಕಾರ…

2 hours ago