ಚಿತ್ರ ಮಂಜರಿ

ʼಕಾಟೇರʼನ ಅಬ್ಬರಕ್ಕೆ ಬಾಕ್ಸ್‌ ಆಫೀಸ್‌ ಧೂಳ್;‌ 2 ದಿನಗಳ ಕಲೆಕ್ಷನ್‌ ಘೋಷಣೆ

ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಹಾಗೂ ನಿರ್ದೇಶಕ ತರುಣ್ ಕಿಶೋರ್‌ ಸುಧೀರ್‌ ಕಾಂಬಿನೇಶನ್‌ನಲ್ಲಿ ಮೂಡಿ ಬಂದಿರುವ ಎರಡನೇ ಚಿತ್ರ ಕಾಟೇರ ಮೊನ್ನೆಯಷ್ಟೇ ( ಡಿಸೆಂಬರ್‌ 29 ) ಬಿಡುಗಡೆಗೊಂಡಿದ್ದು ನಿರೀಕ್ಷೆಗೂ ಮೀರಿ ಪ್ರೇಕ್ಷಕರಿಂದ ಪ್ರತಿಕ್ರಿಯೆ ಪಡೆದುಕೊಳ್ಳುತ್ತಿದೆ.

ಪ್ರೇಕ್ಷಕರ ವಿಮರ್ಶೆಯಲ್ಲಿ ಮಾತ್ರವಲ್ಲದೇ ಬಾಕ್ಸ್‌ ಆಫೀಸ್‌ ಗಳಿಕೆಯಲ್ಲಿಯೂ ಸಹ ಕಾಟೇರ ಅಬ್ಬರ ಜೋರಾಗಿದೆ. ಬಿಡುಗಡೆಯಾದ ದಿನ ಬರೋಬ್ಬರಿ 19.79 ಕೋಟಿ ಗಳಿಕೆ ಮಾಡುವ ಮೂಲಕ ಭರ್ಜರಿ ಓಪನಿಂಗ್‌ ಪಡೆದುಕೊಂಡಿದ್ದ ಚಿತ್ರ ಎರಡನೇ ದಿನವೂ ಎರಡಂಕೆ ಕಲೆಕ್ಷನ್ ಮಾಡುವಲ್ಲಿ ಯಶಸ್ವಿಯಾಗಿದೆ.

ಎರಡನೇ ದಿನ ಬಾಕ್ಸ್‌ ಆಫೀಸ್‌ನಲ್ಲಿ 17.35 ಕೋಟಿ ಗಳಿಕೆ ಮಾಡಿದ ಕಾಟೇರ ಮೊದಲೆರಡು ದಿನಗಳಲ್ಲಿ ಒಟ್ಟು 37.14 ಕೋಟಿ ಗಳಿಕೆ ಮಾಡಿದೆ ಎಂದು ಚಿತ್ರ ನಿರ್ಮಾಣ ಸಂಸ್ಥೆ ರಾಕ್‌ಲೈನ್‌ ಪ್ರೊಡಕ್ಷನ್ಸ್‌ ಟ್ವೀಟ್‌ ಮಾಡಿ ಅಧಿಕೃತವಾಗಿ ತಿಳಿಸಿದೆ. ಇನ್ನು ಇಂದು ( ಡಿಸೆಂಬರ್‌ 31 ) ಭಾನುವಾರ ಹಾಗೂ ನಾಳೆ ಹೊಸ ವರ್ಷದ ಸಂಭ್ರಮದಲ್ಲಿ ಸಿನಿ ರಸಿಕರು ಚಿತ್ರಮಂದಿರಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ತೆರಳಲಿದ್ದು, ಚಿತ್ರ 60 ಕೋಟಿ ಗಡಿ ದಾಟುವ ನಿರೀಕ್ಷೆ ಇದೆ. ಒಟ್ಟಿನಲ್ಲಿ ಈ ವರ್ಷ ಪೂರ್ತಿ ಪರ್ಫೆಕ್ಟ್‌ ಹಿಟ್‌ ಸಿನಿಮಾವಿಲ್ಲದೇ ಬರ ಎದುರಿಸಿದ್ದ ಕನ್ನಡ ಚಿತ್ರರಂಗದಲ್ಲಿ ಕಾಟೇರ ಭರ್ಜರಿ ಫಸಲು ಬೆಳೆದು ನಂಬರ್‌ ಒನ್‌ ಎನಿಸಿಕೊಂಡಿದ್ದಾನೆ.

andolana

Recent Posts

ಪರಿಷತ್‌ ಚುನಾವಣೆ : ಕಾಂಗ್ರೆಸ್‌ನ ಐವರು, ಬಿಜೆಪಿಯ ಇಬ್ಬರ ಗೆಲುವು,

ಬೆಂಗಳೂರು : ಭಾರಿ ಕುತೂಹಲ ಮೂಡಿಸಿದ್ದ ವಿಧಾನ ಪರಿಷತ್​​ ಚುನಾವಣೆ ಫಲಿತಾಂಶ ಪ್ರಕಟಗೊಂಡಿದ್ದು, ಕಾಂಗ್ರೆಸ್​​ನ ಐವರು ಮತ್ತು ಬಿಜೆಪಿಯ ಎರಡು…

2 hours ago

ಪರಿಷತ್‌ ಚುನಾವಣೆ ; ಕಾಂಗ್ರೆಸ್‌ನ 5ನೇ ಅಭ್ಯರ್ಥಿಗೆ ಜಯ

ಬೆಂಗಳೂರು: ವಿಧಾನ ಪರಿಷತ್‌ ಚುನಾವಣೆಯಲ್ಲಿ ಕಾಂಗ್ರೆಸ್‌ನ ಐದನೇ ಅಭ್ಯರ್ಥಿ ವಿನಯ್‌ ಕಾರ್ತಿಕ್‌ ಜಯ ಸಾಧಿಸಿದ್ದಾರೆ. ಅಡ್ಡಮತದ ಪರಿಣಾಮ ಮೈತ್ರಿ ಅಭ್ಯರ್ಥಿ…

3 hours ago

ಪಿಎಫ್‌ಗೆ ಶೇ 8.25 ಬಡ್ಡಿದರ : ಕೇಂದ್ರ ಸರ್ಕಾರದ ಅನುಮೋದನೆ

ಹೊಸದಿಲ್ಲಿ : 2025-26ನೇ ಆರ್ಥಿಕ ಸಾಲಿನಡಿ ನೌಕರರ ಭವಿಷ್ಯ ನಿಧಿ ಠೇವಣಿಗಳಿಗೆ ಶೇ.8.25ರಷ್ಟಿ ಬಡ್ಡಿದರ ನೀಡಲು ಕೇಂದ್ರ ಸರ್ಕಾರವು ಒಪ್ಪಿಗೆ…

4 hours ago

ಕರ್ತವ್ಯ ಲೋಪ ; ಮಹಿಳಾ ಮತ್ತು ಮಕ್ಕಳ ಇಲಾಖೆ ಡಿಡಿ ಅಮಾನತ್ತು

ಚಾಮರಾಜನಗರ : ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಎಚ್.ಆರ್.ಸುರೇಶ್ ಅವರನ್ನು ಸೇವೆಯಿಂದ ಅಮಾನತ್ತು ಮಾಡಿ…

5 hours ago

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ರಾಜ್ಯದಲ್ಲಿ ಏಳು ದಿನ ಭಾರೀ ಮಳೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾದ ಪರಿಣಾಮ ರಾಜ್ಯದಲ್ಲಿ ಏಳು ದಿನ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…

9 hours ago

ಜೈಲಿನಲ್ಲಿ ಪವಿತ್ರಾಗೌಡಗೆ ರಾಜಾತಿಥ್ಯ ಆರೋಪ: ಸಂಧ್ಯಾ ನಾಗರಾಜ್‌ ವಿರುದ್ಧ ದೂರು

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಎ1 ಆರೋಪಿ ಪವಿತ್ರಾಗೌಡಗೆ ರಾಜಾತಿಥ್ಯ ನೀಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ.…

10 hours ago