ಚಿತ್ರ ಮಂಜರಿ

ಕೆಲಸ ತೊರೆದ ಮಹಿಳಾ ಬಸ್ ಚಾಲಕಿಗೆ ಕಾರು ಗಿಫ್ಟ್ ನೀಡಿದ ಕಮಲ್ ಹಾಸನ್!

ಕೊಯಮತ್ತೂರು: ಕಳೆದ ವಾರ ಡಿಎಂಕೆ ಸಂಸದೆ ಕನಿಮೋಳಿ ಅವರ ಪ್ರಯಾಣದ ವೇಳೆ ಟಿಕೆಟ್ ವಿಚಾರವಾಗಿ ಉಂಟಾದ ವಿವಾದ ಹಿನ್ನೆಲೆಯಲ್ಲಿ ತನ್ನ ಕೆಲಸಕ್ಕೆ ರಾಜೀನಾಮೆ ನೀಡಿದ್ದ ಮಹಿಳಾ ಬಸ್ ಚಾಲಕಿಗೆ ನಟ-ರಾಜಕಾರಣಿ ಕಮಲ್ ಹಾಸನ್ ಸೋಮವಾರ ಕಾರೊಂದನ್ನು ಉಡುಗೊರೆಯಾಗಿ ನೀಡಿದ್ದಾರೆ.

ನಗರದ ಮೊದಲ ಮಹಿಳಾ ಬಸ್ ಚಾಲಕಿಯಾಗಿರುವ ಶರ್ಮಿಳಾ ಅವರಿಗೆ ‘ಕಮಲ್ ಪನ್ಬಟ್ಟು ಮೈಯಂ’ (ಕಮಲ್ ಕಲ್ಚರಲ್ ಸೆಂಟರ್) ವತಿಯಿಂದ ಚಾಲಕ-ಉದ್ಯಮಿಯಾಗಲು ಅನುವು ಮಾಡಿಕೊಡಲು ಈ ಕಾರನ್ನು ನೀಡಲಾಗಿದೆ ಎಂದು ಮಕ್ಕಳ್ ನಿಧಿ ಮೈಯಂ  ಮುಖ್ಯಸ್ಥರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಆಕೆಯ ವಯಸ್ಸಿನ ಮಹಿಳೆಯರಿಗೆ ಉತ್ತಮ ಉದಾಹರಣೆಯಾಗಿದ್ದ ಶರ್ಮಿಳಾ ಕುರಿತ ಇತ್ತೀಚಿನ ಚರ್ಚೆಯ ಬಗ್ಗೆ ನಾನು ದುಃಖಿತನಾಗಿದ್ದೆ. ಶರ್ಮಿಳಾ ಕೇವಲ ಚಾಲಕಿಯಾಗಿ ಉಳಿಯಬಾರದು. ಅನೇಕ ಶರ್ಮಿಳಾರನ್ನು ಸೃಷ್ಟಿಸಬೇಕೆಂಬುದು ನನ್ನ ನಂಬಿಕೆ’. ಆಕೆ ಈಗ ಕಾರನ್ನು ಬಾಡಿಗೆ ಸೇವೆಗಾಗಿ ಬಳಸುತ್ತಾಳೆ ಮತ್ತು ಮುಂದೆ ಉದ್ಯಮಿಯಾಗುತ್ತಾಳೆ ಎಂದು ಅವರು ಹೇಳಿದ್ದಾರೆ.

ಕಳೆದ ವಾರ, ಶರ್ಮಿಳಾ ಚಲಾಯಿಸುತ್ತಿದ್ದ ಬಸ್‌ನಲ್ಲಿ ಗಾಂಧಿಪುರಂನಿಂದ ಕೊಯಮತ್ತೂರಿನ ಪೀಲಮೇಡುವಿಗೆ ಕನಿಮೊಳಿ ಪ್ರಯಾಣಿಸಿದ್ದರು. ಈ ವೇಳೆ ಅವರ ಬಳಿ ಟಿಕೆಟ್ ಇದ್ದರೂ ಡಿಎಂಕೆ ಸಂಸದರನ್ನು ಅವಮಾನಿಸಿದ ಹಿನ್ನೆಲೆಯಲ್ಲಿ ಕಂಡಕ್ಟರ್ ಜೊತೆಗೆ ವಾಗ್ವಾದ ನಡೆದಿತ್ತು. ಅಲ್ಲದೇ ಪ್ರಚಾರಕ್ಕಾಗಿ ಶರ್ಮಿಳಾ ಈ ರೀತಿ ಮಾಡಿದ್ದಾರೆ ಎಂಬ ಆರೋಪದ ನಂತರ ಚಾಲಕಿ ಹುದ್ದೆಗೆ ಅವರು ರಾಜೀನಾಮೆ ನೀಡಿದ್ದರು.

andolanait

Recent Posts

ಬನ್ನೇರುಘಟ್ಟ ಉದ್ಯಾನಕ್ಕೆ ಹೊಸ ಅತಿಥಿಯ ಆಗಮನ: ಮುದ್ದಾದ ಮರಿಗೆ ಜನ್ಮ ನೀಡಿದ ನೀರಾನೆ

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…

3 hours ago

‘ಬಿಡದಿ ಟೌನ್‌ಶಿಪ್ ವಿರುದ್ಧ ಕಾನೂನು ಹೋರಾಟ’: ಕೇಂದ್ರ ಬೃಹತ್ ಕೈಗಾರಿಕಾ ಖಾತೆ ಸಚಿವ ಎಚ್‌ಡಿಕೆ ಘೋಷಣೆ

ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್‌ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…

4 hours ago

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…

5 hours ago

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

6 hours ago

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

10 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

10 hours ago