ಕೊಯಮತ್ತೂರು: ಕಳೆದ ವಾರ ಡಿಎಂಕೆ ಸಂಸದೆ ಕನಿಮೋಳಿ ಅವರ ಪ್ರಯಾಣದ ವೇಳೆ ಟಿಕೆಟ್ ವಿಚಾರವಾಗಿ ಉಂಟಾದ ವಿವಾದ ಹಿನ್ನೆಲೆಯಲ್ಲಿ ತನ್ನ ಕೆಲಸಕ್ಕೆ ರಾಜೀನಾಮೆ ನೀಡಿದ್ದ ಮಹಿಳಾ ಬಸ್ ಚಾಲಕಿಗೆ ನಟ-ರಾಜಕಾರಣಿ ಕಮಲ್ ಹಾಸನ್ ಸೋಮವಾರ ಕಾರೊಂದನ್ನು ಉಡುಗೊರೆಯಾಗಿ ನೀಡಿದ್ದಾರೆ.
ನಗರದ ಮೊದಲ ಮಹಿಳಾ ಬಸ್ ಚಾಲಕಿಯಾಗಿರುವ ಶರ್ಮಿಳಾ ಅವರಿಗೆ ‘ಕಮಲ್ ಪನ್ಬಟ್ಟು ಮೈಯಂ’ (ಕಮಲ್ ಕಲ್ಚರಲ್ ಸೆಂಟರ್) ವತಿಯಿಂದ ಚಾಲಕ-ಉದ್ಯಮಿಯಾಗಲು ಅನುವು ಮಾಡಿಕೊಡಲು ಈ ಕಾರನ್ನು ನೀಡಲಾಗಿದೆ ಎಂದು ಮಕ್ಕಳ್ ನಿಧಿ ಮೈಯಂ ಮುಖ್ಯಸ್ಥರು ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಆಕೆಯ ವಯಸ್ಸಿನ ಮಹಿಳೆಯರಿಗೆ ಉತ್ತಮ ಉದಾಹರಣೆಯಾಗಿದ್ದ ಶರ್ಮಿಳಾ ಕುರಿತ ಇತ್ತೀಚಿನ ಚರ್ಚೆಯ ಬಗ್ಗೆ ನಾನು ದುಃಖಿತನಾಗಿದ್ದೆ. ಶರ್ಮಿಳಾ ಕೇವಲ ಚಾಲಕಿಯಾಗಿ ಉಳಿಯಬಾರದು. ಅನೇಕ ಶರ್ಮಿಳಾರನ್ನು ಸೃಷ್ಟಿಸಬೇಕೆಂಬುದು ನನ್ನ ನಂಬಿಕೆ’. ಆಕೆ ಈಗ ಕಾರನ್ನು ಬಾಡಿಗೆ ಸೇವೆಗಾಗಿ ಬಳಸುತ್ತಾಳೆ ಮತ್ತು ಮುಂದೆ ಉದ್ಯಮಿಯಾಗುತ್ತಾಳೆ ಎಂದು ಅವರು ಹೇಳಿದ್ದಾರೆ.
ಕಳೆದ ವಾರ, ಶರ್ಮಿಳಾ ಚಲಾಯಿಸುತ್ತಿದ್ದ ಬಸ್ನಲ್ಲಿ ಗಾಂಧಿಪುರಂನಿಂದ ಕೊಯಮತ್ತೂರಿನ ಪೀಲಮೇಡುವಿಗೆ ಕನಿಮೊಳಿ ಪ್ರಯಾಣಿಸಿದ್ದರು. ಈ ವೇಳೆ ಅವರ ಬಳಿ ಟಿಕೆಟ್ ಇದ್ದರೂ ಡಿಎಂಕೆ ಸಂಸದರನ್ನು ಅವಮಾನಿಸಿದ ಹಿನ್ನೆಲೆಯಲ್ಲಿ ಕಂಡಕ್ಟರ್ ಜೊತೆಗೆ ವಾಗ್ವಾದ ನಡೆದಿತ್ತು. ಅಲ್ಲದೇ ಪ್ರಚಾರಕ್ಕಾಗಿ ಶರ್ಮಿಳಾ ಈ ರೀತಿ ಮಾಡಿದ್ದಾರೆ ಎಂಬ ಆರೋಪದ ನಂತರ ಚಾಲಕಿ ಹುದ್ದೆಗೆ ಅವರು ರಾಜೀನಾಮೆ ನೀಡಿದ್ದರು.
ಬೆಂಗಳೂರು: ಬುದ್ಧ ಪೂರ್ಣಿಮೆಯ ಹಿನ್ನೆಲೆಯಲ್ಲಿ ನಾಳೆ(ಮೇ.1ರಂದು) ಬೆಂಗಳೂರು ನಗರದಾದ್ಯಂತ ಮಾಂಸ ಮಾರಾವನ್ನು ನಿಷೇಧಿಸಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಆದೇಶ ಹೊರಡಿಸಿದೆ.…
ಮೈಸೂರು: ಸಣ್ಣ ವಿಚಾರಕ್ಕೆ ಆರಂಭವಾದ ಕೌಟುಂಬಿಕ ಕಲಹವೊಂದು ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಮೈಸೂರಿನ ಹಳೆ ಕೆಸರೆ ಗ್ರಾಮದಲ್ಲಿ ನಡೆದಿದೆ. ಕೆಲಸ…
ವಾಷಿಂಗ್ಟನ್: ಅಮೇರಿಕಾ ಮತ್ತು ಇರಾನ್ ನಡುವಿನ ಮಿಲಿಟರಿ ಸಂಘರ್ಷ ಈಗ ನಿರ್ಣಾಯಕ ಘಟ್ಟಕ್ಕೆ ಬಂದು ತಲುಪಿದೆ. ಅಮೇರಿಕಾ ಅಧ್ಯಕ್ಷ ಡೊನಾಲ್ಡ್…
ಬೆಂಗಳೂರು: ರಾಜ್ಯದಲ್ಲಿ ಮೂರು ದಿನಗಳ ಕಾಲ ಭರ್ಜರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮೇ.1ರಂದು ರಾಯಚೂರು, ಕೊಪ್ಪಳ,…
ಚಾಮರಾಜನಗರ: ತಾಲ್ಲೂಕಿನ ಯಾಲಕ್ಕೂರು ಹಾಗೂ ಸುತ್ತಮುತ್ತಲಿನ ಆರು ಗ್ರಾಮಗಳಿಗೆ ಸಾರಿಗೆ ಬಸ್ಸೇ ಇಲ್ಲ ಎಂದು ‘ಆಂದೋಲನ ಪತ್ರಿಕೆ’ಯಲ್ಲಿ ಈಚೆಗೆ ಪ್ರಕಟವಾಗಿದ್ದ…
ಬಿಸಿಲಲ್ಲೋ ಅಣ್ಣ ಇದು ಬರಿ ಬಿಸಿಲಲ್ಲೋ ! ಯಾರು ಹೆಸರಿಟ್ಟರೋ? ಇದಕ್ಕೆ ‘ನಿಲ್ಲೋ ಎಲ್ಲೋ’ ನಿಂತಲ್ಲಿ ನಿಲ್ಲಲು, ಕುಂತಲ್ಲಿ ಕೂರಲು…