ಚಿತ್ರ ಮಂಜರಿ

ಕೆಲಸ ತೊರೆದ ಮಹಿಳಾ ಬಸ್ ಚಾಲಕಿಗೆ ಕಾರು ಗಿಫ್ಟ್ ನೀಡಿದ ಕಮಲ್ ಹಾಸನ್!

ಕೊಯಮತ್ತೂರು: ಕಳೆದ ವಾರ ಡಿಎಂಕೆ ಸಂಸದೆ ಕನಿಮೋಳಿ ಅವರ ಪ್ರಯಾಣದ ವೇಳೆ ಟಿಕೆಟ್ ವಿಚಾರವಾಗಿ ಉಂಟಾದ ವಿವಾದ ಹಿನ್ನೆಲೆಯಲ್ಲಿ ತನ್ನ ಕೆಲಸಕ್ಕೆ ರಾಜೀನಾಮೆ ನೀಡಿದ್ದ ಮಹಿಳಾ ಬಸ್ ಚಾಲಕಿಗೆ ನಟ-ರಾಜಕಾರಣಿ ಕಮಲ್ ಹಾಸನ್ ಸೋಮವಾರ ಕಾರೊಂದನ್ನು ಉಡುಗೊರೆಯಾಗಿ ನೀಡಿದ್ದಾರೆ.

ನಗರದ ಮೊದಲ ಮಹಿಳಾ ಬಸ್ ಚಾಲಕಿಯಾಗಿರುವ ಶರ್ಮಿಳಾ ಅವರಿಗೆ ‘ಕಮಲ್ ಪನ್ಬಟ್ಟು ಮೈಯಂ’ (ಕಮಲ್ ಕಲ್ಚರಲ್ ಸೆಂಟರ್) ವತಿಯಿಂದ ಚಾಲಕ-ಉದ್ಯಮಿಯಾಗಲು ಅನುವು ಮಾಡಿಕೊಡಲು ಈ ಕಾರನ್ನು ನೀಡಲಾಗಿದೆ ಎಂದು ಮಕ್ಕಳ್ ನಿಧಿ ಮೈಯಂ  ಮುಖ್ಯಸ್ಥರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಆಕೆಯ ವಯಸ್ಸಿನ ಮಹಿಳೆಯರಿಗೆ ಉತ್ತಮ ಉದಾಹರಣೆಯಾಗಿದ್ದ ಶರ್ಮಿಳಾ ಕುರಿತ ಇತ್ತೀಚಿನ ಚರ್ಚೆಯ ಬಗ್ಗೆ ನಾನು ದುಃಖಿತನಾಗಿದ್ದೆ. ಶರ್ಮಿಳಾ ಕೇವಲ ಚಾಲಕಿಯಾಗಿ ಉಳಿಯಬಾರದು. ಅನೇಕ ಶರ್ಮಿಳಾರನ್ನು ಸೃಷ್ಟಿಸಬೇಕೆಂಬುದು ನನ್ನ ನಂಬಿಕೆ’. ಆಕೆ ಈಗ ಕಾರನ್ನು ಬಾಡಿಗೆ ಸೇವೆಗಾಗಿ ಬಳಸುತ್ತಾಳೆ ಮತ್ತು ಮುಂದೆ ಉದ್ಯಮಿಯಾಗುತ್ತಾಳೆ ಎಂದು ಅವರು ಹೇಳಿದ್ದಾರೆ.

ಕಳೆದ ವಾರ, ಶರ್ಮಿಳಾ ಚಲಾಯಿಸುತ್ತಿದ್ದ ಬಸ್‌ನಲ್ಲಿ ಗಾಂಧಿಪುರಂನಿಂದ ಕೊಯಮತ್ತೂರಿನ ಪೀಲಮೇಡುವಿಗೆ ಕನಿಮೊಳಿ ಪ್ರಯಾಣಿಸಿದ್ದರು. ಈ ವೇಳೆ ಅವರ ಬಳಿ ಟಿಕೆಟ್ ಇದ್ದರೂ ಡಿಎಂಕೆ ಸಂಸದರನ್ನು ಅವಮಾನಿಸಿದ ಹಿನ್ನೆಲೆಯಲ್ಲಿ ಕಂಡಕ್ಟರ್ ಜೊತೆಗೆ ವಾಗ್ವಾದ ನಡೆದಿತ್ತು. ಅಲ್ಲದೇ ಪ್ರಚಾರಕ್ಕಾಗಿ ಶರ್ಮಿಳಾ ಈ ರೀತಿ ಮಾಡಿದ್ದಾರೆ ಎಂಬ ಆರೋಪದ ನಂತರ ಚಾಲಕಿ ಹುದ್ದೆಗೆ ಅವರು ರಾಜೀನಾಮೆ ನೀಡಿದ್ದರು.

andolanait

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

14 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

18 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

18 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

18 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

18 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

18 hours ago