ಕೊಯಮತ್ತೂರು: ಕಳೆದ ವಾರ ಡಿಎಂಕೆ ಸಂಸದೆ ಕನಿಮೋಳಿ ಅವರ ಪ್ರಯಾಣದ ವೇಳೆ ಟಿಕೆಟ್ ವಿಚಾರವಾಗಿ ಉಂಟಾದ ವಿವಾದ ಹಿನ್ನೆಲೆಯಲ್ಲಿ ತನ್ನ ಕೆಲಸಕ್ಕೆ ರಾಜೀನಾಮೆ ನೀಡಿದ್ದ ಮಹಿಳಾ ಬಸ್ ಚಾಲಕಿಗೆ ನಟ-ರಾಜಕಾರಣಿ ಕಮಲ್ ಹಾಸನ್ ಸೋಮವಾರ ಕಾರೊಂದನ್ನು ಉಡುಗೊರೆಯಾಗಿ ನೀಡಿದ್ದಾರೆ.
ನಗರದ ಮೊದಲ ಮಹಿಳಾ ಬಸ್ ಚಾಲಕಿಯಾಗಿರುವ ಶರ್ಮಿಳಾ ಅವರಿಗೆ ‘ಕಮಲ್ ಪನ್ಬಟ್ಟು ಮೈಯಂ’ (ಕಮಲ್ ಕಲ್ಚರಲ್ ಸೆಂಟರ್) ವತಿಯಿಂದ ಚಾಲಕ-ಉದ್ಯಮಿಯಾಗಲು ಅನುವು ಮಾಡಿಕೊಡಲು ಈ ಕಾರನ್ನು ನೀಡಲಾಗಿದೆ ಎಂದು ಮಕ್ಕಳ್ ನಿಧಿ ಮೈಯಂ ಮುಖ್ಯಸ್ಥರು ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಆಕೆಯ ವಯಸ್ಸಿನ ಮಹಿಳೆಯರಿಗೆ ಉತ್ತಮ ಉದಾಹರಣೆಯಾಗಿದ್ದ ಶರ್ಮಿಳಾ ಕುರಿತ ಇತ್ತೀಚಿನ ಚರ್ಚೆಯ ಬಗ್ಗೆ ನಾನು ದುಃಖಿತನಾಗಿದ್ದೆ. ಶರ್ಮಿಳಾ ಕೇವಲ ಚಾಲಕಿಯಾಗಿ ಉಳಿಯಬಾರದು. ಅನೇಕ ಶರ್ಮಿಳಾರನ್ನು ಸೃಷ್ಟಿಸಬೇಕೆಂಬುದು ನನ್ನ ನಂಬಿಕೆ’. ಆಕೆ ಈಗ ಕಾರನ್ನು ಬಾಡಿಗೆ ಸೇವೆಗಾಗಿ ಬಳಸುತ್ತಾಳೆ ಮತ್ತು ಮುಂದೆ ಉದ್ಯಮಿಯಾಗುತ್ತಾಳೆ ಎಂದು ಅವರು ಹೇಳಿದ್ದಾರೆ.
ಕಳೆದ ವಾರ, ಶರ್ಮಿಳಾ ಚಲಾಯಿಸುತ್ತಿದ್ದ ಬಸ್ನಲ್ಲಿ ಗಾಂಧಿಪುರಂನಿಂದ ಕೊಯಮತ್ತೂರಿನ ಪೀಲಮೇಡುವಿಗೆ ಕನಿಮೊಳಿ ಪ್ರಯಾಣಿಸಿದ್ದರು. ಈ ವೇಳೆ ಅವರ ಬಳಿ ಟಿಕೆಟ್ ಇದ್ದರೂ ಡಿಎಂಕೆ ಸಂಸದರನ್ನು ಅವಮಾನಿಸಿದ ಹಿನ್ನೆಲೆಯಲ್ಲಿ ಕಂಡಕ್ಟರ್ ಜೊತೆಗೆ ವಾಗ್ವಾದ ನಡೆದಿತ್ತು. ಅಲ್ಲದೇ ಪ್ರಚಾರಕ್ಕಾಗಿ ಶರ್ಮಿಳಾ ಈ ರೀತಿ ಮಾಡಿದ್ದಾರೆ ಎಂಬ ಆರೋಪದ ನಂತರ ಚಾಲಕಿ ಹುದ್ದೆಗೆ ಅವರು ರಾಜೀನಾಮೆ ನೀಡಿದ್ದರು.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…