ಚಿತ್ರ ಮಂಜರಿ

ರಮೇಶ್‌ ಅರವಿಂದ್‌ ಗೆ ಕನ್ನಡ ಕಲಾಭೂಷಣ ಪ್ರಶಸ್ತಿ

2023 ರ ಕರುನಾಡ ಸಂಭ್ರಮ ಕಾರ್ಯಕ್ರಮದ ಪ್ರಯುಕ್ತ ನಟ ರಮೇಶ್‌ ಅರವಿಂದ್‌ ಅವರು ಕನ್ನಡ ಕಲಾಭೂಷಣ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಜೆಕೆಜಿಎಸ್‌ ಟ್ರಸ್ಟ್‌ ವತಿಯಿಂದ ಪ್ರತಿವರ್ಷವೂ ಕೂಡ ಕರುನಾಡ ಸಂಭ್ರಮ ಕಾರ್ಯಕ್ರಮವನ್ನು ಆಚರಿಸಿಕೊಂಡು ಬರಲಾಗುತ್ತಿದ್ದು, ಇದೀಗ ಕರುನಾಡ ಸಂಭ್ರಮ 12 ನೇ ವರ್ಷಕ್ಕೆ ಕಾಲಿಟ್ಟಿದೆ. ಪ್ರತೀ ವರ್ಷದಂತೆ ಈ ವರ್ಷವೂ ಕೂಡ ವಿಶೇಷವಾಗಿ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ.
ಈ ಬಾರಿ ಬೆಂಗಳೂರಿನ ಶ್ರೀನಿವಾಸನಗರದ ಶಂಕರ್‌ ನಾಗ್‌ ವೃತ್ತದ ಬಳಿ ಇರುವ ಕೆಂಪೇಗೌಡ ಆಟದ ಮೈದಾನದಲ್ಲಿ ಕರುನಾಡ ಸಂಭ್ರಮ ಕಾರ್ಯಕ್ರಮ ಅದ್ಧೂರಿಯಾಗಿ ನಡೆಯಲಿದೆ.
ಪ್ರತಿ ಬಾರಿಯಂತೆ ಈ ಬಾರಿಯೂ ಕೂಡ ಬಹಳಾ ಅದ್ದೂರಿಯಾಗಿ ಕಾರ್ಯಕ್ರಮ ಆಯೋಜನೆ ಮಾಡಲಾಗಿದ್ದು, ವರುಣ್ ಸ್ಟುಡಿಯೋಸ್‌ ಹಾಗೂ ರಾಜ್‌ ಇವೆಂಟ್ಸ್‌ ಎರಡೂ ಜೊತೆಗೂಡಿ ಈ ಕಾರ್ಯಕ್ರಮವನ್ನು ವಹಿಹಿಸಿಕೊಂಡಿವೆ. ಎಂದಿನಂತೆ ಈ ಬಾರಿಯೂ ಕೂಡ ಕನ್ನಡ ಕಲಾ ಭೂಷಣ ಪ್ರಶಸ್ತಿಯನ್ನು ನೀಡಲಾಗುತ್ತಿದೆ. ಈ ಪ್ರಶಸ್ತಿಗೆ ಕನ್ನಡ ಚಿತ್ರರಂಗದ ಖ್ಯಾತ ನಟ ರಮೇಶ್‌ ಅರವಿಂದ್‌ ಅವರು ಆಯ್ಕೆ ಆಗಿದ್ದಾರೆ.
ಇನ್ನು ಈ ಕಾರ್ಯಕ್ರಮ ಡಿಸೆಂಬರ್‌ 14 ರಿಂದ 17 ರವರೆಗೆ ನಡೆಯಲಿದೆ. ಈಗಾಗಲೇ ಕಾರ್ಯಕ್ರಮದ ಸಿದ್ಧತೆ ಭರದಿಂದ ಸಾಗಿದೆ.
ಕಲರ್‌ ಫುಲ್‌ ಕಾರ್ಯಕ್ರಮ ಕರುನಾಡ ಸಂಭ್ರಮದಲ್ಲಿ ಸ್ಯಾಂಡಲ್‌ವುಡ್ ನಟ ನಟಿಯರು ಒಂದೆಡೆ ಸೇರಿ ಸಂಭ್ರಮಿಸಲಿದ್ದಾರೆ. ಕರುನಾಡ ಸಂಭ್ರಮದಲ್ಲಿ ಗಾಯಕ, ಸಂಗೀತ ನಿರ್ದೇಶಕ ಗುರುಕಿರಣ್‌, ರಾಜೇಶ್‌ ಕ್ರಿಷ್ಣನ್‌, ನವೀನ್‌ ಸಜ್ಜು ಅವರ ಗಾಯನ ಕಾರ್ಯಕ್ರಮದ ಮೆರುಗನ್ನು ದುಪ್ಪಟ್ಟು ಮಾಡಲಿದೆ.
ನಟ ರಮೇಶ್‌ ಅರವಿಂದ್‌, ಅಜಯ್‌ ರಾವ್‌, ಚಿಕ್ಕಣ್ಣ, ವಿಜಯರಾಘವೇಂದ್ರ, ಸತೀಶ್‌ ನೀನಾಸಂ ಸೇರಿದಂತೆ ಕನ್ನಡ ಚಿತ್ರರಂಗದ ಹಲವು ತಾರೆಯರು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.
lokesh

Recent Posts

ಟಿವಿಕೆ ಗೆಲುವು : ಹನೂರಲ್ಲಿ ಸಂಭ್ರಮಾಚರಣೆ

ಹನೂರು : ತಮಿಳುನಾಡಿನ ವಿಧಾನಸಭಾ ಚುನಾವಣೆಯಲ್ಲಿ ನಟ ವಿಜಯ್ ನೇತೃತ್ವದ ಟಿವಿಕೆ ಪಕ್ಷ ಹೆಚ್ಚಿನ ಸಂಖ್ಯೆಯಲ್ಲಿ ಜಯಗಳಿಸಿರುವುದಕ್ಕೆ ಕೆಂಪಯ್ಯನಹಟ್ಟಿ ಗ್ರಾಮದಲ್ಲಿ…

3 hours ago

ಪ.ಬಂಗಾಳ | ವಿಟೋ ಅಧಿಕಾರ ಬಳಸಿ ಮಂತ್ರಿಮಂಡಳ ವಿಸರ್ಜಿಸಿದ ರಾಜ್ಯಪಾಲ ; ದೀದಿಗೆ ಹಿನ್ನೆಡೆ

ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನ ಸಭಾ ಚುನಾವಣೆಯಲ್ಲಿ ತಮ್ಮ ಪಕ್ಷ ಬಹು ಮತ ಗಳಿಸದೇ ಸೋಲನ್ನು ಅನುಭವಿಸಿದರೂ ಮುಖ್ಯಮಂತ್ರಿ…

4 hours ago

ಹನೂರು | ಕಾಡು ಹಂದಿ ದಾಳಿ ; ರೈತನಿಗೆ ಗಂಭೀರ ಗಾಯ

ಹನೂರು : ತಾಲ್ಲೂಕಿನ ದಿನ್ನಳ್ಳಿ ರಸ್ತೆಯ ಸಮೀಪದ ಜಮೀನೊಂದರಲ್ಲಿ ಕಾಡು ಹಂದಿ ದಾಳಿ ನಡೆಸಿ ರೈತನಿಗೆ ಗಂಭೀರ ಗಾಯಗೊಳಿಸಿರುವ ಘಟನೆ…

4 hours ago

ಡಿಎಂಕೆ-ಎಐಎಡಿಎಂಕೆ ಮೈತ್ರಿ ವದಂತಿ ; ಸ್ಟಾಲಿನ್‌ ಹೇಳಿದ್ದೇನು?

ಚೆನ್ನೆ : ತಮಿಳುನಾಡಿನಲ್ಲಿ ಅತಂತ್ರ ಪರಿಸ್ಥಿತಿ ನಿರ್ಮಾಣವಾದ ಬೆನ್ನಲ್ಲೇ ಸರ್ಕಾರ ರಚನೆಯ ಕಸರತ್ತು ಜೋರಾಗಿದೆ. 108 ಸ್ಥಾನಗಳೊಂದಿಗೆ ಅತಿ ದೊಡ್ಡ…

4 hours ago

ಮೇಲು-ಕೀಳು ಕಳೆಯಲಿ ; ಸರ್ವರೂ ಒಂದೇ ಎಂಬ ಮನೋಭಾವ ಮೂಡಲಿ : ಮೋಹನ್‌ ಭಾಗವತ್‌

ಮೈಸೂರು : ಮೇಲು-ಕೀಳು ಎಂಬ ಮನೋಭಾವ ಕಳೆದು ಸರ್ವರೂ ಒಂದೇ ಎಂಬ ಏಕ ಭಾವ ಭಾರತೀಯರಲ್ಲಿ ಮೂಡಬೇಕು ಎಂದು ರಾಷ್ಟ್ರೀಯ…

4 hours ago

ಬೆಂಗಳೂರು ಕೈತಪ್ಪಿದ ಐಪಿಎಲ್‌ ಫೈನಲ್‌ ಪಂದ್ಯ : ಕೆಎಸ್‌ಸಿಎ ಹೇಳಿದ್ದೇನು?

ಬೆಂಗಳೂರು : ಇಂಡಿಯನ್‌ ಪ್ರೀಮಿಯರ್‌ ಲೀಗ್‌(ಐಪಿಎಲ್) 2026ರ ಫೈನಲ್ ಪಂದ್ಯವನ್ನು ಬೆಂಗಳೂರಿನಿಂದ ಅಧಿಕೃತವಾಗಿ ಸ್ಥಳಾಂತರಿಸಿದ ಕುರಿತು ಕರ್ನಾಟಕ ರಾಜ್ಯ ಕ್ರಿಕೆಟ್…

4 hours ago