ಚಿತ್ರ ಮಂಜರಿ

ರಮೇಶ್‌ ಅರವಿಂದ್‌ ಗೆ ಕನ್ನಡ ಕಲಾಭೂಷಣ ಪ್ರಶಸ್ತಿ

2023 ರ ಕರುನಾಡ ಸಂಭ್ರಮ ಕಾರ್ಯಕ್ರಮದ ಪ್ರಯುಕ್ತ ನಟ ರಮೇಶ್‌ ಅರವಿಂದ್‌ ಅವರು ಕನ್ನಡ ಕಲಾಭೂಷಣ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಜೆಕೆಜಿಎಸ್‌ ಟ್ರಸ್ಟ್‌ ವತಿಯಿಂದ ಪ್ರತಿವರ್ಷವೂ ಕೂಡ ಕರುನಾಡ ಸಂಭ್ರಮ ಕಾರ್ಯಕ್ರಮವನ್ನು ಆಚರಿಸಿಕೊಂಡು ಬರಲಾಗುತ್ತಿದ್ದು, ಇದೀಗ ಕರುನಾಡ ಸಂಭ್ರಮ 12 ನೇ ವರ್ಷಕ್ಕೆ ಕಾಲಿಟ್ಟಿದೆ. ಪ್ರತೀ ವರ್ಷದಂತೆ ಈ ವರ್ಷವೂ ಕೂಡ ವಿಶೇಷವಾಗಿ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ.
ಈ ಬಾರಿ ಬೆಂಗಳೂರಿನ ಶ್ರೀನಿವಾಸನಗರದ ಶಂಕರ್‌ ನಾಗ್‌ ವೃತ್ತದ ಬಳಿ ಇರುವ ಕೆಂಪೇಗೌಡ ಆಟದ ಮೈದಾನದಲ್ಲಿ ಕರುನಾಡ ಸಂಭ್ರಮ ಕಾರ್ಯಕ್ರಮ ಅದ್ಧೂರಿಯಾಗಿ ನಡೆಯಲಿದೆ.
ಪ್ರತಿ ಬಾರಿಯಂತೆ ಈ ಬಾರಿಯೂ ಕೂಡ ಬಹಳಾ ಅದ್ದೂರಿಯಾಗಿ ಕಾರ್ಯಕ್ರಮ ಆಯೋಜನೆ ಮಾಡಲಾಗಿದ್ದು, ವರುಣ್ ಸ್ಟುಡಿಯೋಸ್‌ ಹಾಗೂ ರಾಜ್‌ ಇವೆಂಟ್ಸ್‌ ಎರಡೂ ಜೊತೆಗೂಡಿ ಈ ಕಾರ್ಯಕ್ರಮವನ್ನು ವಹಿಹಿಸಿಕೊಂಡಿವೆ. ಎಂದಿನಂತೆ ಈ ಬಾರಿಯೂ ಕೂಡ ಕನ್ನಡ ಕಲಾ ಭೂಷಣ ಪ್ರಶಸ್ತಿಯನ್ನು ನೀಡಲಾಗುತ್ತಿದೆ. ಈ ಪ್ರಶಸ್ತಿಗೆ ಕನ್ನಡ ಚಿತ್ರರಂಗದ ಖ್ಯಾತ ನಟ ರಮೇಶ್‌ ಅರವಿಂದ್‌ ಅವರು ಆಯ್ಕೆ ಆಗಿದ್ದಾರೆ.
ಇನ್ನು ಈ ಕಾರ್ಯಕ್ರಮ ಡಿಸೆಂಬರ್‌ 14 ರಿಂದ 17 ರವರೆಗೆ ನಡೆಯಲಿದೆ. ಈಗಾಗಲೇ ಕಾರ್ಯಕ್ರಮದ ಸಿದ್ಧತೆ ಭರದಿಂದ ಸಾಗಿದೆ.
ಕಲರ್‌ ಫುಲ್‌ ಕಾರ್ಯಕ್ರಮ ಕರುನಾಡ ಸಂಭ್ರಮದಲ್ಲಿ ಸ್ಯಾಂಡಲ್‌ವುಡ್ ನಟ ನಟಿಯರು ಒಂದೆಡೆ ಸೇರಿ ಸಂಭ್ರಮಿಸಲಿದ್ದಾರೆ. ಕರುನಾಡ ಸಂಭ್ರಮದಲ್ಲಿ ಗಾಯಕ, ಸಂಗೀತ ನಿರ್ದೇಶಕ ಗುರುಕಿರಣ್‌, ರಾಜೇಶ್‌ ಕ್ರಿಷ್ಣನ್‌, ನವೀನ್‌ ಸಜ್ಜು ಅವರ ಗಾಯನ ಕಾರ್ಯಕ್ರಮದ ಮೆರುಗನ್ನು ದುಪ್ಪಟ್ಟು ಮಾಡಲಿದೆ.
ನಟ ರಮೇಶ್‌ ಅರವಿಂದ್‌, ಅಜಯ್‌ ರಾವ್‌, ಚಿಕ್ಕಣ್ಣ, ವಿಜಯರಾಘವೇಂದ್ರ, ಸತೀಶ್‌ ನೀನಾಸಂ ಸೇರಿದಂತೆ ಕನ್ನಡ ಚಿತ್ರರಂಗದ ಹಲವು ತಾರೆಯರು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.
lokesh

Recent Posts

ಬಿಡದಿ ಹೋರಾಟಕ್ಕೆ ಜೆನ್‌-ಝೀ ಗಳು ಬರಲಿ ; ದೇವನೂರು ಮಹದೇವ ಕರೆ

ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…

9 hours ago

ಕನ್ನಡ ಭಾಷ ಶಿಕ್ಷಕರ ಪ್ರತ್ಯೇಕ ನೇಮಕಕ್ಕೆ ಸರ್ಕಾರ ಅಸ್ತು ; ಸ್ವಾಗತಾರ್ಹ

ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್‌ಟಿಆರ್ ಹಾಗೂ ಎಚ್‌ಎಸ್‌ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…

12 hours ago

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

16 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

18 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

19 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

20 hours ago